AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಮತ್ತು ಸಿದ್ದಾರ್ಥ್​ ಶುಕ್ಲಾ ಸಾವಿನ ನಡುವೆ ಹಲವು ಹೋಲಿಕೆ; ಧ್ವನಿ ಎತ್ತಿದ ನೆಟ್ಟಿಗರು

ಸಿದ್ದಾರ್ಥ್​ ಶುಕ್ಲಾ ಮತ್ತು ಸುಶಾಂತ್​ ಸಿಂಗ್​ ರಜಪೂತ್​ ನಡುವೆ ಹಲವು ಗುಣಗಳು ಒಂದೇ ರೀತಿ ಇದ್ದವು. ಸುಶಾಂತ್​ ರೀತಿಯೇ ಸಿದ್ದಾರ್ಥ್​ ಅವರನ್ನು ಕೂಡ ಎಲ್ಲರೂ ಇಷ್ಟಪಡುತ್ತಿದ್ದರು.

ಸುಶಾಂತ್​ ಮತ್ತು ಸಿದ್ದಾರ್ಥ್​ ಶುಕ್ಲಾ ಸಾವಿನ ನಡುವೆ ಹಲವು ಹೋಲಿಕೆ; ಧ್ವನಿ ಎತ್ತಿದ ನೆಟ್ಟಿಗರು
ಸಿದ್ದಾರ್ಥ್​ ಶುಕ್ಲಾ, ಸುಶಾಂತ್​ ಸಿಂಗ್​ ರಜಪೂತ್
TV9 Web
| Updated By: ಮದನ್​ ಕುಮಾರ್​|

Updated on: Sep 03, 2021 | 3:37 PM

Share

ಖ್ಯಾತ ನಟ ಸಿದ್ದಾರ್ಥ್​ ಶುಕ್ಲಾ ಅವರ ಸಾವಿನ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿವೆ. ಜನರು ಸೋಶಿಯಲ್​ ಮೀಡಿಯಾ ಮೂಲಕ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ವೇಳೆ ಸುಶಾಂತ್​ ಸಿಂಗ್​ ರಜಪೂತ್​ ಅವರನ್ನೂ ನೆನಪಿಸಿಕೊಳ್ಳಲಾಗುತ್ತಿದೆ. 2020ರ ಜೂನ್​ 14ರಂದು ಸುಶಾಂತ್​ ಸಿಂಗ್​ ರಜಪೂತ್​ ನಿಧನರಾದ ಸುದ್ದಿ ಹೊರಬಿದ್ದಿತ್ತು. ಆಗ ಅಭಿಮಾನಿಗಳಿಗೆ ಆಘಾತ ಉಂಟಾಗಿತ್ತು. ಇಂದು ಸಿದ್ದಾರ್ಥ್​ ಶುಕ್ಲಾ ಅಭಿಮಾನಿಗಳು ಕೂಡ ಅದೇ ಸ್ಥಿತಿಯಲ್ಲಿ ಇದ್ದಾರೆ. ಸಿದ್ದಾರ್ಥ್​ ನಮ್ಮೊಂದಿಗೆ ಇಲ್ಲ ಎಂಬುದನ್ನು ಅಭಿಮಾನಿಗಳಿಂದ ನಂಬೋಕೆ ಸಾಧ್ಯವಾಗುತ್ತಿಲ್ಲ.

ಅನುಮಾನ ಮೂಡಿಸಿದ ಸಾವುಗಳು:

ಸುಶಾಂತ್​ ಸಿಂಗ್​ ರಜಪೂತ್​ ತುಂಬ ಪಾಸಿಟಿವ್​ ವಿಚಾರಗಳನ್ನು ಇಟ್ಟುಕೊಂಡಂತಹ ವ್ಯಕ್ತಿ ಆಗಿದ್ದರು. ಆದರೆ ಅಂಥ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡರು ಎಂದಾಗ ಜನರಿಗೆ ನಂಬೋದು ಕಷ್ಟ ಆಯಿತು. ಅದೇ ರೀತಿ ಸಿದ್ದಾರ್ಥ್​ ಶುಕ್ಲಾ ಕೂಡ ಫಿಟ್​ನೆಸ್​ ಬಗ್ಗೆ ಹೆಚ್ಚು ಕಾಳಜಿ ವಹಿಸುವಂತಹ ವ್ಯಕ್ತಿ. ಅಂಥವರು ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂಬುದನ್ನು ಜನರು ಅನುಮಾನದ ದೃಷ್ಟಿಯಿಂದ ನೋಡುತ್ತಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ.

ಕೂಪರ್​ ಆಸ್ಪತ್ರೆ ಮೇಲೆ ಅಸಮಾಧಾನ:

ಸುಶಾಂತ್​ ಸಿಂಗ್ ರಜಪೂತ್​ ಅವರ ಶವವನ್ನು ಮುಂಬೈನ ಕೂಪರ್​ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿತ್ತು. ಅವರ ಮರಣೋತ್ತರ ಪರೀಕ್ಷೆ ಬಗ್ಗೆ ಇನ್ನೂ ಹಲವು ಅನುಮಾನಗಳಿವೆ. ಹೀಗಿರುವಾಗ ಸಿದ್ದಾರ್ಥ್​ ಅವರನ್ನು ಕೂಡ ಮತ್ತದೇ ಕೂಪರ್​ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಯಾಕೆ ಎಂದು ಅನೇಕರು ಪ್ರಶ್ನಿಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಗಾಗಿ ಎಲ್ಲರೂ ಕಾಯುತ್ತಿದ್ದಾರೆ.

ಪ್ರೇಯಸಿಯರಿಗೆ ಸಂಕಷ್ಟ:

ಸುಶಾಂತ್​ ಸಿಂಗ್​ ರಜಪೂತ್​ ನಿಧನರಾದ ಬಳಿಕ ಅವರ ಪ್ರೇಯಸಿ ರಿಯಾ ಚಕ್ರವರ್ತಿಗೆ ಸಂಕಷ್ಟ ಶುರುವಾಗಿತ್ತು. ಸುಶಾಂತ್​ ಸಾವಿಗೂ ರಿಯಾ ಚಕ್ರವರ್ತಿಗೂ ಏನಾದರೂ ಸಂಬಂಧ ಇದೆಯೇ ಎಂಬ ಅನುಮಾನ ಹುಟ್ಟುಕೊಂಡಿತ್ತು. ಈಗ ಸಿದ್ದಾರ್ಥ್ ಪ್ರೇಯಸಿ ಎನ್ನಲಾದ ಶೆಹನಾಜ್​ ಗಿಲ್​ ಅವರಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಸಿದ್ದಾರ್ಥ್​ಗೆ ಹೃದಯಾಘಾತವಾದ ದಿನ ಶೆಹನಾಜ್ ಕೂಡ ಅವರ ಜೊತೆ ಇದ್ದರು ಎಂಬ ಮಾಹಿತಿ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಸದ್ಯಕ್ಕೆ ಶೆಹನಾಜ್​ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಅಜಾತಶತ್ರುಗಳಾಗಿದ್ದ ಹೀರೋಗಳು:

ಸಿದ್ದಾರ್ಥ್​ ಶುಕ್ಲಾ ಮತ್ತು ಸುಶಾಂತ್​ ಸಿಂಗ್​ ರಜಪೂತ್​ ನಡುವೆ ಹಲವು ಗುಣಗಳು ಒಂದೇ ರೀತಿ ಇದ್ದವು. ಸುಶಾಂತ್​ ರೀತಿಯೇ ಸಿದ್ದಾರ್ಥ್​ ಅವರನ್ನು ಕೂಡ ಎಲ್ಲರೂ ಇಷ್ಟಪಡುತ್ತಿದ್ದರು. ಅನಗತ್ಯವಾಗಿ ಅವರು ಯಾರೊಂದಿಗೂ ಕಾಲು ಕೆರೆದು ಜಗಳಕ್ಕೆ ಹೋಗುತ್ತಿರಲಿಲ್ಲ. ಬಾಲಿವುಡ್​ನಲ್ಲಿ ಮಿಂಚಬೇಕಾಗಿದ್ದ ಈ ಪ್ರತಿಭಾವಂತರು ಅಕಾಲಿಕ ಮರಣ ಹೊಂದಿರುವುದು ಅವರ ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿದೆ.

ಇದನ್ನೂ ಓದಿ:

SSR Case: ಸುಶಾಂತ್​ ಸಿಂಗ್​ ರಜಪೂತ್​ ನಿಧನರಾಗಿ ಒಂದು ವರ್ಷ ಕಳೆಯುವುದರೊಳಗೆ ಆದ 30 ಪ್ರಮುಖ ಘಟನೆಗಳೇನು?

ಪ್ರೇಯಸಿ ಮಡಿಲಲ್ಲೇ ಪ್ರಾಣ ಬಿಟ್ರಾ ಸಿದ್ದಾರ್ಥ್​? ಹೃದಯಾಘಾತ ಆಗೋದಕ್ಕೂ ಮುನ್ನ ನಡೆದಿದ್ದೇನು? ಇಲ್ಲಿದೆ ವಿವರ

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್