AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ನಟಿ ತಲೆಗೆ ಗನ್​ ಇಟ್ಟು ಹಣ, ಆಭರಣ ದೋಚಿದ ದರೋಡೆಕೋರರು; ಸಿನಿಮೀಯ ರೀತಿಯಲ್ಲಿ ನಡೆಯಿತು ಘಟನೆ

ನಿರ್ಜನ ಪ್ರದೇಶದಲ್ಲಿ ಕೆಲ ಮುಸುಕುಧಾರಿಗಳು ಇವರಿಗೆ ಎದುರಾಗಿದ್ದಾರೆ. ಅವರನ್ನು ನೋಡಿ ನಿಖಿತಾಗೆ ಭಯವಾಗಿದೆ. ಗನ್​ ತೋರಿಸಿ ಎಲ್ಲವನ್ನೂ ನೀಡುವಂತೆ ಬೆದರಿಕೆ ಹಾಕಿದ್ದಾರೆ.

ಬಾಲಿವುಡ್ ನಟಿ ತಲೆಗೆ ಗನ್​ ಇಟ್ಟು ಹಣ, ಆಭರಣ ದೋಚಿದ ದರೋಡೆಕೋರರು; ಸಿನಿಮೀಯ ರೀತಿಯಲ್ಲಿ ನಡೆಯಿತು ಘಟನೆ
TV9 Web
| Edited By: |

Updated on: Sep 15, 2021 | 5:48 PM

Share

ನಡೆದುಕೊಂಡು ಹೋಗುತ್ತಿದ್ದ ಬಾಲಿವುಡ್​ ನಟಿಯನ್ನು ಮುಸುಕುಧಾರಿಗಳು ಅಡ್ಡಗಟ್ಟಿ ದರೋಡೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಸದ್ಯ, ಪೊಲೀಸರು ವಿಚಾರಣೆ ಆರಂಭಿಸಿದ್ದು, ಶೀಘ್ರವೇ ಅಪರಾಧಿಗಳನ್ನು ಬಂಧಿಸುವ ಭರವಸೆ ನೀಡಿದ್ದಾರೆ.

ಹಿಂದಿ ಸಿನಿಮಾ ನಟಿ ನಿಖಿತಾ ರಾವಲ್​ ಹೊರಗೆ ತೆರಳಿದ್ದರು. ಕೆಲಸ ಮುಗಿಸಿ ನಂತರ ಅವರು ಮನೆಯತ್ತ ಹೆಜ್ಜೆ ಹಾಕಿದ್ದಾರೆ. ಶಾಸ್ತ್ರಿ ನಗರದಲ್ಲಿ ಅವರ ನಿವಾಸ ಇದೆ. ಈ ವೇಳೆ ನಿರ್ಜನ ಪ್ರದೇಶದಲ್ಲಿ ಕೆಲ ಮುಸುಕುಧಾರಿಗಳು ಇವರಿಗೆ ಎದುರಾಗಿದ್ದಾರೆ. ಅವರನ್ನು ನೋಡಿ ನಿಖಿತಾಗೆ ಭಯವಾಗಿದೆ. ಗನ್​ ತೋರಿಸಿ ಎಲ್ಲವನ್ನೂ ನೀಡುವಂತೆ ಬೆದರಿಕೆ ಹಾಕಿದ್ದಾರೆ. ನಟಿ ಗನ್ ನೋಡಿ ಭಯಗೊಂಡಿದ್ದಾರೆ. ನಿಖಿತಾ ಬಳಿ 7 ಲಕ್ಷ ರೂಪಾಯಿ ನಗದು ಹಣ ಇತ್ತು. ಇದರ ಜತೆ, ಅವರ ಬಳಿ ಇದ್ದ ಬೆಲೆ ಬಾಳುವ ವಸ್ತು ಹಾಗೂ ಚಿನ್ನದ ಸರಗಳನ್ನು ಕದ್ದು ದರೋಡೆಕೋರರು ಪರಾರಿಯಾಗಿದ್ದಾರೆ.

ದರೋಡೆಕೋರರು ಶೂಟ್​ ಮಾಡಬಹುದು ಎನ್ನುವ ಭಯ ನಿಖಿತಾಗೆ ಕಾಡಿದೆ. ಈ ಕಾರಣಕ್ಕೆ ಅವರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ತಮ್ಮ ಮನೆಗೆ ಬಂದು ಅವರು ಬಾಗಿಲು ಹಾಕಿಕೊಂಡಿದ್ದಾರೆ. ನಂತರ ದೂರವಾಣಿ ಮೂಲಕ ಈ ವಿಚಾರವನ್ನು ಅವರು ಪೊಲೀಸರಿಗೆ ತಿಳಿಸಿದ್ದಾರೆ. ನಿಖಿತಾ ಈ ವಿಚಾರವನ್ನು ಸೋಶಿಯಲ್​ ಮೀಡಿಯಾದಲ್ಲಿಯೂ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅವರ ಅಭಿಮಾನಿಗಳು ಆತಂಕ ಹೊರಹಾಕಿದ್ದಾರೆ. ಸದ್ಯ, ಪೊಲೀಸರು ಪ್ರಕರಣ ಕೈಗೆತ್ತಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ನಿಖಿತಾ ಬಾಲಿವುಡ್​ನಲ್ಲಿ ಕೆಲವೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ರೋಟಿ ಕಪ್ಡಾ ಔರ್​ ರೊಮ್ಯಾನ್ಸ್​’ ಚಿತ್ರದಲ್ಲಿ ನಿಖಿತಾ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅರ್ಷದ್​ ವಾರ್ಷಿ ಮತ್ತು ಚಂಕಿ ಪಾಂಡೇ ಲೀಡ್​ ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ನಾನು ವಿರಾಟ್ ಕೊಹ್ಲಿಯನ್ನು ಪ್ರೀತಿಸುತ್ತಿದ್ದೆ’; ರಹಸ್ಯ ಬಿಚ್ಚಿಟ್ಟ ಬಾಲಿವುಡ್​ ನಟಿ

ಬಾಲಿವುಡ್​ನ ಯಾವೆಲ್ಲಾ ಖ್ಯಾತ ನಟರು ಕೂದಲು ಕಸಿ ಮಾಡಿಸಿಕೊಂಡಿದ್ದಾರೆ?; ಇಲ್ಲಿದೆ ಅಚ್ಚರಿಯ ಮಾಹಿತಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?