AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪಾನ್ ಮಸಾಲಾದ ಪ್ರಚಾರದಿಂದ ದಯವಿಟ್ಟು ಹಿಂದೆ ಸರಿಯಿರಿ’; ಅಮಿತಾಭ್​ಗೆ ತಂಬಾಕು ವಿರೋಧಿ ಸಂಘಟನೆ ಒತ್ತಾಯ

Amitabh Bachchan: ಪಾನ್ ಮಸಾಲಾ ಕಂಪೆನಿಯೊಂದರ ಪ್ರಚಾರಕ ಸ್ಥಾನದಿಂದ ಹಿಂದೆ ಸರಿಯುವಂತೆ ಎನ್​ಜಿಒವೊಂದು ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರನ್ನು ಒತ್ತಾಯಿಸಿದೆ. ಈ ಕುರಿತು ಅದು ಪತ್ರವೊಂದನ್ನು ಬರೆದಿದೆ.

‘ಪಾನ್ ಮಸಾಲಾದ ಪ್ರಚಾರದಿಂದ ದಯವಿಟ್ಟು ಹಿಂದೆ ಸರಿಯಿರಿ’; ಅಮಿತಾಭ್​ಗೆ ತಂಬಾಕು ವಿರೋಧಿ ಸಂಘಟನೆ ಒತ್ತಾಯ
ಅಮಿತಾಭ್ ಬಚ್ಚನ್
TV9 Web
| Edited By: |

Updated on: Sep 24, 2021 | 12:33 PM

Share

ರಾಷ್ಟ್ರೀಯ ತಂಬಾಕು ವಿರೋಧಿ ಸಂಘಟನೆ (NOTE) ಎನ್​ಜಿಒ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಅವರನ್ನು ಪಾನ್ ಮಸಾಲಾ ಪ್ರಚಾರ ಮಾಡುವ ಜಾಹೀರಾತಿನಿಂದ ಹಿಂದೆ ಸರಿಯುವಂತೆ ಒತ್ತಾಯಿಸಿದೆ. ಅಮಿತಾಭ್ ಒಂದು ವೇಳೆ ಪ್ರಚಾರದಿಂದ ಹಿಂದೆ ಸರಿದರೆ ಯುವಕರನ್ನು ತಂಬಾಕಿನ ಚಟದಿಂದ ದೂರವಿಡಲು ಸಹಾಯವಾಗುತ್ತದೆ ಎಂದು ಸಂಸ್ಥೆ ತಿಳಿಸಿದೆ. ಎನ್​ಜಿಒದ ಅಧ್ಯಕ್ಷ ಡಾ.ಶೇಖರ್ ಸಲ್ಕರ್ ಬರೆದ ಬಹಿರಂಗ ಪತ್ರದಲ್ಲಿ ಅಮಿತಾಭ್ ಪಾನ್ ಮಸಾಲಾ (ಪರಿಮಳಯುಕ್ತ ತಂಬಾಕು ಮಿಶ್ರಣ) ಜಾಹೀರಾತುಗಳಿಂದ ಹಿಂದೆ ಸರಿಯಬೇಕು ಮತ್ತು ತಂಬಾಕು ವಿರೋಧಿ ಚಳುವಳಿಯ ಅಭಿಯಾನವನ್ನು ಬೆಂಬಲಿಸಬೇಕು ಎಂದು ಕೋರಿಕೊಂಡಿದ್ದಾರೆ.

ತಂಬಾಕು ಮತ್ತು ಪಾನ್ ಮಸಾಲಾ ಸೇವನೆಯು ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು ಮತ್ತು ದೀರ್ಘಕಾಲಿಕ ಶ್ವಾಸಕೋಶದ ಕಾಯಿಲೆಗಳಿಗೆ ಕಾರಣವಾಗುತ್ತವೆ ಎನ್ನುವುದನ್ನು ವೈದ್ಯಕೀಯ ಸಂಶೋಧನೆಗಳು ಈಗಾಗಲೇ ತೋರಿಸಿವೆ ಎಂದು ಶೇಖರ್ ಹೇಳಿದ್ದಾರೆ. ಈ ಕುರಿತು ಅಮಿತಾಭ್​ಗೆ ಬರೆದ ಪತ್ರದಲ್ಲಿ ಹಲವು ವಿಚಾರಗಳನ್ನು ಅವರು ಪ್ರಸ್ತಾಪಿಸಿದ್ದು, ಪೋಲಿಯೋ ಸೇರಿದಂತೆ ಸರ್ಕಾರದ ಉನ್ನತ ಮಟ್ಟದ ಸಮಾಜ ಮುಖಿ ಕಾರ್ಯಗಳ ರಾಯಭಾರಿಯಾದ ಅಮಿತಾಭ್, ಪಾನ್ ಮಸಾಲಾ ಅಂಬಾಸಿಡರ್ ಆಗಿರುವುದು ಸರಿಯಲ್ಲ. ಆದಷ್ಟು ಶೀಘ್ರವಾಗಿ ಅದರಿಂದ ಅವರು ಹೊರಬರಬೇಕು ಎಂದಿದ್ದಾರೆ.

‘‘ಪಾನ್ ಬಾಯಿಯ ಕ್ಯಾನ್ಸರ್​ಗೆ ಕಾರಣವಾಗಬಹುದು ಎಂದು ಹಲವು ಇತ್ತೀಚಿನ ಸಂಶೋಧನೆಗಳು ತಿಳಿಸಿವೆ. ಇದನ್ನು ಇಂಟರ್ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ (ಐಎಆರ್‌ಸಿ) ಮತ್ತು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ವರದಿಗಳೂ ಒಪ್ಪಿವೆ. ಆದ್ದರಿಂದ ಅಮಿತಾಭ್ ತಮ್ಮ ನಿರ್ಧಾರದ ಕುರಿತು ಆಲೋಚಿಸಬೇಕು. ಶಾರುಖ್ ಖಾನ್​, ಅಜಯ್ ದೇವಗನ್, ರಣವೀರ್ ಸಿಂಗ್, ಹೃತಿಕ್ ರೋಷನ್ ಮೊದಲಾದವರು ಪಾನ್ ಮಸಾಲಾ ಜಾಹಿರಾತಿನಲ್ಲಿ ಕಾಣಿಸಿಕೊಂಡಿರುವುದು ವಿದ್ಯಾರ್ಥಿಗಳಲ್ಲಿ ತಂಬಾಕು ಬಳಕೆ ಹೆಚ್ಚಿಸಲು ಕಾರಣವಾಗಿದೆ. ಈ ಕುರಿತು  ತಂಬಾಕು ವಿರೋಧಿ ಎನ್​ಜಿಒ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವವನಾಗಿ ನನಗೆ ಬೇಸರವಿದೆ’’ ಎಂದು ಶೇಖರ್ ಪತ್ರದಲ್ಲಿ ತಿಳಿಸಿದ್ದಾರೆ.

ಈ ಕುರಿತು ಅಮಿತಾಭ್ ಮತ್ತು ಅವರ ವಕ್ತಾರರು ಇನ್ನೂ ಪ್ರತಿಕ್ರಿಯೆ ನೀಡಿಲ್ಲ ಎಂದು ಪಿಟಿಐ ವರದಿ ಮಾಡಿದೆ.

ನೋಟ್ ಸಂಸ್ಥೆಯು ತಂಬಾಕು ವಿರೋಧಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಕಳೆದ ದಶಕದಲ್ಲಿ ಹಲವಾರು ಸಂದರ್ಭಗಳಲ್ಲಿ ಸಾರ್ವಜನಿಕವಾಗಿ ಧೂಮಪಾನ ಮಾಡುವ ಸೆಲೆಬ್ರಿಟಿಗಳನ್ನು ಸಂಸ್ಥೆ ಗುರಿಯಾಗಿಸಿ ಹೋರಾಟ ನಡೆಸಿತ್ತು. 2010 ರಲ್ಲಿ, ಚಲನಚಿತ್ರ ನಟ ಅಜಯ್ ದೇವಗನ್ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದ್ದಕ್ಕಾಗಿ ಈ ಸಂಸ್ಥೆಯು ಹೋರಾಟ ನಡೆಸಿತ್ತು. ಪರಿಣಾಮ, ಅಜಯ್​ಗೆ ದಂಡ ವಿಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದನ್ನೂ ಓದಿ:

400 ಕೋಟಿ ರೂ. ಆಸೆ ತೋರಿಸಿದ್ರೂ ಕರಗಲಿಲ್ಲ ನಿರ್ಮಾಪಕನ ಮನಸ್ಸು; ಏನಿದು ಬಗೆಹರಿಯದ ಬಿಗ್​ ಡೀಲ್​?

ಬಿಗ್ ಬಾಸ್ ಒಟಿಟಿಯಲ್ಲಿ ಯಾವುದು ನಿಜ, ಯಾವುದು ಸುಳ್ಳು; ಚರ್ಚೆ ಹುಟ್ಟುಹಾಕಿತು ರಾಕೇಶ್ ಬಾಪಟ್ ಹೇಳಿಕೆ

‘ಕೆಲವು ಹೆಂಗಸರ ಕಾಟ ತಾಳಲಾರದೆ ದೇಶ ಬಿಟ್ಟು ಹೋದೆ’: ಮಲ್ಲಿಕಾ ಶೆರಾವತ್​ ತೆರೆದಿಟ್ಟ ಕಹಿ ಸತ್ಯ

(NGO asks Amitabh Bachchan to withdraw from Pan Masala ad campaign)

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು