AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರಣ್ ಜೋಹರ್​ಗೆ ಶುರು ಆಗಿದೆಯಾ ಗಂಭೀರ ಕಾಯಿಲೆ? ಕಳವಳ ವ್ಯಕ್ತಪಡಿಸಿದ ನೆಟ್ಟಿಗರು

ದಿನದಿಂದ ದಿನಕ್ಕೆ ಕರಣ್​ ಜೋಹರ್​ ಅವರ ದೇಹದ ತೂಕ ಕಡಿಮೆ ಆಗುತ್ತಿದೆಯಾ ಎಂಬ ಅನುಮಾನ ಮೂಡಿದೆ. ಅದಕ್ಕೆ ಕಾರಣ ಆಗಿರುವುದು ಈ ಫೋಟೋ. ಸೋಶಿಯಲ್​ ಮೀಡಿಯಾದಲ್ಲಿ ಇದು ವೈರಲ್ ಆಗಿದೆ. ಫೋಟೋ ನೋಡಿದ ಬಹುತೇಕರು ಕರಣ್ ಜೋಹರ್​ ಅವರ ಆರೋಗ್ಯದ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ಅನೇಕರು ಟ್ರೋಲ್​ ಮಾಡುತ್ತಿದ್ದಾರೆ.

ಕರಣ್ ಜೋಹರ್​ಗೆ ಶುರು ಆಗಿದೆಯಾ ಗಂಭೀರ ಕಾಯಿಲೆ? ಕಳವಳ ವ್ಯಕ್ತಪಡಿಸಿದ ನೆಟ್ಟಿಗರು
ಕರಣ್​ ಜೋಹರ್​, ಹರ್ಷ್​ ಗುಜ್ರಾಲ್​
ಮದನ್​ ಕುಮಾರ್​
|

Updated on: Oct 07, 2024 | 4:28 PM

Share

ನಿರ್ಮಾಪಕ, ನಿರ್ದೇಶಕ ಕರಣ್ ಜೋಹರ್​ ಅವರು ಆಗಾಗ ಜನರ ಗಮನ ಸೆಳೆಯುತ್ತಾರೆ. ಬಹುತೇಕ ಸಂದರ್ಭಗಳಲ್ಲಿ ನೆಟ್ಟಿಗರು ಅವರನ್ನು ಟ್ರೋಲ್​ ಮಾಡುತ್ತಾರೆ. ಬಾಲಿವುಡ್​ನಲ್ಲಿ ನೆಪೋಟಿಸಂ ಪೋಷಿಸುವ ವ್ಯಕ್ತಿ ಎಂಬ ಕಾರಣಕ್ಕೆ ಕರಣ್ ಜೋಹರ್​ ಅವರನ್ನು ಕಂಡರೆ ಬಹುತೇಕರಿಗೆ ಅಸಮಾಧಾನ ಇದೆ. ಈಗ ಕರಣ್​ ಜೋಹರ್​ ಅವರ ಹೊಸ ಫೋಟೋ ವೈರಲ್​ ಆಗಿದೆ. ಆ ಫೋಟೋದಲ್ಲಿ ಅವರು ಸಖತ್​ ತೆಳ್ಳಗೆ ಕಾಣಿಸಿಕೊಂಡಿದ್ದಾರೆ. ಆದ್ದರಿಂದ ಅವರಿಗೆ ಏನಾದರೂ ಕಾಯಿಲೆ ಇರಬಹುದೇ ಎಂದು ನೆಟ್ಟಿಗರು ಊಹಿಸುತ್ತಿದ್ದಾರೆ.

ಹಾಸ್ಯ ಕಲಾವಿವ ಹರ್ಷ್​ ಗುಜ್ರಾಲ್​ ಜೊತೆ ಕರಣ್ ಜೋಹರ್ ಅವರು ಫೋಸ್​ ನೀಡಿದ್ದಾರೆ. ಈ ಫೋಟೋ ನೋಡಿದ ಬಳಿಕ ಅವರ ಆರೋಗ್ಯದ ಬಗ್ಗೆ ಅನೇಕರಿಗೆ ಅನುಮಾನ ಮೂಡುವಂತಿದೆ. ಏನೋ ಅನಾರೋಗ್ಯ ಕಾಡುತ್ತಿರುವುದುದರಿಂದ ಕರಣ್​ ಜೋಹರ್​ ಇಷ್ಟೊಂದು ಸ್ಲಿಮ್​ ಆಗಿದ್ದಾರೆ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ದೇಹದ ತೂಕ ಕಡಿಮೆ ಆಗುತ್ತಿರುವುದಕ್ಕೆ ಕೆಲವರು ಆತಂಕ ವ್ಯಕ್ತಪಡಿಸಿದ್ದಾರೆ.

‘ಕರಣ್ ಜೋಹರ್​ ಅವರಿಗೆ ಅನಾರೋಗ್ಯ ಆದಂತಿದೆ. ನನಗೆ ಅವರ ಬಗ್ಗೆ ಕಳವಳ ಉಂಟಾಗಿದೆ. ನೆಗೆಟಿವ್​ ವಿಚಾರಗಳು ಮತ್ತು ಹೊಟ್ಟೆಕಿಚ್ಚು ಅವರ ಆರೋಗ್ಯವನ್ನು ಹಾಳು ಮಾಡಿರುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ಆಲಿಯಾ ಭಟ್​ ಅವರನ್ನು ನಂಬರ್​ 1 ಸ್ಟಾರ್​ ಮಾಡಬೇಕು ಎಂಬ ಪ್ರಯತ್ನದಿಂದ ಕರಣ್ ಜೋಹರ್​ ಅವರಿಗೆ ಸಿಕ್ಕಿದ್ದು ಕೇವಲ ದ್ವೇಷ ಮತ್ತು ನೆಗೆಟಿವಿಟಿ’ ಎಂದು ಒಂದು ‘ಎಕ್ಸ್’ ಖಾತೆಯಲ್ಲಿ ಪೋಸ್ಟ್​ ಮಾಡಲಾಗಿದೆ.

ಇದನ್ನೂ ಓದಿ: ಕರಣ್ ಜೋಹರ್​ ನಿರ್ಮಾಣದ ಸಿನಿಮಾದಲ್ಲಿ ಇಂದ್ರಜಿತ್​ ಲಂಕೇಶ್​ ಪುತ್ರ ಸಮರ್ಜಿತ್

ವೈರಲ್ ಆಗಿರುವ ಫೋಟೋ ನೋಡಿ ಜನರು ಅನೇಕ ರೀತಿಯಲ್ಲಿ ಊಹೆ ಮಾಡಿಕೊಂಡಿದ್ದಾರೆ. ಕರಣ್ ಜೋಹರ್​ ನಶೆಯಲ್ಲಿ ಇರಬಹುದು. ಆ ಕಾರಣದಿಂದಲೇ ಅವರು ದಿನದಿಂದ ದಿನಕ್ಕೆ ದೇಹದ ತೂಕ ಕಳೆದುಕೊಳ್ಳುತ್ತಿದ್ದಾರೆ ಎಂಬ ಕಮೆಂಟ್​ ಕೂಡ ಬಂದಿದೆ. ನಿರ್ಮಾಪಕನಾಗಿ, ನಿರ್ದೇಶಕನಾಗಿ ಮಾತ್ರವಲ್ಲದೇ ನಿರೂಪಕನಾಗಿಯೂ ಕರಣ್ ಜೋಹರ್​ ಅವರು ಫೇಮಸ್​ ಆಗಿದ್ದಾರೆ. ‘ಕಾಫಿ ವಿತ್​ ಕರಣ್​’ ಕಾರ್ಯಕ್ರಮಕ್ಕೆ ಸಖತ್ ಜನಪ್ರಿಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ