AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಉದ್ಯಮಿಗೆ ಹೆಂಡತಿಯಾಗಿ ಇದ್ದರೆ ಸ್ಯಾಲರಿ ಕೊಡ್ತೀನಿ ಅಂದ್ರು’; ಕೆಲಸ ಇಲ್ಲದೆ ಗೋಳಾಡಿದ ನಟಿ

2010ರಿಂದ ಈಚೆಗೆ ಅವರಿಗೆ ಆಫರ್ ಕಡಿಮೆ ಆಯಿತು. ಅವರನ್ನು ಕೇವಲ ಸ್ಪೆಷಲ್ ಸಾಂಗ್​ಗೆ ಸೀಮಿತ ಮಾಡಲಾಯಿತು. ಈಗ ಕೈಯಲ್ಲಿ ಕೆಲಸ ಇಲ್ಲದೆ, ಹಣವೂ ಇಲ್ಲದೆ ಒದ್ದಾಡುತ್ತಿದ್ದಾರೆ.

‘ಆ ಉದ್ಯಮಿಗೆ ಹೆಂಡತಿಯಾಗಿ ಇದ್ದರೆ ಸ್ಯಾಲರಿ ಕೊಡ್ತೀನಿ ಅಂದ್ರು’; ಕೆಲಸ ಇಲ್ಲದೆ ಗೋಳಾಡಿದ ನಟಿ
ನೀತು ಚಂದ್ರ
TV9 Web
| Edited By: |

Updated on: Jul 13, 2022 | 8:39 PM

Share

ನಟಿ ನೀತು ಚಂದ್ರ (Nitu Chandra) ಅವರು ಬಾಲಿವುಡ್​ನಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಪುನೀತ್ ರಾಜ್​ಕುಮಾರ್ (Puneeth Rajkumar) ನಟನೆಯ ‘ಪವರ್’ ಸಿನಿಮಾದಲ್ಲಿ ವಿಶೇಷ ಹಾಡಿಗೆ ಅವರು ಹೆಜ್ಜೆ ಹಾಕಿದ್ದರು. ಸಾಕಷ್ಟು ಹಿಟ್ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಆದರೆ, ಇಂದು ಅವರಿಗೆ ಸಿನಿಮಾ ಆಫರ್ ಸಿಗುತ್ತಿಲ್ಲ. ಈ ಕಾರಣಕ್ಕೆ ಅವರ ಬದುಕು ಕ್ಲಿಷ್ಟವಾಗಿದೆ. ಅಷ್ಟೇ ಅಲ್ಲ ಸಾಕಷ್ಟು ಅವಮಾನಗಳನ್ನು ಅವರು ಎದುರಿಸುವಂತಾಗಿದೆ. ಹೆಂಡತಿ ಆಗಿ ಇದ್ದರೆ ಸ್ಯಾಲರಿ ನೀಡುವ ಬಗ್ಗೆ ಉದ್ಯಮಿಯೊಬ್ಬರು ಅವರಿಗೆ ಆಫರ್ ಕೂಡ ನೀಡಿದ್ದರಂತೆ.

ನೀತು ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 2003ರಲ್ಲಿ. ತೆಲುಗಿನ ‘ವಿಷ್ಣು’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು. 2005ರಲ್ಲಿ ‘ಗರಂ ಮಸಾಲ’ ಚಿತ್ರದ ಮೂಲಕ ಹಿಂದಿಯಲ್ಲೂ ಮಿಂಚಿದರು. ನಂತರ ನೀತೂಗೆ ಹಲವು ಹಿಂದಿ ಆಫರ್​ಗಳು ಬಂದವು. 2010ರಿಂದ ಈಚೆಗೆ ಅವರಿಗೆ ಆಫರ್ ಕಡಿಮೆ ಆಯಿತು. ಅವರನ್ನು ಕೇವಲ ಸ್ಪೆಷಲ್ ಸಾಂಗ್​ಗೆ ಸೀಮಿತ ಮಾಡಲಾಯಿತು. ಈಗ ಕೈಯಲ್ಲಿ ಕೆಲಸ ಇಲ್ಲದೆ, ಹಣವೂ ಇಲ್ಲದೆ ಒದ್ದಾಡುತ್ತಿದ್ದಾರೆ. ಈ ಬಗ್ಗೆ ಸಂದರ್ಶನದಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ನನ್ನದು ಓರ್ವ ಯಶಸ್ವಿ ನಟಿಯ ವೈಫಲ್ಯದ ಕಥೆ. ಹಲವು ದೊಡ್ಡ ಚಿತ್ರಗಳಲ್ಲಿ ನಟಿಸಿದ ನನಗೆ ಇಂದು ಕೆಲಸವಿಲ್ಲ. ದೊಡ್ಡ ಉದ್ಯಮಿಯೊಬ್ಬರು ನನಗೆ ಆಫರ್ ಒಂದನ್ನು ನೀಡಿದ್ದರು. ಅವರ ಹೆಂಡತಿಯಾಗಿ ನಾನು ಇರಬೇಕು. ಇದಕ್ಕೆ ಅವರು ನನಗೆ ಸ್ಯಾಲರಿ ರೂಪದಲ್ಲಿ ತಿಂಗಳಿಗೆ 25 ಲಕ್ಷ ರೂಪಾಯಿ ನೀಡುವುದಾಗಿ ಹೇಳಿದ್ದರು. ಈಗ ನನ್ನ ಬಳಿ ಹಣವೂ ಇಲ್ಲ, ಕೆಲಸವೂ ಇಲ್ಲ. ನಾನು ಚಿಂತೆಗೆ ಒಳಗಾಗಿದ್ದೇನೆ’ ಎಂದಿದ್ದಾರೆ ನೀತು.

‘ಓರ್ವ ಡೈರೆಕ್ಟರ್ ಅನ್ನು ಭೇಟಿ ಮಾಡಿದ್ದೆ. ಆಡಿಷನ್ ನೀಡಿದೆ. ಆಡಿಷನ್ ನೀಡಿದ ಒಂದು ಗಂಟೆಯಲ್ಲಿ ನನ್ನನ್ನು ರಿಜೆಕ್ಟ್ ಮಾಡಲಾಯಿತು. ಯಾಕೋ ವರ್ಕೌಟ್ ಆಗುತ್ತಿಲ್ಲ ಅನಿಸುತ್ತಿದೆ ಎಂದು ನಿರ್ದೇಶಕರು ನೇರವಾಗಿ ಹೇಳಿದರು’ ಎಂದಿದ್ದಾರೆ ನೀತು.

ಇದನ್ನೂ ಓದಿ: ‘ಬಿಗ್ ಬಾಸ್ ಕನ್ನಡ’ ಹೊಸ ಸೀಸನ್ ಬಗ್ಗೆ ಸುದೀಪ್ ಮಾತು; ಲೀಕ್ ಆಯ್ತು ಲುಕ್

ನೀತು ಅವರು ಸದ್ಯ ಹಾಲಿವುಡ್​ನಲ್ಲಿ ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಂಡಿದ್ದಾರೆ. 2021ರಲ್ಲಿ ತೆರೆಗೆ ಬಂದ ‘ನೆವರ್​ ಬ್ಯಾಕ್​ ಡೌನ್​: ರಿವೋಲ್ಟ್​​​’ ಸಿನಿಮಾದಲ್ಲಿ ಅವರು ನಟಿಸಿದರು. ಆದರೆ, ಅವರ ವೃತ್ತಿ ಜೀವನದಲ್ಲಿ ಈ ಚಿತ್ರ ಯಾವುದೇ ಬದಲಾವಣೆ ಮಾಡಿಲ್ಲ.

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ