AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?

Brahmastra | Kamaal R Khan Arrest: ಅನೇಕ ಸೆಲೆಬ್ರಿಟಿಗಳನ್ನು ಕಮಾಲ್​ ಆರ್​. ಖಾನ್​ ಎದುರು ಹಾಕಿಕೊಂಡಿದ್ದಾರೆ. ಹಲವಾರು ಸಿನಿಮಾಗಳ ಬಗ್ಗೆ ಅವರು ಕಟು ಟೀಕೆ ಮಾಡಿದ್ದುಂಟು.

KRK ಬಂಧನಕ್ಕೆ ‘ಬ್ರಹ್ಮಾಸ್ತ್ರ’ ಟೀಮ್​ ಕಾರಣ ಎಂದು ಆರೋಪಿಸಿದ ನೆಟ್ಟಿಗರು; ಏನಿದು ಹುನ್ನಾರ?
ಬ್ರಹ್ಮಾಸ್ತ್ರ ಸಿನಿಮಾ ಪೋಸ್ಟರ್​, ಕಮಾಲ್ ಆರ್. ಖಾನ್
TV9 Web
| Edited By: |

Updated on: Sep 08, 2022 | 2:28 PM

Share

ಬಾಯಿಗೆ ಬಂದಂತೆ ಮಾತನಾಡುತ್ತ, ಅನೇಕ ಸಿನಿಮಾಗಳನ್ನು ಕಟುವಾಗಿ ಹೀಯಾಳಿಸುತ್ತಿದ್ದ ಕಮಾಲ್​ ಆರ್​. ಖಾನ್ (Kamaal R Khan)​ ಅವರನ್ನು ಅರೆಸ್ಟ್​ ಮಾಡಲಾಗಿದೆ. ಎರಡು ಕೇಸ್​ಗಳು ಅವರ ಮೇಲೆ ದಾಖಲಾಗಿವೆ. ಸೆಲೆಬ್ರಿಟಿಗಳ ವಿರುದ್ಧ ಆಕ್ಷೇಪಾರ್ಹವಾಗಿ ಟ್ವೀಟ್​ ಮಾಡಿದ್ದು ಹಾಗೂ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಗಳು ಅವರ ಮೇಲಿವೆ. ಒಂದು ಕೇಸ್​ನಲ್ಲಿ ಜಾಮೀನು ಸಿಕ್ಕಿದ್ದರೂ ಕೂಡ ಇನ್ನೊಂದು ಕೇಸ್​ನಲ್ಲಿ ಅವರು ನ್ಯಾಯಾಂಗ ಬಂಧನದಲ್ಲಿ ಇರುವಂತೆ ಆಗಿದೆ. ಇದಕ್ಕೆಲ್ಲ ಬ್ರಹ್ಮಾಸ್ತ್ರ’ (Brahmastra) ಸಿನಿಮಾ ತಂಡ ಕಾರಣ ಎಂದು ನೆಟ್ಟಿಗರು ಆರೋಪ ಮಾಡುತ್ತಿದ್ದಾರೆ. ತೀರಾ ವಿಲಕ್ಷಣವಾದ ಪೋಸ್ಟ್​ಗಳನ್ನು ಕೆಲವರು ಹಾಕುತ್ತಿದ್ದಾರೆ. ಈ ವಿವಾದದಲ್ಲಿ ಕರಣ್​ ಜೋಹರ್​ (Karan Johar) ಅವರ ಹೆಸರನ್ನು ಕೂಡ ಎಳೆದು ತರಲಾಗಿದೆ.

ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳನ್ನು ಕಮಾಲ್​ ಆರ್​. ಖಾನ್​ ಎದುರು ಹಾಕಿಕೊಂಡಿದ್ದಾರೆ. ಹಲವಾರು ಸಿನಿಮಾಗಳ ಬಗ್ಗೆ ಅವರು ಕಟು ಟೀಕೆ ಮಾಡಿದ್ದಾರೆ. ರಿಲೀಸ್​ ಆಗುವುದಕ್ಕೂ ಮುನ್ನವೇ ಎಷ್ಟೋ ಚಿತ್ರಗಳನ್ನು ಫ್ಲಾಪ್​ ಎಂದು ಘೋಷಿಸಿದ್ದಾರೆ. ಈಗ ‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್​ ಆಗುತ್ತಿದೆ. ಸೆಪ್ಟೆಂಬರ್​ 9ರಂದು ಈ ಚಿತ್ರ ಅದ್ದೂರಿಯಾಗಿ ತೆರೆ ಕಾಣಲಿದೆ. ಕಮಾಲ್​ ಆರ್​. ಖಾನ್​ ಅವರ ಕೆಟ್ಟ ವಿಮರ್ಶೆಯನ್ನು ತಡೆಯುವ ಸಲುವಾಗಿಯೇ ಅವರನ್ನು ಅರೆಸ್ಟ್​ ಮಾಡಿಸಲಾಗಿದೆ ಎಂದು ಒಂದು ವರ್ಗದ ನೆಟ್ಟಿಗರು ಲೇವಡಿ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
RRR ಕಲೆಕ್ಷನ್​ ರಿಪೋರ್ಟ್​ ಸುಳ್ಳು ಎಂದ ಕಮಾಲ್​ ಆರ್​ ಖಾನ್​; ಸಾಬೀತು ಮಾಡುವುದಾಗಿ ಘೋಷಣೆ
Image
‘ಭಕ್ತರ ಭಕ್ತ ಮಹಾಭಕ್ತ’, ‘ಕಾಶ್ಮೀರದ ಶರ್ಮಾ’: ಖಾನ್​ ಚಿತ್ರಕ್ಕೆ ಹೊಸ ಹೆಸರು ಸೂಚಿಸಿದ ಇನ್ನೊಬ್ಬ ಖಾನ್​
Image
‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​
Image
ಸಲ್ಮಾನ್​ ಖಾನ್​ ವಿರುದ್ಧ ಯಾವುದೇ ಹೇಳಿಕೆ ನೀಡಬೇಡಿ; ಕಮಾಲ್​ ಆರ್​ ಖಾನ್​ಗೆ ಕೋರ್ಟ್​ ಆದೇಶ

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಬ್ರಹ್ಮಾಸ್ತ್ರ’ ಸಿನಿಮಾ ತೆರೆಕಾಣುತ್ತಿದೆ. ಹಿಂದಿಯ ಈ ಚಿತ್ರ ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳಿಗೆ ಡಬ್​ ಆಗಿದೆ. ರಣಬೀರ್​ ಕಪೂರ್​, ಆಲಿಯಾ ಭಟ್​ ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ಇನ್ನುಳಿದ ಪ್ರಮುಖ ಪಾತ್ರಗಳಲ್ಲಿ ಅಮಿತಾಭ್​ ಬಚ್ಚನ್​, ನಾಗಾರ್ಜುನ ಮುಂತಾದವರು ನಟಿಸಿದ್ದಾರೆ. ಅಯಾನ್​ ಮುಖರ್ಜಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ.

ಈ ಸಿನಿಮಾದ ನಿರ್ಮಾಪಕರಲ್ಲಿ ಕರಣ್​ ಜೋಹರ್​ ಕೂಡ ಒಬ್ಬರು. ಅವರು ಬಾಲಿವುಡ್​ನಲ್ಲಿ ಪ್ರಭಾವಿ ವ್ಯಕ್ತಿ. ತಮ್ಮ ಈ ಸಿನಿಮಾವನ್ನು ಕೆಟ್ಟ ವಿಮರ್ಶೆಯಿಂದ ಬಚಾವ್​ ಮಾಡಿಕೊಳ್ಳಲು ಅವರು ಕಮಾಲ್​ ಆರ್​. ಖಾನ್​ರನ್ನು ಅರೆಸ್ಟ್​ ಮಾಡಿಸಿದ್ದಾರೆ ಎಂದು ನೆಟ್ಟಿಗರು ಆರೋಪಿಸಿದ್ದಾರೆ. ಈ ಚಿತ್ರ ರಿಲೀಸ್​ ಆಗಿ ಸೂಪರ್​ ಹಿಟ್​ ಎನಿಸಿಕೊಳ್ಳುವವರೆಗೂ ಜೈಲಿನಿಂದ ಕೆಆರ್​ಕೆ ಹೊರಗೆ ಬರುವುದಿಲ್ಲ ಎಂದು ಹಲವರು ಊಹಿಸುತ್ತಿದ್ದಾರೆ.

ಇಂಥ ಆರೋಪಗಳಿಗೆಲ್ಲ ಚಿತ್ರತಂಡ ಪ್ರತಿಕ್ರಿಯೆ ನೀಡುವ ಗೋಜಿಗೆ ಹೋಗಿಲ್ಲ. ಚಿತ್ರದ ಪ್ರಚಾರದಲ್ಲಿ ತಂಡ ನಿರತವಾಗಿದೆ. ಮೂರು ಪಾರ್ಟ್​ಗಳಲ್ಲಿ ಮೂಡಿಬರಲಿರುವ ಈ ಸಿನಿಮಾದ ಮೊದಲ ಪಾರ್ಟ್​ ಈಗ ಬಿಡುಗಡೆ ಆಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್