AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adipurush: ‘ಬ್ರಾಹ್ಮಣನಾದ ರಾವಣ ಈ ಚಿತ್ರದಲ್ಲಿ ಮಾಂಸ ಮುಟ್ಟಿದ್ದು ತಪ್ಪು’: ‘ಆದಿಪುರುಷ್​’ ಬ್ಯಾನ್​ಗೆ ನೆಟ್ಟಿಗರ ಒತ್ತಾಯ

Ban Adipurush Movie: ‘ಆದಿಪುರುಷ್​’ ಚಿತ್ರದಲ್ಲಿ ರಾವಣನು ತಾನು ಸಾಕಿದ ದೈತ್ಯಾಕಾರದ ಬಾವಲಿಗೆ ತನ್ನ ಕೈಯಾರೆ ಮಾಂಸ ತಿನ್ನಿಸುತ್ತಾನೆ. ಯಾವುದೋ ದೊಡ್ಡ ಪ್ರಾಣಿಯ ಹಸಿ ಮಾಂಸವನ್ನು ಆತ ಮುಟ್ಟುತ್ತಾನೆ.

Adipurush: ‘ಬ್ರಾಹ್ಮಣನಾದ ರಾವಣ ಈ ಚಿತ್ರದಲ್ಲಿ ಮಾಂಸ ಮುಟ್ಟಿದ್ದು ತಪ್ಪು’: ‘ಆದಿಪುರುಷ್​’ ಬ್ಯಾನ್​ಗೆ ನೆಟ್ಟಿಗರ ಒತ್ತಾಯ
ಸೈಫ್​ ಅಲಿ ಖಾನ್​
ಮದನ್​ ಕುಮಾರ್​
|

Updated on:Jun 19, 2023 | 4:35 PM

Share

ಒಂದೆಡೆ ‘ಆದಿಪುರುಷ್​’ ಸಿನಿಮಾ (Adipurush Movie) ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಇನ್ನೊಂದೆಡೆ ಈ ಸಿನಿಮಾವನ್ನು ಬ್ಯಾನ್​ ಮಾಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ನಿರ್ದೇಶಕ ಓಂ ರಾವತ್​ (Om Raut) ಅವರು ಈ ಚಿತ್ರದ ಬಗ್ಗೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಅವರು ಅಂದುಕೊಂಡ ರೀತಿಯಲ್ಲಿ ಜನರು ಈ ಸಿನಿಮಾವನ್ನು ಸ್ವೀಕರಿಸಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಕಾರಣಗಳಿಂದಾಗಿ ‘ಆದಿಪುರುಷ್​’ ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಲಾಗುತ್ತಿದೆ. ಅದರಲ್ಲೂ ರಾವಣನ ಪಾತ್ರದ ಬಗ್ಗೆ ಬಹಳ ಟೀಕೆ ವ್ಯಕ್ತವಾಗುತ್ತಿದೆ. ಸೈಫ್​ ಅಲಿ ಖಾನ್​ (Saif Ali Khan) ಅವರು ಈ ಪಾತ್ರ ಮಾಡಿದ್ದಾರೆ. ‘ಆದಿಪುರುಷ್​’ ಸಿನಿಮಾವನ್ನು ಬ್ಯಾನ್​ ಮಾಡಬೇಕು ಎಂದು ಕೆಲವರು ತಕರಾರು ತೆಗೆದಿದ್ದಾರೆ. ಹಾಗಾಗಿ ಟ್ವಿಟರ್​ನಲ್ಲಿ #BanAdipurushMovie ಎಂಬ ಹ್ಯಾಶ್​ಟ್ಯಾಗ್​ ಸಖತ್​ ಟ್ರೆಂಡ್​ ಆಗಿದೆ.

‘ಆದಿಪುರುಷ್​’ ಸಿನಿಮಾದಲ್ಲಿ ಪ್ರಭಾಸ್​ ಅವರು ರಾಮನಾಗಿ ನಟಿಸಿದ್ದರೆ, ಅವರ ಎದುರು ರಾವಣನ ಪಾತ್ರದಲ್ಲಿ ಸೈಫ್​ ಅಲಿ ಖಾನ್​ ಅವರು ಆರ್ಭಟಿಸಿದ್ದಾರೆ. ಅವರ ಪಾತ್ರವನ್ನು ಇಟ್ಟುಕೊಂಡು ಸಿಕ್ಕಾಪಟ್ಟೆ ಟ್ರೋಲ್​ ಮಾಡಲಾಗುತ್ತಿದೆ. ರಾವಣನ ಗೆಟಪ್​, ಆತ ನಡೆದುಕೊಳ್ಳುವ ರೀತಿ, ಪುಷ್ಪಕ ವಿಮಾನದ ಬದಲಿಗೆ ದೈತ್ಯಾಕಾರದ ಬಾವಲಿ ಬಳಕೆ ಆಗಿರುವುದು ಸೇರಿದಂತೆ ಅನೇಕ ಸಂಗತಿಗಳು ಟೀಕೆಗೆ ಒಳಗಾಗುತ್ತಿವೆ. ಇನ್ನೊಂದು ಪ್ರಮುಖ ಅಂಶ ಏನೆಂದರೆ ‘ಬ್ರಾಹ್ಮಣನಾದ ರಾವಣನು ಈ ಸಿನಿಮಾದಲ್ಲಿ ಮಾಂಸ ಏಕೆ ಮುಟ್ಟಿದ್ದಾನೆ’ ಎಂಬ ಪ್ರಶ್ನೆ ಎದುರಾಗಿದೆ.

ಇದನ್ನೂ ಓದಿ: Hanuman: ‘ಆದಿಪುರುಷ್​’ ಬಳಿಕ ‘ಹನುಮಾನ್​’ ಸಿನಿಮಾ ಮೇಲೆ ಮೂಡಿದೆ ನಿರೀಕ್ಷೆ: ಇದೂ ಸಹ ಪ್ಯಾನ್​ ಇಂಡಿಯಾ ಚಿತ್ರ

ತಾನು ಸಾಕಿದ ದೈತ್ಯಾಕಾರದ ಬಾವಲಿಗೆ ರಾವಣನು ತನ್ನ ಕೈಯಾರೆ ಮಾಂಸ ತಿನ್ನಿಸುತ್ತಾನೆ. ಯಾವುದೋ ದೊಡ್ಡ ಪ್ರಾಣಿಯ ಹಸಿ ಮಾಂಸವನ್ನು ಆತ ಮುಟ್ಟುತ್ತಾನೆ. ಈ ದೃಶ್ಯದ ಬಗ್ಗೆ ಟೀಕೆ ಮಾಡಲಾಗುತ್ತಿದೆ. ಸಿನಿಮಾದಲ್ಲಿನ ಇನ್ನೂ ಅನೇಕ ದೃಶ್ಯಗಳಿಗೆ ತಕರಾರು ಎದುರಾಗಿದೆ. ಈ ಕಾರಣದಿಂದ ‘ಆದಿಪುರುಷ್​’ ಚಿತ್ರವನ್ನು ಬ್ಯಾನ್​ ಮಾಡಬೇಕು ಎಂದು ಒಂದು ವರ್ಗದ ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ.

ಈ ಸಿನಿಮಾದಲ್ಲಿ ಆಂಜನೇಯನ ಪಾತ್ರವನ್ನು ದೇವದತ್ತ ನಾಗೆ ಅವರು ನಿಭಾಯಿಸಿದ್ದಾರೆ. ಹನುಮಂತನ ಸಂಭಾಷಣೆಗಳು ತೀರಾ ಕಳಪೆ ಆಗಿವೆ ಎಂದು ಬಹುತೇಕರು ಟೀಕಿಸಿದ್ದಾರೆ. ಈ ಸಿನಿಮಾದಿಂದ ನಿರ್ದೇಶಕ ಓಂ ರಾವತ್​ ಅವರು ಹಲವರ ಕೆಂಗಣ್ಣಿಗೆ ಗುರಿ ಆಗಿದ್ದಾರೆ. ರಾಮಾಯಣವನ್ನು ತಪ್ಪಾಗಿ ಚಿತ್ರಿಸಿರುವುದಕ್ಕೆ ಇಡೀ ಚಿತ್ರತಂಡದವರು ಕ್ಷಮೆ ಕೇಳಬೇಕು ಎಂದು ಹಲವರು ಒತ್ತಾಯಿಸುತ್ತಿದ್ದಾರೆ. ಈ ಸಮಯದಲ್ಲಿ ಪ್ರಭಾಸ್​ ಅವರು ಮೌನಕ್ಕೆ ಶರಣಾಗಿದ್ದಾರೆ. ಅವರ ಮುಂಬರುವ ಸಿನಿಮಾಗಳ ಮೇಲೆ ಇದು ಪರಿಣಾಮ ಬೀರುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:31 pm, Mon, 19 June 23

Follow Us
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ