Adipurush: ‘ಬ್ರಾಹ್ಮಣನಾದ ರಾವಣ ಈ ಚಿತ್ರದಲ್ಲಿ ಮಾಂಸ ಮುಟ್ಟಿದ್ದು ತಪ್ಪು’: ‘ಆದಿಪುರುಷ್​’ ಬ್ಯಾನ್​ಗೆ ನೆಟ್ಟಿಗರ ಒತ್ತಾಯ

Ban Adipurush Movie: ‘ಆದಿಪುರುಷ್​’ ಚಿತ್ರದಲ್ಲಿ ರಾವಣನು ತಾನು ಸಾಕಿದ ದೈತ್ಯಾಕಾರದ ಬಾವಲಿಗೆ ತನ್ನ ಕೈಯಾರೆ ಮಾಂಸ ತಿನ್ನಿಸುತ್ತಾನೆ. ಯಾವುದೋ ದೊಡ್ಡ ಪ್ರಾಣಿಯ ಹಸಿ ಮಾಂಸವನ್ನು ಆತ ಮುಟ್ಟುತ್ತಾನೆ.

Adipurush: ‘ಬ್ರಾಹ್ಮಣನಾದ ರಾವಣ ಈ ಚಿತ್ರದಲ್ಲಿ ಮಾಂಸ ಮುಟ್ಟಿದ್ದು ತಪ್ಪು’: ‘ಆದಿಪುರುಷ್​’ ಬ್ಯಾನ್​ಗೆ ನೆಟ್ಟಿಗರ ಒತ್ತಾಯ
ಸೈಫ್​ ಅಲಿ ಖಾನ್​
Follow us
|

Updated on:Jun 19, 2023 | 4:35 PM

ಒಂದೆಡೆ ‘ಆದಿಪುರುಷ್​’ ಸಿನಿಮಾ (Adipurush Movie) ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಇನ್ನೊಂದೆಡೆ ಈ ಸಿನಿಮಾವನ್ನು ಬ್ಯಾನ್​ ಮಾಡಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ. ನಿರ್ದೇಶಕ ಓಂ ರಾವತ್​ (Om Raut) ಅವರು ಈ ಚಿತ್ರದ ಬಗ್ಗೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಅವರು ಅಂದುಕೊಂಡ ರೀತಿಯಲ್ಲಿ ಜನರು ಈ ಸಿನಿಮಾವನ್ನು ಸ್ವೀಕರಿಸಿಲ್ಲ. ಸೋಶಿಯಲ್​ ಮೀಡಿಯಾದಲ್ಲಿ ಅನೇಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಕಾರಣಗಳಿಂದಾಗಿ ‘ಆದಿಪುರುಷ್​’ ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಲಾಗುತ್ತಿದೆ. ಅದರಲ್ಲೂ ರಾವಣನ ಪಾತ್ರದ ಬಗ್ಗೆ ಬಹಳ ಟೀಕೆ ವ್ಯಕ್ತವಾಗುತ್ತಿದೆ. ಸೈಫ್​ ಅಲಿ ಖಾನ್​ (Saif Ali Khan) ಅವರು ಈ ಪಾತ್ರ ಮಾಡಿದ್ದಾರೆ. ‘ಆದಿಪುರುಷ್​’ ಸಿನಿಮಾವನ್ನು ಬ್ಯಾನ್​ ಮಾಡಬೇಕು ಎಂದು ಕೆಲವರು ತಕರಾರು ತೆಗೆದಿದ್ದಾರೆ. ಹಾಗಾಗಿ ಟ್ವಿಟರ್​ನಲ್ಲಿ #BanAdipurushMovie ಎಂಬ ಹ್ಯಾಶ್​ಟ್ಯಾಗ್​ ಸಖತ್​ ಟ್ರೆಂಡ್​ ಆಗಿದೆ.

‘ಆದಿಪುರುಷ್​’ ಸಿನಿಮಾದಲ್ಲಿ ಪ್ರಭಾಸ್​ ಅವರು ರಾಮನಾಗಿ ನಟಿಸಿದ್ದರೆ, ಅವರ ಎದುರು ರಾವಣನ ಪಾತ್ರದಲ್ಲಿ ಸೈಫ್​ ಅಲಿ ಖಾನ್​ ಅವರು ಆರ್ಭಟಿಸಿದ್ದಾರೆ. ಅವರ ಪಾತ್ರವನ್ನು ಇಟ್ಟುಕೊಂಡು ಸಿಕ್ಕಾಪಟ್ಟೆ ಟ್ರೋಲ್​ ಮಾಡಲಾಗುತ್ತಿದೆ. ರಾವಣನ ಗೆಟಪ್​, ಆತ ನಡೆದುಕೊಳ್ಳುವ ರೀತಿ, ಪುಷ್ಪಕ ವಿಮಾನದ ಬದಲಿಗೆ ದೈತ್ಯಾಕಾರದ ಬಾವಲಿ ಬಳಕೆ ಆಗಿರುವುದು ಸೇರಿದಂತೆ ಅನೇಕ ಸಂಗತಿಗಳು ಟೀಕೆಗೆ ಒಳಗಾಗುತ್ತಿವೆ. ಇನ್ನೊಂದು ಪ್ರಮುಖ ಅಂಶ ಏನೆಂದರೆ ‘ಬ್ರಾಹ್ಮಣನಾದ ರಾವಣನು ಈ ಸಿನಿಮಾದಲ್ಲಿ ಮಾಂಸ ಏಕೆ ಮುಟ್ಟಿದ್ದಾನೆ’ ಎಂಬ ಪ್ರಶ್ನೆ ಎದುರಾಗಿದೆ.

ಇದನ್ನೂ ಓದಿ: Hanuman: ‘ಆದಿಪುರುಷ್​’ ಬಳಿಕ ‘ಹನುಮಾನ್​’ ಸಿನಿಮಾ ಮೇಲೆ ಮೂಡಿದೆ ನಿರೀಕ್ಷೆ: ಇದೂ ಸಹ ಪ್ಯಾನ್​ ಇಂಡಿಯಾ ಚಿತ್ರ

ತಾನು ಸಾಕಿದ ದೈತ್ಯಾಕಾರದ ಬಾವಲಿಗೆ ರಾವಣನು ತನ್ನ ಕೈಯಾರೆ ಮಾಂಸ ತಿನ್ನಿಸುತ್ತಾನೆ. ಯಾವುದೋ ದೊಡ್ಡ ಪ್ರಾಣಿಯ ಹಸಿ ಮಾಂಸವನ್ನು ಆತ ಮುಟ್ಟುತ್ತಾನೆ. ಈ ದೃಶ್ಯದ ಬಗ್ಗೆ ಟೀಕೆ ಮಾಡಲಾಗುತ್ತಿದೆ. ಸಿನಿಮಾದಲ್ಲಿನ ಇನ್ನೂ ಅನೇಕ ದೃಶ್ಯಗಳಿಗೆ ತಕರಾರು ಎದುರಾಗಿದೆ. ಈ ಕಾರಣದಿಂದ ‘ಆದಿಪುರುಷ್​’ ಚಿತ್ರವನ್ನು ಬ್ಯಾನ್​ ಮಾಡಬೇಕು ಎಂದು ಒಂದು ವರ್ಗದ ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ.

ಈ ಸಿನಿಮಾದಲ್ಲಿ ಆಂಜನೇಯನ ಪಾತ್ರವನ್ನು ದೇವದತ್ತ ನಾಗೆ ಅವರು ನಿಭಾಯಿಸಿದ್ದಾರೆ. ಹನುಮಂತನ ಸಂಭಾಷಣೆಗಳು ತೀರಾ ಕಳಪೆ ಆಗಿವೆ ಎಂದು ಬಹುತೇಕರು ಟೀಕಿಸಿದ್ದಾರೆ. ಈ ಸಿನಿಮಾದಿಂದ ನಿರ್ದೇಶಕ ಓಂ ರಾವತ್​ ಅವರು ಹಲವರ ಕೆಂಗಣ್ಣಿಗೆ ಗುರಿ ಆಗಿದ್ದಾರೆ. ರಾಮಾಯಣವನ್ನು ತಪ್ಪಾಗಿ ಚಿತ್ರಿಸಿರುವುದಕ್ಕೆ ಇಡೀ ಚಿತ್ರತಂಡದವರು ಕ್ಷಮೆ ಕೇಳಬೇಕು ಎಂದು ಹಲವರು ಒತ್ತಾಯಿಸುತ್ತಿದ್ದಾರೆ. ಈ ಸಮಯದಲ್ಲಿ ಪ್ರಭಾಸ್​ ಅವರು ಮೌನಕ್ಕೆ ಶರಣಾಗಿದ್ದಾರೆ. ಅವರ ಮುಂಬರುವ ಸಿನಿಮಾಗಳ ಮೇಲೆ ಇದು ಪರಿಣಾಮ ಬೀರುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:31 pm, Mon, 19 June 23

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ