AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?

Brahmastra | Kamaal R Khan Arrest: ಅನೇಕ ಸೆಲೆಬ್ರಿಟಿಗಳನ್ನು ಕಮಾಲ್​ ಆರ್​. ಖಾನ್​ ಎದುರು ಹಾಕಿಕೊಂಡಿದ್ದಾರೆ. ಹಲವಾರು ಸಿನಿಮಾಗಳ ಬಗ್ಗೆ ಅವರು ಕಟು ಟೀಕೆ ಮಾಡಿದ್ದುಂಟು.

KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?
ಬ್ರಹ್ಮಾಸ್ತ್ರ ಸಿನಿಮಾ ಪೋಸ್ಟರ್​, ಕಮಾಲ್ ಆರ್. ಖಾನ್
TV9 Web
| Edited By: |

Updated on: Sep 08, 2022 | 2:28 PM

Share

ಬಾಯಿಗೆ ಬಂದಂತೆ ಮಾತನಾಡುತ್ತ, ಅನೇಕ ಸಿನಿಮಾಗಳನ್ನು ಕಟುವಾಗಿ ಹೀಯಾಳಿಸುತ್ತಿದ್ದ ಕಮಾಲ್​ ಆರ್​. ಖಾನ್ (Kamaal R Khan)​ ಅವರನ್ನು ಅರೆಸ್ಟ್​ ಮಾಡಲಾಗಿದೆ. ಎರಡು ಕೇಸ್​ಗಳು ಅವರ ಮೇಲೆ ದಾಖಲಾಗಿವೆ. ಸೆಲೆಬ್ರಿಟಿಗಳ ವಿರುದ್ಧ ಆಕ್ಷೇಪಾರ್ಹವಾಗಿ ಟ್ವೀಟ್​ ಮಾಡಿದ್ದು ಹಾಗೂ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಗಳು ಅವರ ಮೇಲಿವೆ. ಒಂದು ಕೇಸ್​ನಲ್ಲಿ ಜಾಮೀನು ಸಿಕ್ಕಿದ್ದರೂ ಕೂಡ ಇನ್ನೊಂದು ಕೇಸ್​ನಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿ ಇರುವಂತೆ ಆಗಿದೆ. ಇದಕ್ಕೆಲ್ಲ ಬ್ರಹ್ಮಾಸ್ತ್ರ’ (Brahmastra) ಸಿನಿಮಾ ತಂಡ ಕಾರಣ ಎಂದು ನೆಟ್ಟಿಗರು ಆರೋಪ ಮಾಡುತ್ತಿದ್ದಾರೆ. ತೀರಾ ವಿಲಕ್ಷಣವಾದ ಪೋಸ್ಟ್​ಗಳನ್ನು ಕೆಲವರು ಹಾಕುತ್ತಿದ್ದಾರೆ. ಈ ವಿವಾದದಲ್ಲಿ ಕರಣ್​ ಜೋಹರ್​ (Karan Johar) ಅವರ ಹೆಸರನ್ನು ಕೂಡ ಎಳೆದು ತರಲಾಗಿದೆ.

ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳನ್ನು ಕಮಾಲ್​ ಆರ್​. ಖಾನ್​ ಎದುರು ಹಾಕಿಕೊಂಡಿದ್ದಾರೆ. ಹಲವಾರು ಸಿನಿಮಾಗಳ ಬಗ್ಗೆ ಅವರು ಕಟು ಟೀಕೆ ಮಾಡಿದ್ದಾರೆ. ರಿಲೀಸ್​ ಆಗುವುದಕ್ಕೂ ಮುನ್ನವೇ ಎಷ್ಟೋ ಚಿತ್ರಗಳನ್ನು ಫ್ಲಾಪ್​ ಎಂದು ಘೋಷಿಸಿದ್ದಾರೆ. ಈಗ ‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್​ ಆಗುತ್ತಿದೆ. ಸೆಪ್ಟೆಂಬರ್​ 9ರಂದು ಈ ಚಿತ್ರ ಅದ್ದೂರಿಯಾಗಿ ತೆರೆ ಕಾಣಲಿದೆ. ಕಮಾಲ್​ ಆರ್​. ಖಾನ್​ ಅವರ ಕೆಟ್ಟ ವಿಮರ್ಶೆಯನ್ನು ತಡೆಯುವ ಸಲುವಾಗಿಯೇ ಅವರನ್ನು ಅರೆಸ್ಟ್​ ಮಾಡಿಸಲಾಗಿದೆ ಎಂದು ಒಂದು ವರ್ಗದ ನೆಟ್ಟಿಗರು ಲೇವಡಿ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಬ್ರಹ್ಮಾಸ್ತ್ರ’ ಸಿನಿಮಾ ತೆರೆಕಾಣುತ್ತಿದೆ. ಹಿಂದಿಯ ಈ ಚಿತ್ರ ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಿಗೆ ಡಬ್​ ಆಗಿದೆ. ರಣಬೀರ್​ ಕಪೂರ್​, ಆಲಿಯಾ ಭಟ್​ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಇನ್ನುಳಿದ ಪ್ರಮುಖ ಪಾತ್ರಗಳಲ್ಲಿ ಅಮಿತಾಭ್​ ಬಚ್ಚನ್​, ನಾಗಾರ್ಜುನ ಮುಂತಾದವರು ನಟಿಸಿದ್ದಾರೆ. ಅಯಾನ್​ ಮುಖರ್ಜಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಈ ಸಿನಿಮಾದ ನಿರ್ಮಾಪಕರಲ್ಲಿ ಕರಣ್​ ಜೋಹರ್​ ಕೂಡ ಒಬ್ಬರು. ಅವರು ಬಾಲಿವುಡ್​ನಲ್ಲಿ ಪ್ರಭಾವಿ ವ್ಯಕ್ತಿ. ತಮ್ಮ ಈ ಸಿನಿಮಾವನ್ನು ಕೆಟ್ಟ ವಿಮರ್ಶೆಯಿಂದ ಬಚಾವ್​ ಮಾಡಿಕೊಳ್ಳಲು ಅವರು ಕಮಾಲ್​ ಆರ್​. ಖಾನ್​ರನ್ನು ಅರೆಸ್ಟ್​ ಮಾಡಿಸಿದ್ದಾರೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ. ಈ ಚಿತ್ರ ರಿಲೀಸ್​ ಆಗಿ ಸೂಪರ್​ ಹಿಟ್​ ಎನಿಸಿಕೊಳ್ಳುವವರೆಗೂ ಜೈಲಿನಿಂದ ಕೆಆರ್​ಕೆ ಹೊರಗೆ ಬರುವುದಿಲ್ಲ ಎಂದು ಹಲವರು ಊಹಿಸುತ್ತಿದ್ದಾರೆ.

ಇಂಥ ಆರೋಪಗಳಿಗೆಲ್ಲ ಚಿತ್ರತಂಡ ಪ್ರತಿಕ್ರಿಯೆ ನೀಡುವ ಗೋಜಿಗೆ ಹೋಗಿಲ್ಲ. ಚಿತ್ರದ ಪ್ರಚಾರದಲ್ಲಿ ತಂಡ ನಿರತವಾಗಿದೆ. ಮೂರು ಪಾರ್ಟ್​ಗಳಲ್ಲಿ ಮೂಡಿಬರಲಿರುವ ಈ ಸಿನಿಮಾದ ಮೊದಲ ಪಾರ್ಟ್​ ಈಗ ಬಿಡುಗಡೆ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು