ಕರಣ್ ಜೋಹರ್​ಗೆ ಶುರು ಆಗಿದೆಯಾ ಗಂಭೀರ ಕಾಯಿಲೆ? ಕಳವಳ ವ್ಯಕ್ತಪಡಿಸಿದ ನೆಟ್ಟಿಗರು

ದಿನದಿಂದ ದಿನಕ್ಕೆ ಕರಣ್​ ಜೋಹರ್​ ಅವರ ದೇಹದ ತೂಕ ಕಡಿಮೆ ಆಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಅದಕ್ಕೆ ಕಾರಣ ಆಗಿರುವುದು ಈ ಫೋಟೋ. ಸೋಶಿಯಲ್​ ಮೀಡಿಯಾದಲ್ಲಿ ಇದು ವೈರಲ್ ಆಗಿದೆ. ಫೋಟೋ ನೋಡಿದ ಬಹುತೇಕರು ಕರಣ್ ಜೋಹರ್​ ಅವರ ಆರೋಗ್ಯದ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ಅನೇಕರು ಟ್ರೋಲ್​ ಮಾಡುತ್ತಿದ್ದಾರೆ.

ಕರಣ್ ಜೋಹರ್​ಗೆ ಶುರು ಆಗಿದೆಯಾ ಗಂಭೀರ ಕಾಯಿಲೆ? ಕಳವಳ ವ್ಯಕ್ತಪಡಿಸಿದ ನೆಟ್ಟಿಗರು
ಕರಣ್​ ಜೋಹರ್​, ಹರ್ಷ್​ ಗುಜ್ರಾಲ್​
Follow us
|

Updated on: Oct 07, 2024 | 4:28 PM

ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್​ ಅವರು ಆಗಾಗ ಜನರ ಗಮನ ಸೆಳೆಯುತ್ತಾರೆ. ಬಹುತೇಕ ಸಂದರ್ಭಗಳಲ್ಲಿ ನೆಟ್ಟಿಗರು ಅವರನ್ನು ಟ್ರೋಲ್​ ಮಾಡುತ್ತಾರೆ. ಬಾಲಿವುಡ್​ನಲ್ಲಿ ನೆಪೋಟಿಸಂ ಪೋಷಿಸುವ ವ್ಯಕ್ತಿ ಎಂಬ ಕಾರಣಕ್ಕೆ ಕರಣ್ ಜೋಹರ್​ ಅವರನ್ನು ಕಂಡರೆ ಬಹುತೇಕರಿಗೆ ಅಸಮಾಧಾನ ಇದೆ. ಈಗ ಕರಣ್​ ಜೋಹರ್​ ಅವರ ಹೊಸ ಫೋಟೋ ವೈರಲ್​ ಆಗಿದೆ. ಆ ಫೋಟೋದಲ್ಲಿ ಅವರು ಸಖತ್​ ತೆಳ್ಳಗೆ ಕಾಣಿಸಿಕೊಂಡಿದ್ದಾರೆ. ಆದ್ದರಿಂದ ಅವರಿಗೆ ಏನಾದರೂ ಕಾಯಿಲೆ ಇರಬಹುದೇ ಎಂದು ನೆಟ್ಟಿಗರು ಊಹಿಸುತ್ತಿದ್ದಾರೆ.

ಹಾಸ್ಯ ಕಲಾವಿವ ಹರ್ಷ್​ ಗುಜ್ರಾಲ್​ ಜೊತೆ ಕರಣ್ ಜೋಹರ್ ಅವರು ಫೋಸ್​ ನೀಡಿದ್ದಾರೆ. ಈ ಫೋಟೋ ನೋಡಿದ ಬಳಿಕ ಅವರ ಆರೋಗ್ಯದ ಬಗ್ಗೆ ಅನೇಕರಿಗೆ ಅನುಮಾನ ಮೂಡುವಂತಿದೆ. ಏನೋ ಅನಾರೋಗ್ಯ ಕಾಡುತ್ತಿರುವುದುದರಿಂದ ಕರಣ್​ ಜೋಹರ್​ ಇಷ್ಟೊಂದು ಸ್ಲಿಮ್​ ಆಗಿದ್ದಾರೆ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ದೇಹದ ತೂಕ ಕಡಿಮೆ ಆಗುತ್ತಿರುವುದಕ್ಕೆ ಕೆಲವರು ಆತಂಕ ವ್ಯಕ್ತಪಡಿಸಿದ್ದಾರೆ.

‘ಕರಣ್ ಜೋಹರ್​ ಅವರಿಗೆ ಅನಾರೋಗ್ಯ ಆದಂತಿದೆ. ನನಗೆ ಅವರ ಬಗ್ಗೆ ಕಳವಳ ಉಂಟಾಗಿದೆ. ನೆಗೆಟಿವ್​ ವಿಚಾರಗಳು ಮತ್ತು ಹೊಟ್ಟೆಕಿಚ್ಚು ಅವರ ಆರೋಗ್ಯವನ್ನು ಹಾಳು ಮಾಡಿರುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಆಲಿಯಾ ಭಟ್​ ಅವರನ್ನು ನಂಬರ್​ 1 ಸ್ಟಾರ್​ ಮಾಡಬೇಕು ಎಂಬ ಪ್ರಯತ್ನದಿಂದ ಕರಣ್ ಜೋಹರ್​ ಅವರಿಗೆ ಸಿಕ್ಕಿದ್ದು ಕೇವಲ ದ್ವೇಷ ಮತ್ತು ನೆಗೆಟಿವಿಟಿ’ ಎಂದು ಒಂದು ‘ಎಕ್ಸ್’ ಖಾತೆಯಲ್ಲಿ ಪೋಸ್ಟ್​ ಮಾಡಲಾಗಿದೆ.

ಇದನ್ನೂ ಓದಿ: ಕರಣ್ ಜೋಹರ್​ ನಿರ್ಮಾಣದ ಸಿನಿಮಾದಲ್ಲಿ ಇಂದ್ರಜಿತ್​ ಲಂಕೇಶ್​ ಪುತ್ರ ಸಮರ್ಜಿತ್

ವೈರಲ್ ಆಗಿರುವ ಫೋಟೋ ನೋಡಿ ಜನರು ಅನೇಕ ರೀತಿಯಲ್ಲಿ ಊಹೆ ಮಾಡಿಕೊಂಡಿದ್ದಾರೆ. ಕರಣ್ ಜೋಹರ್​ ನಶೆಯಲ್ಲಿ ಇರಬಹುದು. ಆ ಕಾರಣದಿಂದಲೇ ಅವರು ದಿನದಿಂದ ದಿನಕ್ಕೆ ದೇಹದ ತೂಕ ಕಳೆದುಕೊಳ್ಳುತ್ತಿದ್ದಾರೆ ಎಂಬ ಕಮೆಂಟ್​ ಕೂಡ ಬಂದಿದೆ. ನಿರ್ಮಾಪಕನಾಗಿ, ನಿರ್ದೇಶಕನಾಗಿ ಮಾತ್ರವಲ್ಲದೇ ನಿರೂಪಕನಾಗಿಯೂ ಕರಣ್ ಜೋಹರ್​ ಅವರು ಫೇಮಸ್​ ಆಗಿದ್ದಾರೆ. ‘ಕಾಫಿ ವಿತ್​ ಕರಣ್​’ ಕಾರ್ಯಕ್ರಮಕ್ಕೆ ಸಖತ್ ಜನಪ್ರಿಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಐದನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ನವರಾತ್ರಿ ಐದನೇ ದಿನ ಸ್ಕಂದ ಮಾತೆಯ ಆರಾಧನೆ ಮಹತ್ವ ತಿಳಿಯಿರಿ
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​