ಪೇಪರ್ ಲೀಕ್ನಿಂದ ಪಾಸ್ ಆಗ್ತಿದ್ದ ಸಲ್ಮಾನ್ ಖಾನ್; ಹಳೆಯ ಹೇಳಿಕೆ ವೈರಲ್
ನೀಟ್ ಪೇಪರ್ ಲೀಕ್ ಪ್ರಕರಣದ ವಿರುದ್ಧ ಸಿಜೆಪಿ (CJP) ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟಕ್ಕೆ ಸಲ್ಮಾನ್ ಖಾನ್ ಬೆಂಬಲ ಸೂಚಿಸಿದ್ದಾರೆ. ಪೇಪರ್ ಲೀಕ್ ಅತ್ಯಂತ ಗಂಭೀರ ಸಮಸ್ಯೆ ಎಂದು ಅವರು ಹೇಳಿದ್ದಾರೆ. ಜುಲೈ 20 ರ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಗಾಯಗೊಂಡಿದ್ದಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಈ ಬೆಂಬಲದ ಬೆನ್ನಲ್ಲೇ ಸಲ್ಮಾನ್ ಖಾನ್ಗೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮುಖಭಂಗವಾಗಿದೆ. ಅವರ ಹಳೆಯ ವಿಡಿಯೋವೊಂದನ್ನು ನೆಟ್ಟಿಗರು ಈಗ ರೀ-ಶೇರ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.

ಮುಖ್ಯಾಂಶಗಳು
- ಸಲ್ಲು ಬೆಂಬಲದ ಬೆನ್ನಲ್ಲೇ ಹಳೆಯ ರಹಸ್ಯ ಬಯಲು
- ಹಳೆಯ ವಿಡಿಯೋವೊಂದರಿಂದ ಮುಖಭಂಗವಾಗಿದೆ
- ಕಪಿಲ್ ಶರ್ಮಾ ಶೋನಲ್ಲಿ ಹೇಳಿದ್ದ ಹಳೆಯ ವಿಡಿಯೋ ವೈರಲ್
ನೀಟ್ ಪೇಪರ್ ಲೀಕ್ ಪ್ರಕರಣದ ವಿರುದ್ಧ ಸಿಜೆಪಿ (CJP) ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟಕ್ಕೆ ಸಲ್ಮಾನ್ ಖಾನ್ ಬೆಂಬಲ ಸೂಚಿಸಿದ್ದಾರೆ. ಪೇಪರ್ ಲೀಕ್ ಅತ್ಯಂತ ಗಂಭೀರ ಸಮಸ್ಯೆ ಎಂದು ಅವರು ಹೇಳಿದ್ದಾರೆ. ಜುಲೈ 20 ರ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಗಾಯಗೊಂಡಿದ್ದಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಆದರೆ ಈ ಬೆಂಬಲದ ಬೆನ್ನಲ್ಲೇ ಸಲ್ಮಾನ್ ಖಾನ್ಗೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮುಖಭಂಗವಾಗಿದೆ. ಅವರ ಹಳೆಯ ವಿಡಿಯೋವೊಂದನ್ನು ನೆಟ್ಟಿಗರು ಈಗ ರೀ-ಶೇರ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.
ಸಲ್ಮಾನ್ ಖಾನ್ ಕಾಲೆಳೆದ ನೆಟ್ಟಿಗರು
ವಿದ್ಯಾರ್ಥಿಗಳ ಪರ ಬ್ಯಾಟಿಂಗ್ ಮಾಡಿದ ಬೆನ್ನಲ್ಲೇ ಸಲ್ಮಾನ್ ಖಾನ್ ಅವರ ಹಳೆಯ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಮುಂಚೂಣಿಗೆ ಬಂದಿದೆ. 2020 ರಲ್ಲಿ ‘ದಿ ಕಪಿಲ್ ಶರ್ಮಾ ಶೋ’ನಲ್ಲಿ ಸಲ್ಮಾನ್ ತಂದೆ ಸಲೀಂ ಖಾನ್ ಒಂದು ರಹಸ್ಯ ಬಿಚ್ಚಿಟ್ಟಿದ್ದರು. ಶಾಲಾ ದಿನಗಳಲ್ಲಿ ಸಲ್ಮಾನ್ ಖಾನ್ ಅವರಿಗೆ ಗಣೇಶ್ ಎಂಬಾತ ಲೀಕ್ ಆದ ಪ್ರಶ್ನೆ ಪತ್ರಿಕೆಗಳನ್ನು ತಂದುಕೊಡುತ್ತಿದ್ದ ಎಂದು ಸಲೀಂ ಖಾನ್ ತಮಾಷೆ ಮಾಡಿದ್ದರು. ಇದಕ್ಕೆ ಸಲ್ಮಾನ್ ಕೂಡ ನಗುತ್ತಲೇ ಒಪ್ಪಿಕೊಂಡಿದ್ದರು. ಈ ವಿಡಿಯೋ ಇಟ್ಟುಕೊಂಡು ನೆಟ್ಟಿಗರು ಸಲ್ಮಾನ್ ಅವರ ಡಬಲ್ ಸ್ಟ್ಯಾಂಡರ್ಡ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Salman Khan today: “Paper leak is a very serious issue”
Salim Khan on Kapil’s show: “Ganesh naam ke ladke ki sabse zyada izzat thi hamare ghar mein, kyoki PAPER LEAK hote the to woh Salman ko laake deta tha” 😭😭😭 https://t.co/yeXlInPJce pic.twitter.com/GubGJQid5j
— Raj (@idfcwau) July 22, 2026
ರಾಜಕೀಯ ಬಣ್ಣ ಬಳಿಯದಂತೆ ಸಲ್ಲು ಮನವಿ
ಸಲ್ಮಾನ್ ಖಾನ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ವಿದ್ಯಾರ್ಥಿಗಳ ಶಾಂತಿಯುತ ಹೋರಾಟವನ್ನು ಶ್ಲಾಘಿಸಿದ್ದಾರೆ. ‘ಇದು ವಿದ್ಯಾರ್ಥಿಗಳು ಮತ್ತು ಶಿಕ್ಷಣ ವ್ಯವಸ್ಥೆಯ ನಡುವಿನ ಹೋರಾಟ. ಇದನ್ನು ಯಾವುದೇ ರಾಜಕೀಯ ಪಕ್ಷಗಳು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳಬಾರದು’ ಎಂದು ಅವರು ಮನವಿ ಮಾಡಿದ್ದಾರೆ. ದೇಶದ ಶಿಕ್ಷಣ ವ್ಯವಸ್ಥೆ ಜಾಗತಿಕ ಮಟ್ಟಕ್ಕೆ ಬೆಳೆಯಬೇಕು ಎಂದು ಅವರು ಆಶಿಸಿದ್ದಾರೆ. ಆದರೆ ಹಳೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜನರು ಇಂಟರ್ನೆಟ್ನಲ್ಲಿ ಇವರ ಕಾಲೆಳೆಯುತ್ತಿದ್ದಾರೆ.
ಇದನ್ನೂ ಓದಿ: ನೀಟ್ ಪೇಪರ್ ಲೀಕ್ ಪ್ರತಿಭಟನೆಗೆ ಸಲ್ಮಾನ್ ಖಾನ್ ಬೆಂಬಲ; ಹಿಂಸಾಚಾರಕ್ಕೆ ಸಲ್ಲು ಬೇಸರ
ಏನಿದು ನೀಟ್ ಪೇಪರ್ ಲೀಕ್ ವಿವಾದ?
ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಿಂದಾಗಿ ದೇಶದ ಸುಮಾರು 20 ಲಕ್ಷ ವೈದ್ಯಕೀಯ ಅಭ್ಯರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗಿದೆ. ಈ ಬಿಕ್ಕಟ್ಟಿನಿಂದಾಗಿ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿಭಟನಾಕಾರರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಇದರೊಂದಿಗೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 10:46 am, Thu, 23 July 26




