AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ನಟಿ ತಲೆಗೆ ಗನ್​ ಇಟ್ಟು ಹಣ, ಆಭರಣ ದೋಚಿದ ದರೋಡೆಕೋರರು; ಸಿನಿಮೀಯ ರೀತಿಯಲ್ಲಿ ನಡೆಯಿತು ಘಟನೆ

ನಿರ್ಜನ ಪ್ರದೇಶದಲ್ಲಿ ಕೆಲ ಮುಸುಕುಧಾರಿಗಳು ಇವರಿಗೆ ಎದುರಾಗಿದ್ದಾರೆ. ಅವರನ್ನು ನೋಡಿ ನಿಖಿತಾಗೆ ಭಯವಾಗಿದೆ. ಗನ್​ ತೋರಿಸಿ ಎಲ್ಲವನ್ನೂ ನೀಡುವಂತೆ ಬೆದರಿಕೆ ಹಾಕಿದ್ದಾರೆ.

ಬಾಲಿವುಡ್ ನಟಿ ತಲೆಗೆ ಗನ್​ ಇಟ್ಟು ಹಣ, ಆಭರಣ ದೋಚಿದ ದರೋಡೆಕೋರರು; ಸಿನಿಮೀಯ ರೀತಿಯಲ್ಲಿ ನಡೆಯಿತು ಘಟನೆ
TV9 Web
| Edited By: |

Updated on: Sep 15, 2021 | 5:48 PM

Share

ನಡೆದುಕೊಂಡು ಹೋಗುತ್ತಿದ್ದ ಬಾಲಿವುಡ್​ ನಟಿಯನ್ನು ಮುಸುಕುಧಾರಿಗಳು ಅಡ್ಡಗಟ್ಟಿ ದರೋಡೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಸದ್ಯ, ಪೊಲೀಸರು ವಿಚಾರಣೆ ಆರಂಭಿಸಿದ್ದು, ಶೀಘ್ರವೇ ಅಪರಾಧಿಗಳನ್ನು ಬಂಧಿಸುವ ಭರವಸೆ ನೀಡಿದ್ದಾರೆ.

ಹಿಂದಿ ಸಿನಿಮಾ ನಟಿ ನಿಖಿತಾ ರಾವಲ್​ ಹೊರಗೆ ತೆರಳಿದ್ದರು. ಕೆಲಸ ಮುಗಿಸಿ ನಂತರ ಅವರು ಮನೆಯತ್ತ ಹೆಜ್ಜೆ ಹಾಕಿದ್ದಾರೆ. ಶಾಸ್ತ್ರಿ ನಗರದಲ್ಲಿ ಅವರ ನಿವಾಸ ಇದೆ. ಈ ವೇಳೆ ನಿರ್ಜನ ಪ್ರದೇಶದಲ್ಲಿ ಕೆಲ ಮುಸುಕುಧಾರಿಗಳು ಇವರಿಗೆ ಎದುರಾಗಿದ್ದಾರೆ. ಅವರನ್ನು ನೋಡಿ ನಿಖಿತಾಗೆ ಭಯವಾಗಿದೆ. ಗನ್​ ತೋರಿಸಿ ಎಲ್ಲವನ್ನೂ ನೀಡುವಂತೆ ಬೆದರಿಕೆ ಹಾಕಿದ್ದಾರೆ. ನಟಿ ಗನ್ ನೋಡಿ ಭಯಗೊಂಡಿದ್ದಾರೆ. ನಿಖಿತಾ ಬಳಿ 7 ಲಕ್ಷ ರೂಪಾಯಿ ನಗದು ಹಣ ಇತ್ತು. ಇದರ ಜತೆ, ಅವರ ಬಳಿ ಇದ್ದ ಬೆಲೆ ಬಾಳುವ ವಸ್ತು ಹಾಗೂ ಚಿನ್ನದ ಸರಗಳನ್ನು ಕದ್ದು ದರೋಡೆಕೋರರು ಪರಾರಿಯಾಗಿದ್ದಾರೆ.

ದರೋಡೆಕೋರರು ಶೂಟ್​ ಮಾಡಬಹುದು ಎನ್ನುವ ಭಯ ನಿಖಿತಾಗೆ ಕಾಡಿದೆ. ಈ ಕಾರಣಕ್ಕೆ ಅವರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ತಮ್ಮ ಮನೆಗೆ ಬಂದು ಅವರು ಬಾಗಿಲು ಹಾಕಿಕೊಂಡಿದ್ದಾರೆ. ನಂತರ ದೂರವಾಣಿ ಮೂಲಕ ಈ ವಿಚಾರವನ್ನು ಅವರು ಪೊಲೀಸರಿಗೆ ತಿಳಿಸಿದ್ದಾರೆ. ನಿಖಿತಾ ಈ ವಿಚಾರವನ್ನು ಸೋಶಿಯಲ್​ ಮೀಡಿಯಾದಲ್ಲಿಯೂ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅವರ ಅಭಿಮಾನಿಗಳು ಆತಂಕ ಹೊರಹಾಕಿದ್ದಾರೆ. ಸದ್ಯ, ಪೊಲೀಸರು ಪ್ರಕರಣ ಕೈಗೆತ್ತಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ನಿಖಿತಾ ಬಾಲಿವುಡ್​ನಲ್ಲಿ ಕೆಲವೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ರೋಟಿ ಕಪ್ಡಾ ಔರ್​ ರೊಮ್ಯಾನ್ಸ್​’ ಚಿತ್ರದಲ್ಲಿ ನಿಖಿತಾ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅರ್ಷದ್​ ವಾರ್ಷಿ ಮತ್ತು ಚಂಕಿ ಪಾಂಡೇ ಲೀಡ್​ ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ನಾನು ವಿರಾಟ್ ಕೊಹ್ಲಿಯನ್ನು ಪ್ರೀತಿಸುತ್ತಿದ್ದೆ’; ರಹಸ್ಯ ಬಿಚ್ಚಿಟ್ಟ ಬಾಲಿವುಡ್​ ನಟಿ

ಬಾಲಿವುಡ್​ನ ಯಾವೆಲ್ಲಾ ಖ್ಯಾತ ನಟರು ಕೂದಲು ಕಸಿ ಮಾಡಿಸಿಕೊಂಡಿದ್ದಾರೆ?; ಇಲ್ಲಿದೆ ಅಚ್ಚರಿಯ ಮಾಹಿತಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್