‘ಡ್ರಗ್ಸ್​ ತೆಗೆದುಕೊಳ್ಳುವುದು ನಿಲ್ಲಿಸಿ’: ಲೈವ್​ನಲ್ಲೇ ಆಮಿರ್​ ಖಾನ್​ಗೆ ಟ್ರೋಲ್​; ನಟನ ಉತ್ತರ ಏನು?

ಲೈವ್​ ಬಂದಾಗ ಆಮಿರ್​ ಖಾನ್​ ಅವರ ಮುಖ ಬಾಡಿದಂತೆ ಕಾಣಿಸಿದೆ. ಹಾಗಾಗಿ ಅವರನ್ನು ಕೆಲವರು ಟ್ರೋಲ್​ ಮಾಡಿದ್ದಾರೆ. ‘ಡ್ರಗ್ಸ್​ ಸೇವನೆ ನಿಲ್ಲಿಸಿ’ ಎಂದು ವ್ಯಕ್ತಿಯೊಬ್ಬರು ಆಮಿರ್​ ಖಾನ್​ಗೆ ಬುದ್ಧಿ ಹೇಳಿದ್ದಾರೆ. ಈ ಕಮೆಂಟ್​ ಅನ್ನು ಆಮಿರ್ ಖಾನ್​ ನಿರ್ಲಕ್ಷಿಸಬಹುದಿತ್ತು. ಆದರೆ ಅವರು ಹಾಗೆ ಮಾಡಿಲ್ಲ. ಇಂಥ ಕಮೆಂಟ್​ಗಳಿಗೂ ಕೂಡ ಅವರು ಉತ್ತರ ನೀಡಿದ್ದಾರೆ.

‘ಡ್ರಗ್ಸ್​ ತೆಗೆದುಕೊಳ್ಳುವುದು ನಿಲ್ಲಿಸಿ’: ಲೈವ್​ನಲ್ಲೇ ಆಮಿರ್​ ಖಾನ್​ಗೆ ಟ್ರೋಲ್​; ನಟನ ಉತ್ತರ ಏನು?
ಆಮಿರ್ ಖಾನ್​
Follow us
|

Updated on: Mar 07, 2024 | 5:05 PM

ಬಾಲಿವುಡ್​ ನಟ ಆಮಿರ್​ ಖಾನ್​ (Aamir Khan) ಅವರು ‘ಲಾಲ್​ ಸಿಂಗ್​ ಚಡ್ಡಾ’ ಸಿನಿಮಾದ ಬಳಿಕ ಕೊಂಚ ಸೈಲೆಂಟ್​ ಆಗಿದ್ದಾರೆ. ಆ ಸಿನಿಮಾ ಹೀನಾಯವಾಗಿ ಸೋತಿದ್ದರಿಂದ ಮುಂದಿನ ಚಿತ್ರಗಳ ಆಯ್ಕೆಯಲ್ಲಿ ಅವರು ತುಂಬಾ ಕಾಳಜಿ ವಹಿಸುತ್ತಿದ್ದಾರೆ. ಸದ್ಯಕ್ಕೆ ಅವರು ‘ಸಿತಾರೆ ಜಮೀನ್​ ಪರ್​’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದರ ನಡುವೆ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಬೇಕು ಎಂಬ ಕಾರಣಕ್ಕೆ ಆಮಿರ್​ ಖಾನ್​ ಅವರು ಸೋಶಿಯಲ್​ ಮೀಡಿಯಾ (Aamir Khan Instagram Live) ಮೂಲಕ ಪ್ರಶ್ನೋತ್ತರ ನಡೆಸಿದ್ದಾರೆ. ಈ ವೇಳೆ ಅವರಿಗೆ ಅನೇಕ ಪ್ರಶ್ನೆಗಳು ಎದುರಾಗಿವೆ. ಕೆಲವರು ಟ್ರೋಲ್​ ಮಾಡಿದ್ದಾರೆ. ಡ್ರಗ್ಸ್​ (Drugs) ಬಗ್ಗೆಯೂ ಆಮಿರ್​ ಖಾನ್​ಗೆ ಪ್ರಶ್ನೆ ಕೇಳಲಾಗಿದೆ. ಅದಕ್ಕೆ ಆಮಿರ್​ ಖಾನ್​ ಉತ್ತರ ಪ್ರತಿಕ್ರಿಯೆ ನೀಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಆಮಿರ್​ ಖಾನ್​ ಅವರು ಲೈವ್​ ಬಂದಿದ್ದಾರೆ. ಈ ವೇಳೆ ಅಭಿಮಾನಿಗಳು ಮಾಡಿದ ಕಮೆಂಟ್​ಗಳಿಗೆ ಅವರು ಉತ್ತರಿಸಿದ್ದಾರೆ. ಲೈವ್​ನಲ್ಲಿ ಮಾತನಾಡುವಾಗ ಆಮಿರ್​ ಖಾನ್​ ಅವರ ಮುಖ ಬಾಡಿದ ಹಾಗೆ ಕಾಣಿಸಿದೆ. ಅದೇ ಕಾರಣಕ್ಕೋ ಏನೋ ಕೆಲವರು ಟ್ರೋಲ್​ ಮಾಡಿದ್ದಾರೆ. ‘ಸರ್​, ನೀವು ಡ್ರಗ್ಸ್​ ತೆಗೆದುಕೊಂಡಿದ್ದೀರಿ ಎನಿಸುತ್ತಿದೆ. ಡ್ರಗ್ಸ್​ ಸೇವಿಸುವುದನ್ನು ನಿಲ್ಲಿಸಿ’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ.

ಇದನ್ನೂ ಓದಿ: ಬೆಚ್ಚಿ ಬೀಳಿಸುತ್ತಿದೆ ಆಮಿರ್​ ಖಾನ್​ ಹೊಸ ಲುಕ್​; ಅಭಿಮಾನಿಗಳಲ್ಲಿ ಹೆಚ್ಚಿದೆ ಕೌತುಕ

ಆಮಿರ್​ ಖಾನ್​ ಅವರು ಬೇಕಿದ್ದರೆ ಈ ಕಮೆಂಟ್​ ನಿರ್ಲಕ್ಷಿಸಬಹುದಿತ್ತು. ಆದರೆ ಅವರು ಹಾಗೆ ಮಾಡಿಲ್ಲ. ಇಂಥ ನೆಗೆಟಿವ್​ ಕಮೆಂಟ್​ಗಳನ್ನು ಕೂಡ ಅವರು ಓದಿದ್ದಾರೆ. ‘ನೀವು ಏನು ಹೇಳುತ್ತಿದ್ದೀರಿ’ ಎಂದು ಆಮಿರ್​ ಖಾನ್​ ಮರುಪ್ರಶ್ನೆ ಹಾಕಿದ್ದಾರೆ. ಆ ಮೂಲಕ ತಾವು ಡ್ರಗ್ಸ್ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ. ನಿಮ್ಮ ಸ್ಟೈಲಿಸ್ಟ್​ನ ಬದಲಿಸಿ ಎಂದು ಕೂಡ ಕೆಲವರು ಸಲಹೆ ನೀಡಿದ್ದಾರೆ. ‘ನನ್ನ ಸ್ಟೈಲ್​ ಭಿನ್ನವಾಗಿರುತ್ತದೆ. ಹಾಗಾಗಿ ಅನೇಕರಿಗೆ ಇಷ್ಟ ಆಗುವುದಿಲ್ಲ’ ಎಂದು ಆಮಿರ್ ಖಾನ್​ ಹೇಳಿದ್ದಾರೆ.

ಕೆಲವೇ ದಿನಗಳ ಹಿಂದೆ ಅನಂತ್​ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್​ ಅವರ ಪ್ರೀ-ವೆಡ್ಡಿಂಗ್​ ಸಮಾರಂಭ ನಡೆಯಿತು. ಆ ಸಮಾರಂಭದಲ್ಲಿ ಆಮಿರ್​ ಖಾನ್​, ಸಲ್ಮಾನ್​ ಖಾನ್​, ಶಾರುಖ್​ ಮುಂತಾದವರು ಡ್ಯಾನ್ಸ್​ ಮಾಡಿದ್ದಕ್ಕೆ ಕೆಲವರಿಂದ ಟೀಕೆ ವ್ಯಕ್ತವಾಗುತ್ತಿದೆ. ಲೈವ್​ ಸೆಷನ್​ ವೇಳೆ ಆ ಬಗ್ಗೆಯೂ ಪ್ರಶ್ನೆ ಎದುರಾಗಿದೆ. ‘ನಿಮ್ಮ ಮಗಳ ಮದುವೆಯಲ್ಲಿಯೇ ಕುಣಿಯದ ನೀವು ಅಂಬಾನಿ ಕುಟುಂಬದ ಸಮಾರಂಭದಲ್ಲಿ ಡ್ಯಾನ್ಸ್​ ಮಾಡಿದ್ದು ಯಾಕೆ’ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಾಟು ನಾಟು ಸ್ಟೆಪ್​ ಹಾಕಲಾಗದೇ ಸೋತ ಆಮಿರ್​, ಸಲ್ಲು, ಶಾರುಖ್​; ಮುಜುಗರ ತಪ್ಪಿಸಲು ಮಾಡಿದ್ದೇನು?

‘ನಾನು ನನ್ನ ಮಗಳ ಮದುವೆಯಲ್ಲೂ ಡ್ಯಾನ್ಸ್​ ಮಾಡಿದ್ದೇನೆ’ ಎಂದು ಹೇಳಿ ಆಮಿರ್​ ಖಾನ್​ ನಕ್ಕಿದ್ದಾರೆ. ‘ಮುಖೇಶ್​ ಅವರ ಸಮಾರಂಭದಲ್ಲಿ ನಾನು ಡ್ಯಾನ್ಸ್​ ಮಾಡಿದ್ದು ಯಾಕೆಂದರೆ ಅವರು ನನ್ನ ಆತ್ಮೀಯ ಸ್ನೇಹಿತರು. ಮುಖೇಶ್​, ನೀತಾ ಮತ್ತು ಅವರ ಮಕ್ಕಳು ನಮ್ಮ ಕುಟುಂಬ ಇದ್ದಂತೆ. ಅವರ ಸಮಾರಂಭದಲ್ಲಿ ನಾನು ಡ್ಯಾನ್ಸ್​ ಮಾಡುತ್ತೇನೆ. ನಮ್ಮ ಸಮಾರಂಭದಲ್ಲಿ ಅವರು ಡ್ಯಾನ್ಸ್ ಮಾಡುತ್ತಾರೆ’ ಎಂದು ಆಮಿರ್ ಖಾನ್​ ಉತ್ತರ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?