AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ಪಾಡಿಗೆ ದುಃಖಿಸಲು ಬಿಟ್ಟುಬಿಡಿ:’; ಅಭಿಮಾನಿಗಳಲ್ಲಿ ಕೋರಿದ ಸಿದ್ದಾರ್ಥ್​ ಶುಕ್ಲಾ ಕುಟುಂಬ

ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿದ ಸಿದ್ದಾರ್ಥ್ ಶುಕ್ಲಾಗೆ ಅಪಾರ ಅಭಿಮಾನಿಗಳಿದ್ದಾರೆ. ಬಿಗ್ ಬಾಸ್ ಸೀಸನ್ 13ರಲ್ಲಿ ಸ್ಪರ್ಧಿಸಿ ಗೆದ್ದ ಬಳಿಕವಂತೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿತು. ಅವರೆಲ್ಲರೂ ಸಿದ್ದಾರ್ಥ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

‘ನಮ್ಮ ಪಾಡಿಗೆ ದುಃಖಿಸಲು ಬಿಟ್ಟುಬಿಡಿ:’; ಅಭಿಮಾನಿಗಳಲ್ಲಿ ಕೋರಿದ ಸಿದ್ದಾರ್ಥ್​ ಶುಕ್ಲಾ ಕುಟುಂಬ
ಸಿದ್ಧಾರ್ಥ್ ಶುಕ್ಲಾ
TV9 Web
| Edited By: |

Updated on: Sep 06, 2021 | 10:49 PM

Share

ಸಿದ್ದಾರ್ಥ್​ ಶುಕ್ಲಾ ಸಾವಿನ ಸುದ್ದಿಯನ್ನು ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ಇನ್ನೂ ಅರಗಿಸಿಕೊಳ್ಳೋಕೆ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಇಂದು ಸಿದ್ದಾರ್ಥ್​ ಶುಕ್ಲಾ ಮನೆಯಲ್ಲಿ ಶ್ರದ್ಧಾಂಜಲಿ ಸಭೆ ಆಯೋಜನೆ ಮಾಡಲಾಗಿತ್ತು. ಇದಾದ ಬೆನ್ನಲ್ಲೇ ಸಿದ್ದಾರ್ಥ್​ ಕುಟುಂಬ ಎಲ್ಲರ ಬಳಿ ವಿಶೇಷ ಮನವಿ ಮಾಡಿಕೊಂಡಿದ್ದು, ನಮ್ಮ ಪಾಡಿಗೆ ದುಃಖಿಸಲು ಬಿಟ್ಟುಬಿಡಿ ಎಂದು ಕೋರಿದೆ.

ಕಿರುತೆರೆಯ ಹಲವು ಧಾರಾವಾಹಿಗಳಲ್ಲಿ ನಟಿಸಿದ ಸಿದ್ದಾರ್ಥ್ ಶುಕ್ಲಾಗೆ ಅಪಾರ ಅಭಿಮಾನಿಗಳಿದ್ದಾರೆ. ಬಿಗ್ ಬಾಸ್ ಸೀಸನ್ 13ರಲ್ಲಿ ಸ್ಪರ್ಧಿಸಿ ಗೆದ್ದ ಬಳಿಕವಂತೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚಿತು. ಅವರೆಲ್ಲರೂ ಸಿದ್ದಾರ್ಥ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಈಗ ಸಿದ್ದಾರ್ಥ್ ಕುಟುಂಬದವರು ಆಯೋಜಿಸುತ್ತಿರುವ ಶ್ರದ್ಧಾಂಜಲಿ ಸಭೆಗೆ ಭಾಗವಹಿಸಲು ಎಲ್ಲ ಅಭಿಮಾನಿಗಳಿಗೆ ಅವಕಾಶ ನೀಡಲಾಗಿತ್ತು. ಜೂಮ್ ಮೀಟಿಂಗ್ ಮೂಲಕ ಅನೇಕರು ಪಾಲ್ಗೊಂಡಿದ್ದರು.

ಇದಾದ ಬೆನ್ನಲ್ಲೇ ಕುಟುಂಬ ಪತ್ರಿಕಾ ಪ್ರಟಣೆ ಹೊರಡಿಸಿದೆ. ‘ಸಿದ್ದಾರ್ಥ್ ಪಯಣದ ಭಾಗವಾಗಿರುವ ಮತ್ತು ಆತನಿಗೆ ಪ್ರೀತಿಯನ್ನು ನೀಡಿದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳು. ಅವನು ಈಗ ನಮ್ಮ ಹೃದಯದಲ್ಲಿ ಶಾಶ್ವತವಾಗಿ ವಾಸಿಸುತ್ತಿದ್ದಾನೆ. ಹೀಗಾಗಿ, ಇದು ಖಂಡಿತವಾಗಿಯೂ ಇಲ್ಲಿಗೆ ಮುಗಿಯುವುದಿಲ್ಲ. ನಮ್ಮ ಪಾಡಿಗೆ ದುಃಖಿಸಲು ಬಿಟ್ಟುಬಿಡಿ. ಮುಂಬೈ ಪೊಲೀಸರಿಗೆ ನಾವು ವಿಶೇಷ ಧನ್ಯವಾದ ಅರ್ಪಿಸುತ್ತಿದ್ದೇವೆ. ದಯವಿಟ್ಟು ಸಿದ್ದಾರ್ಥ್​ನನ್ನು ನಿಮ್ಮ ಆಲೋಚನೆ ಮತ್ತು ಪ್ರಾರ್ಥನೆಯಲ್ಲಿ ಇರಿಸಿಕೊಳ್ಳಿ. ಓಂ ಶಾಂತಿ’ ಎಂದು ಕುಟುಂಬದವರು ಬರೆದಿದ್ದಾರೆ.

ಸಿದ್ದಾರ್ಥ್ ಶುಕ್ಲಾ ಜೊತೆ ನಟಿ ಶೆಹನಾಜ್ ಗಿಲ್ ಹೆಚ್ಚು ಆಪ್ತವಾಗಿದ್ದರು. ಇಬ್ಬರ ನಡುವೆ ಪ್ರೀತಿ ಇತ್ತು ಎಂಬುದು ಕೂಡ ಈಗ ರಹಸ್ಯವಾಗಿ ಉಳಿದಿಲ್ಲ. ಸಿದ್ದಾರ್ಥ್ ನಿಧನದ ಬಳಿಕ ಶೆಹನಾಜ್ ಅವರು ಮಾನಸಿಕವಾಗಿ ಕುಸಿದುಹೋಗಿದ್ದಾರೆ. ಅವರು ಕೂಡ ಈ ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಳ್ಳುತ್ತಾರೋ ಇಲ್ಲವೋ ಎಂಬುದು ಇನ್ನೂ ಖಚಿತವಾಗಿಲ್ಲ.

ಇದನ್ನೂ ಓದಿ: ಮದುವೆ ಆಗದಿದ್ರೂ ಗಂಡ-ಹೆಂಡ್ತಿ ಥರ ಪವಿತ್ರವಾಗಿತ್ತು ಆ ಸಂಬಂಧ; ಸಿದ್ದಾರ್ಥ್​-ಶೆಹನಾಜ್​ ಬಗ್ಗೆ ಹೊರಬಿತ್ತು ಸುದ್ದಿ

ಸಿದ್ದಾರ್ಥ್​ ಶುಕ್ಲಾ ಶ್ರದ್ದಾಂಜಲಿ ಸಭೆ: ಅಭಿಮಾನಿಗಳಿಗೂ ಆಹ್ವಾನ ನೀಡಿದ ತಾಯಿ; ಇಲ್ಲಿದೆ ಮೀಟಿಂಗ್​ ಲಿಂಕ್​

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ