AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಛತ್ರಪತಿ ಶಿವಾಜಿ ಪಾತ್ರ ಮಾಡಲು ಹೋಗಿ ಟ್ರೋಲ್​ ಆದ ಅಕ್ಷಯ್​ ಕುಮಾರ್​; ಇಲ್ಲಿದೆ ಕಾರಣ

Vedat Marathe Veer Daudale Saat: ಅಕ್ಷಯ್​ ಕುಮಾರ್​ ಅವರು ಶಿವಾಜಿ ಪಾತ್ರಕ್ಕೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆರಂಭದಲ್ಲೇ ಈ ಪರಿ ಟ್ರೋಲ್​ ಆಗಿರುವುದರಿಂದ ಅವರು ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ.

Akshay Kumar: ಛತ್ರಪತಿ ಶಿವಾಜಿ ಪಾತ್ರ ಮಾಡಲು ಹೋಗಿ ಟ್ರೋಲ್​ ಆದ ಅಕ್ಷಯ್​ ಕುಮಾರ್​; ಇಲ್ಲಿದೆ ಕಾರಣ
ಅಕ್ಷಯ್ ಕುಮಾರ್
TV9 Web
| Edited By: |

Updated on: Dec 07, 2022 | 3:00 PM

Share

ನಟ ಅಕ್ಷಯ್​ ಕುಮಾರ್​ (Akshay Kumar) ಅವರಿಗೆ ಈಗ ಟೈಮ್​ ಚೆನ್ನಾಗಿಲ್ಲ ಎಂದೇ ಹೇಳಬಹುದು. ಈ ವರ್ಷ ಅವರು ನಟಿಸಿದ ಯಾವ ಸಿನಿಮಾ ಕೂಡ ಕೈ ಹಿಡಿದಿಲ್ಲ. ಗಲ್ಲಾಪೆಟ್ಟಿಗೆಯಲ್ಲಿನ ಸೋಲು ಒಂದು ಕಡೆಯಾದರೆ, ಅವರು ಹಿಗ್ಗಾಮುಗ್ಗಾ ಟ್ರೋಲ್​ (Akshay Kumar Troll) ಆಗುತ್ತಿರುವುದು ಇನ್ನೊಂದು ಕಡೆ. ಸೂಕ್ತ ತಯಾರಿ ಇಲ್ಲದೇ ಅವರು ಚಿತ್ರೀಕರಣದ ಸೆಟ್​ಗೆ ಬರುತ್ತಾರೆ ಎಂಬುದು ಪದೇಪದೇ ಸಾಬೀತಾಗುತ್ತಿದೆ. ಅವರು ನಟಿಸುತ್ತಿರುವ ಮರಾಠಿ ಸಿನಿಮಾ ‘ವೇಡಾತ್​ ಮರಾಠೆ ವೀರ್ ದೌಡಲೇ ಸಾಥ್’ ನಿನ್ನೆಯಷ್ಟೇ (ಡಿ.6) ಶೂಟಿಂಗ್​ ಆರಂಭಿಸಿದೆ. ಫಸ್ಟ್​ ಲುಕ್​ ಕೂಡ ಬಿಡುಗಡೆ ಮಾಡಲಾಗಿದೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​ ಅವರು ಛತ್ರಪತಿ ಶಿವಾಜಿ (Chhatrapati Shivaji) ಪಾತ್ರವನ್ನು ಮಾಡುತ್ತಿದ್ದಾರೆ. ಆದರೆ ಜನರು ಸಖತ್​ ಟ್ರೋಲ್​ ಮಾಡುತ್ತಿದ್ದಾರೆ. ಅದಕ್ಕೆ ಒಂದಷ್ಟು ಕಾರಣಗಳಿವೆ.

ಅಕ್ಷಯ್​ ಕುಮಾರ್​ ಅವರಿಗೆ ಈಗ 55 ವರ್ಷ ವಯಸ್ಸು. ತಮ್ಮ ವಯಸ್ಸಿಗೆ ಒಪ್ಪುವಂತಹ ಪಾತ್ರಗಳನ್ನು ಮಾಡುವುದು ಬಿಟ್ಟು, ಬಿಸಿ ರಕ್ತದ ವೀರ ಯೋಧರ ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುತ್ತಿರುವುದೇ ಅಕ್ಷಯ್​ ಕುಮಾರ್​ ಅವರಿಗೆ ಮುಳುವಾಗುತ್ತಿದೆ. ಇದೇ ವಿಚಾರವನ್ನು ಇಟ್ಟುಕೊಂಡು ಒಂದಷ್ಟು ಮಂದಿ ಕಾಲೆಳೆಯುತ್ತಿದ್ದಾರೆ. ಛತ್ರಪತಿ ಶಿವಾಜಿ ಪಾತ್ರಕ್ಕೆ ಅಕ್ಷಯ್​ ಕುಮಾರ್​ ಸೂಕ್ತ ಆಯ್ಕೆ ಅಲ್ಲ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.

ಇದನ್ನೂ ಓದಿ
Image
Akshay Kumar: ಸತತ ಸೋಲು ಕಂಡರೂ ಅಕ್ಷಯ್​ ಕುಮಾರ್​ ನಂ.1; ಇದು ಯಾವ ಲೆಕ್ಕಾಚಾರ?
Image
Cuttputlli: ಒಟಿಟಿಯಲ್ಲಿ ಅಕ್ಷಯ್​ ಕುಮಾರ್​ ಚಿತ್ರಕ್ಕೆ ಗೆಲುವು; ಪೂರ್ತಿ ಬದಲಾಗುತ್ತಾ ಸ್ಟಾರ್​ ನಟನ ಭವಿಷ್ಯದ ಪ್ಲ್ಯಾನ್​?
Image
Akshay Kumar: ವರದಕ್ಷಿಣೆ ಪಿಡುಗಿಗೆ ಅಕ್ಷಯ್​ ಕುಮಾರ್ ಪ್ರೋತ್ಸಾಹ? ಸರ್ಕಾರಿ ಜಾಹೀರಾತಿನಲ್ಲಿ ದೊಡ್ಡ ಎಡವಟ್ಟು
Image
Cuttputlli: ತಪ್ಪು ತಿದ್ದಿಕೊಂಡ ಅಕ್ಷಯ್​ ಕುಮಾರ್​; ಒಂದು ನಿರ್ಧಾರದಿಂದ ಆಯ್ತು ನೂರಾರು ಕೋಟಿ ರೂ. ಲಾಭ

ಇದನ್ನೂ ಓದಿ: Akshay Kumar: ಸತತ ಸೋಲಿನ ಬಳಿಕ ಲೈಂಗಿಕ ಶಿಕ್ಷಣದ ಬಗ್ಗೆ ಸಿನಿಮಾ ಮಾಡಲು ಮುಂದಾದ ನಟ ಅಕ್ಷಯ್​ ಕುಮಾರ್​

ಇನ್ನು, ‘ವೇಡಾತ್​ ಮರಾಠೆ ವೀರ್ ದೌಡಲೇ ಸಾಥ್’ ಸಿನಿಮಾದ ನಿರ್ದೇಶನ ತಂಡದವರು ಸರಿಯಾಗಿ ಅಧ್ಯಯನ ನಡೆಸಿಲ್ಲ ಎಂಬ ಆರೋಪ ಕೂಡ ಕೇಳಿಬಂದಿದೆ. ಫಸ್ಟ್​ ಲುಕ್​ ಬಿಡುಗಡೆ ಮಾಡುವುದರ ಜೊತೆಗೆ ಅಕ್ಷಯ್​ ಕುಮಾರ್​ ಅವರು ಒಂದು ಚಿಕ್ಕ ವಿಡಿಯೋ ಕೂಡ ಹಂಚಿಕೊಂಡಿದ್ದರು. ಆ ವಿಡಿಯೋದಲ್ಲಿ ವಿದ್ಯುತ್​ ಬಲ್ಬ್​ಗಳು ಕಾಣಿಸಿವೆ. ಛತ್ರಪತಿ ಶಿವಾಜಿ ಕಾಲದಲ್ಲಿ ವಿದ್ಯುತ್​ ಬಲ್ಬ್​ ಹೇಗೆ ಇರಲು ಸಾಧ್ಯ ಎಂದು ಜನರು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: Akshay Kumar: ಛತ್ರಪತಿ ಶಿವಾಜಿ ಪಾತ್ರದಲ್ಲಿ ಅಕ್ಷಯ್ ಕುಮಾರ್​; ಮರಾಠಿ ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆ

ಅಕ್ಷಯ್​ ಕುಮಾರ್​ ನಟಿಸಿದ್ದ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾದಲ್ಲೂ ಕೂಡ ಇಂಥ ತಪ್ಪುಗಳು ಸಾಕಷ್ಟಿದ್ದವು. ಅವುಗಳನ್ನು ಇಟ್ಟುಕೊಂಡು ಜನರು ಸಿಕ್ಕಾಪಟ್ಟೆ ಟೀಕೆ ಮಾಡಿದ್ದರು. ಶಿವಾಜಿ ಗೆಟಪ್​ನಲ್ಲಿ ಅಕ್ಷಯ್​ ಕುಮಾರ್​ ಅವರ ಮೀಸೆ-ಗಡ್ಡ ಫೇಕ್​ ಅನಿಸುತ್ತದೆ ಎಂದು ಕೂಡ ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ಈ ರೀತಿ ಮಾಡಿದರೆ ಛತ್ರಪತಿ ಶಿವಾಜಿ ಪಾತ್ರಕ್ಕೆ ಅವರು ನ್ಯಾಯ ಒದಗಿಸಲು ಸಾಧ್ಯವಿಲ್ಲ ಎಂಬ ಅಭಿಪ್ರಾಯ ಜನರಿಂದ ಕೇಳಿಬಂದಿದೆ.

ಮಹೇಶ್ ಮಂಜ್ರೇಕರ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಆರಂಭದಲ್ಲೇ ಈ ಪರಿ ಟ್ರೋಲ್​ ಆಗಿರುವುದರಿಂದ ಅವರು ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ. ಅಕ್ಷಯ್​ ಕುಮಾರ್​ ಅವರು ಗಡಿಬಿಡಿಯಲ್ಲಿ ಸಿನಿಮಾ ಕೆಲಸಗಳನ್ನು ಮುಗಿಸುವ ಗುರಿ ಇಟ್ಟುಕೊಳ್ಳುವ ಬದಲು ನಿಖರತೆಗೆ ಹೆಚ್ಚಿನ ಗಮನ ನೀಡಬೇಕಿದೆ ಎಂಬ ಅಭಿಪ್ರಾಯ ಸಿನಿಪ್ರಿಯರಿಂದ ವ್ಯಕ್ತವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್