AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತರರಿಗೆ ಕೊವಿಡ್​ ಹರಡುವಂತೆ ವರ್ತಿಸಿದ ಕಂಗನಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಕ್ಲಾಸ್: ನಟಿ ಮಾಡಿದ ತಪ್ಪೇನು?​

ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇಂಥ ಸಂದರ್ಭದಲ್ಲಿ ಎಷ್ಟು ಹುಷಾರಾಗಿದ್ದರೂ ಸಾಲದು. ಆದರೆ ಕಂಗನಾ ರಣಾವತ್​ ಮಾತ್ರ ಇದರ ಪರಿವೇ ಇಲ್ಲದಂತೆ ವರ್ತಿಸಿದ್ದಾರೆ.

ಇತರರಿಗೆ ಕೊವಿಡ್​ ಹರಡುವಂತೆ ವರ್ತಿಸಿದ ಕಂಗನಾ; ನೆಟ್ಟಿಗರಿಂದ ಹಿಗ್ಗಾಮುಗ್ಗಾ ಕ್ಲಾಸ್: ನಟಿ ಮಾಡಿದ ತಪ್ಪೇನು?​
ಕಂಗನಾ ರಣಾವತ್
TV9 Web
| Edited By: |

Updated on: Jan 08, 2022 | 3:56 PM

Share

ಸದಾ ವಿವಾದಗಳಿಂದಲೇ ಸದ್ದು ಮಾಡುತ್ತಾರೆ ನಟಿ ಕಂಗನಾ ರಣಾವತ್. ಕೆಲವೊಮ್ಮೆ ಬೇಕಂತಲೇ ಅವರು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಾರೆ. ಇನ್ನೂ ಕೆಲವೊಮ್ಮೆ ವಿವಾದಗಳು ಅವರನ್ನು ಹುಡುಕಿಕೊಂಡು ಬರುತ್ತವೆ. ಒಟ್ಟಿನಲ್ಲಿ ಅವರಿಗೂ ಕಾಂಟ್ರವರ್ಸಿಗೂ ಎಲ್ಲಿಲ್ಲದ ನಂಟು.​ ಕಂಡವರ ತಪ್ಪನ್ನು ಎತ್ತಿ ಹೇಳುವಲ್ಲಿ ಕಂಗನಾ (Kangana Ranaut) ಸದಾ ಮುಂದಿರುತ್ತಾರೆ. ತಮಗೆ ಸಂಬಂಧ ಇಲ್ಲದಿರುವ ವಿಷಯದಲ್ಲೂ ತಲೆ ಹಾಕಿ ಕಿರಿಕ್ (Kangana Ranaut Controversy)​ ಮಾಡಿಕೊಳ್ಳುತ್ತಾರೆ. ಆದರೆ ಈಗ ಅವರೇ ಒಂದು ತಪ್ಪು ಮಾಡಿ ಪೇಚಿಗೆ ಸಿಲುಕಿದ್ದಾರೆ. ಕೊವಿಡ್​ (Coronavirus) ಹರಡುತ್ತಿರುವ ಈ ಸಂದರ್ಭದಲ್ಲಿ ಕಂಗನಾ ಬೇಜವಾಬ್ದಾರಿಯುತವಾಗಿ ನಡೆದುಕೊಂಡಿದ್ದಾರೆ.

ದೇಶದಲ್ಲಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಕೊರೊನಾ ರೂಪಾಂತರಿಯ ಕಾಟ ಅತಿಯಾಗುತ್ತಿದೆ. ಇಂಥ ವೈರಸ್​ ಹರಡದಂತೆ ತಡೆಯಲು ಅನೇಕ ಕಠಿಣ ನಿಯಮಗಳನ್ನು ಜಾರಿ ಮಾಡಲಾಗಿದೆ. ದೇಶದ ಹಲವು ರಾಜ್ಯಗಳಲ್ಲಿ ನೈಟ್​ ಕರ್ಫ್ಯೂ, ವೀಕೆಂಡ್​ ಕರ್ಫ್ಯೂ ಚಾಲ್ತಿಯಲ್ಲಿದೆ. ಇಂಥ ಸಂದರ್ಭದಲ್ಲಿ ಎಷ್ಟು ಹುಷಾರಾಗಿದ್ದರೂ ಸಾಲದು. ಆದರೆ ಕಂಗನಾ ಮಾತ್ರ ಇದರ ಪರಿವೇ ಇಲ್ಲದಂತೆ ವರ್ತಿಸಿದ್ದಾರೆ.

ಇತ್ತೀಚೆಗೆ ಕಂಗನಾ ಅವರು ಒಂದು ರೆಸ್ಟೋರೆಂಟ್​ಗೆ ತೆರಳಿದ್ದಾರೆ. ಅಲ್ಲಿ ಹಲವು ಕೇಕ್​ ಪೀಸ್​ಗಳನ್ನು ಇರಿಸಲಾಗಿತ್ತು. ಆ ಪೈಕಿ ಒಂದು ಕೇಕ್​ ಪೀಸ್​ ಎತ್ತಿಕೊಂಡ ಅವರು ಬಾಯಿಯ ಹತ್ತಿರಕ್ಕೆ ತಂದು ತಿನ್ನುವಂತೆ ನಟಿಸಿದ್ದಾರೆ. ನಂತರ ಅದೇ ಕೇಕ್​ ಅನ್ನು ವಾಪಸ್​ ಇಟ್ಟಿದ್ದಾರೆ. ಅವರು ಇಷ್ಟೆಲ್ಲ ಮಾಡಿರುವುದು ಪಾಪರಾಜಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ ವಿಡಿಯೋ ಈಗ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಈ ವಿಡಿಯೋ ಕಂಡು ಜನರು ಕೆಂಡಾಮಂಡಲ ಆಗಿದ್ದಾರೆ. ಕೇಕ್​ ಅನ್ನು ಬಾಯಿಯ ಹತ್ತಿರಕ್ಕೆ ತಂದು, ತಿನ್ನುವಂತೆ ನಟಿಸಿದ ಬಳಿಕ ವಾಪಸ್​ ಇಟ್ಟಿರುವುದರಿಂದ ವೈರಸ್​ ಹರಡುವ ಸಾಧ್ಯತೆ ಇರುತ್ತದೆ. ಹಾಗಾಗಿ ಕಂಗನಾ ಈ ರೀತಿ ಮಾಡಿದ್ದು ತಪ್ಪು ಎಂದು ನೆಟ್ಟಿಗರು ಖಾರವಾಗಿ ಕಮೆಂಟ್​ ಮಾಡುತ್ತಿದ್ದಾರೆ. ‘ಮೊದಲನೆಯದಾಗಿ ಅವರು ಆ ಕೇಕ್​ ಅನ್ನು ಮುಟ್ಟಿದರು. ನಂತರ ಬಾಯಿಯ ಬಳಿ ತೆಗೆದುಕೊಂಡು ಹೋಗಿ ಉಸಿರು ತಾಗಿಸಿದರು. ನಂತರ ಅದನನ್ನು ವಾಪಸ್​ ಇಟ್ಟರು. ಇದು ಸರಿಯಾದ ವರ್ತನೆ ಅಲ್ಲ. ಕೊವಿಡ್​ ಹರಡುತ್ತಿರುವ ಈ ಸಂದರ್ಭದಲ್ಲಿ ಹೀಗೆ ಮಾಡಿದ್ದು ಸರಿಯಲ್ಲ. ಖಂಡಿತವಾಗಿ ಅವರು ವೈರಸ್​ ಹರಡುತ್ತಿದ್ದಾರೆ’ ಎಂದು ಅನೇಕರು ಕಟು ಟೀಕೆ ಮಾಡಿದ್ದಾರೆ. ಸದ್ಯ ಈ ಕುರಿತು ಕಂಗನಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಅವರು ಯಾವ ರೀತಿ ಪ್ರತಿಕ್ರಿಯಿಸಬಹುದು ಎಂಬುದನ್ನು ತಿಳಿಯಲು ನೆಟ್ಟಿಗರು ಕಾದಿದ್ದಾರೆ.

ಇದನ್ನೂ ಓದಿ:

‘2022ರಲ್ಲಿ ಕಡಿಮೆ ಎಫ್ಐರ್ ಬೀಳಲಿ, ಹೆಚ್ಚು ಪ್ರೇಮ ಪತ್ರಗಳು ಬರಲಿ’; ದೇವರಲ್ಲಿ ಕಂಗನಾ ವಿಶೇಷ ಪ್ರಾರ್ಥನೆ

ಪೊಲೀಸ್​ ಠಾಣೆಯಲ್ಲಿ ಕಂಗನಾ ಬಿಂಕ ನೋಡಿ ಅಚ್ಚರಿ ಪಟ್ಟ ಪೊಲೀಸರು; ಹೈಲೈಟ್​ ಆಯ್ತು ಮುತ್ತಿನ ನೆಕ್ಲೆಸ್​

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್