AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

66ನೇ ವರ್ಷಕ್ಕೆ ಪ್ರೆಗ್ನೆಂಟ್ ಆದ ನೀನಾ ಗುಪ್ತಾ? ಖುಷಿಯಾಗುತ್ತಿದೆ ಎಂದ ನಟಿ

ನೀನಾ ಗುಪ್ತಾ ಪ್ರೆಗ್ನೆಂಟ್ ಎಂಬ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸೀರೆ ದಪ್ಪವಾಗಿದ್ದ ಕಾರಣ ಹೊಟ್ಟೆ ದಪ್ಪವಾಗಿ ಕಾಣಿಸಿದೆ ಹೊರತು, ಯಾವುದೇ ಖುಷಿ ಸುದ್ದಿ ಇಲ್ಲ ಎಂದಿದ್ದಾರೆ. ಈ ವಯಸ್ಸಿನಲ್ಲಿ ಇಂತಹ ವದಂತಿ ಕೇಳಿ ಖುಷಿಯಾಗಿದೆ ಎಂದು ತಮಾಷೆ ಮಾಡಿದ್ದಾರೆ. ವಿವಾಹವಿಲ್ಲದೆ ಮಗು ಸಾಕಿದ ಅವರ ಹಿಂದಿನ ಜೀವನ ಅನೇಕರಿಗೆ ಸ್ಫೂರ್ತಿ.

66ನೇ ವರ್ಷಕ್ಕೆ ಪ್ರೆಗ್ನೆಂಟ್ ಆದ ನೀನಾ ಗುಪ್ತಾ? ಖುಷಿಯಾಗುತ್ತಿದೆ ಎಂದ ನಟಿ
ನೀನಾ ಗುಪ್ತಾ
ರಾಜೇಶ್ ದುಗ್ಗುಮನೆ
|

Updated on: Mar 13, 2026 | 7:02 AM

Share

ಇತ್ತೀಚೆಗೆ ಸೋಶಿಯಲ್ ಮೀಡಿಯಾ ತುಂಬಾನೇ ವೇಗ ಪಡೆದುಕೊಂಡಿದೆ. ಒಂದು ಸಣ್ಣ ಫೋಟೋದಿಂದ ದೊಡ್ಡ ವಿವಾದ ಹಾಗೂ ಗುಲ್ಲು ಹಬ್ಬಿ ಬಿಡುತ್ತದೆ. ಈಗ ನೀನಾ ಗುಪ್ತಾಗೂ (Neena Gupta) ಹಾಗೆಯೇ ಆಗಿದೆ. ಅವರು ಕಾರ್ಯಕ್ರಮ ಒಂದರಲ್ಲಿ ಕಾಣಿಸಿಕೊಂಡಾಗ, ಹೊಟ್ಟೆ ಹಿಡಿದುಕೊಂಡಿದ್ದರು. ಹೊಟ್ಟೆ ದೊಡ್ಡದಾಗಿ ಕಾಣಿಸುತ್ತಾ ಇತ್ತು. ಈ ಕಾರಣದಿಂದ ಅವರು ಪ್ರೆಗ್ನೆಂಟ್ ಎಂಬ ವಿಷಯ ಹಬ್ಬಿತ್ತು. ಇದಕ್ಕೆ ಉತ್ತರಿಸಿರೋ ಅವರು, ‘ನನಗೆ ಬೇಕಾಗಿರಿದೋ ಇಷ್ಟೇ, ನಿಜ ಜೀವನದ ಬಧಾಯಿ ಹೋ’ ಎಂದಿದ್ದಾರೆ.

‘ಯಾವುದೇ ಖುಷಿ ಸುದ್ದಿ ಇಲ್ಲ. ನಾನು ಪ್ರೆಗ್ನೆಂಟ್ ಅಲ್ಲ. ಅಸಲಿ ವಿಷಯ ಏನೆಂದರೆ ಸೀರೆಯ ಮಟೀರಿಯಲ್ ದಪ್ಪವಾಗಿತ್ತು. ಈ ಕಾರಣಕ್ಕೆ ಹೊಟ್ಟೆ ದಪ್ಪವಾಗಿ ಕಾಣಿಸುತ್ತಿತ್ತು. ಈ ವಯಸ್ಸಿನಲ್ಲಿ ನಾನು ಪ್ರೆಗ್ನೆಂಟ್ ಎಂಬ ವದಂತಿ ಹರಿದಾಡುತ್ತಿರುವುದನ್ನು ಕೇಳುತ್ತಿದ್ದರೆ ಖುಷಿಯಾಗುತ್ತಿದೆ. ನಾವು ಒಂದು ರಾಷ್ಟ್ರವಾಗಿ ವಿಕಸನಗೊಳ್ಳುತ್ತಿದ್ದೇವೆ ಎಂಬುದನ್ನು ಇದು ತೋರಿಸುತ್ತದೆ’ ಎಂದಿದ್ದಾರೆ ನೀನಾ.

ಇದನ್ನೂ ಓದಿ: ಮದುವೆ ಆಗದೆ ವಿವಿ ರಿಚರ್ಡ್​ರಿಂದ ಮಗು ಪಡೆದಿದ್ದ ನೀನಾ ಗುಪ್ತಾ

ನೀನಾ ಗುಪ್ತಾ ಅವರು ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರ ಹೈದರಾಬಾದ್ ರಿಸೆಪ್ಶನ್​ ಅಲ್ಲಿ ಭಾಗಿ ಆಗಿದ್ದರು. ಅವರು ಈವೆಂಟ್​​​ಗೆ ಬಂದು ಕ್ಯಾಮೆರಾಗಳಿಗೆ ಪೋಸ್ ನೀಡಿದ್ದರು. ಈ ಸಂದರ್ಭದ ವಿಡಿಯೋ ಇದಾಗಿದೆ. ಈ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಯಿತು. ಕೆಲವರು, ನಟಿಗೆ ಬೇಬಿ ಬಂಪ್ ಬಂದಿದೆ ಎಂದೆಲ್ಲ ಹೇಳಿದರು. ಈ ವಿಷಯ ನೀನಾ ಕಿವಿಗೂ ಬಿದ್ದಂತೆ ಇದೆ. ಹೀಗಾಗಿ, ಸ್ಪಷ್ಟನೆ ಕೊಟ್ಟಿದ್ದಾರೆ.

ನೀನಾ ಗುಪ್ತಾ ಅವರು ವಿವಾಹ ಆಗದೆ ಮಗು ಪಡೆದಿದ್ದಾರೆ. ಇದು ಎಲ್ಲರಿಗೂ ಗೊತ್ತಿರುವ ಸತ್ಯ. 1980ರಲ್ಲಿ ನೀನಾ ಗುಪ್ತಾ ಅವರು ವೆಸ್ಟ್ ಇಂಡೀಸ್​ನ ಅಂದಿನ ಸ್ಟಾರ್ ಕ್ರಿಕೆಟರ್ ವಿವಿಯನ್ ರಿಚರ್ಡ್ಸ್ ಜೊತೆ ರಿಲೇಶನ್​​ಶಿಪ್​​ನಲ್ಲಿದ್ದರು. ಇದರಿಂದ ಮಗು ಕೂಡ ಜನಿಸಿತು. ಆದರೆ, ರಿಚರ್ಡ್ ವಿವಾಹ ಆಗಲು ನಿರಾಕರಿಸಿದರು. ಮಗುವನ್ನು ದೂರ ಮಾಡದೇ ನೀನಾ ಸಾಕಲು ನಿರ್ಧರಿಸಿದರು. ಆಗಿನ ಸಮಾಜ ಇದನ್ನು ಅಷ್ಟಾಗಿ ಒಪ್ಪುತ್ತಿರಲಿಲ್ಲ. ಆದರೂ ನೀನಾ ಇದನ್ನು ಚಾಲೆಂಜ್ ಆಗಿ ತೆಗೆದುಕೊಂಡು ಮಗುವನ್ನು ಸಾಕಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು