AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ನಟಿ ತಲೆಗೆ ಗನ್​ ಇಟ್ಟು ಹಣ, ಆಭರಣ ದೋಚಿದ ದರೋಡೆಕೋರರು; ಸಿನಿಮೀಯ ರೀತಿಯಲ್ಲಿ ನಡೆಯಿತು ಘಟನೆ

ನಿರ್ಜನ ಪ್ರದೇಶದಲ್ಲಿ ಕೆಲ ಮುಸುಕುಧಾರಿಗಳು ಇವರಿಗೆ ಎದುರಾಗಿದ್ದಾರೆ. ಅವರನ್ನು ನೋಡಿ ನಿಖಿತಾಗೆ ಭಯವಾಗಿದೆ. ಗನ್​ ತೋರಿಸಿ ಎಲ್ಲವನ್ನೂ ನೀಡುವಂತೆ ಬೆದರಿಕೆ ಹಾಕಿದ್ದಾರೆ.

ಬಾಲಿವುಡ್ ನಟಿ ತಲೆಗೆ ಗನ್​ ಇಟ್ಟು ಹಣ, ಆಭರಣ ದೋಚಿದ ದರೋಡೆಕೋರರು; ಸಿನಿಮೀಯ ರೀತಿಯಲ್ಲಿ ನಡೆಯಿತು ಘಟನೆ
TV9 Web
| Edited By: |

Updated on: Sep 15, 2021 | 5:48 PM

Share

ನಡೆದುಕೊಂಡು ಹೋಗುತ್ತಿದ್ದ ಬಾಲಿವುಡ್​ ನಟಿಯನ್ನು ಮುಸುಕುಧಾರಿಗಳು ಅಡ್ಡಗಟ್ಟಿ ದರೋಡೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಸದ್ಯ, ಪೊಲೀಸರು ವಿಚಾರಣೆ ಆರಂಭಿಸಿದ್ದು, ಶೀಘ್ರವೇ ಅಪರಾಧಿಗಳನ್ನು ಬಂಧಿಸುವ ಭರವಸೆ ನೀಡಿದ್ದಾರೆ.

ಹಿಂದಿ ಸಿನಿಮಾ ನಟಿ ನಿಖಿತಾ ರಾವಲ್​ ಹೊರಗೆ ತೆರಳಿದ್ದರು. ಕೆಲಸ ಮುಗಿಸಿ ನಂತರ ಅವರು ಮನೆಯತ್ತ ಹೆಜ್ಜೆ ಹಾಕಿದ್ದಾರೆ. ಶಾಸ್ತ್ರಿ ನಗರದಲ್ಲಿ ಅವರ ನಿವಾಸ ಇದೆ. ಈ ವೇಳೆ ನಿರ್ಜನ ಪ್ರದೇಶದಲ್ಲಿ ಕೆಲ ಮುಸುಕುಧಾರಿಗಳು ಇವರಿಗೆ ಎದುರಾಗಿದ್ದಾರೆ. ಅವರನ್ನು ನೋಡಿ ನಿಖಿತಾಗೆ ಭಯವಾಗಿದೆ. ಗನ್​ ತೋರಿಸಿ ಎಲ್ಲವನ್ನೂ ನೀಡುವಂತೆ ಬೆದರಿಕೆ ಹಾಕಿದ್ದಾರೆ. ನಟಿ ಗನ್ ನೋಡಿ ಭಯಗೊಂಡಿದ್ದಾರೆ. ನಿಖಿತಾ ಬಳಿ 7 ಲಕ್ಷ ರೂಪಾಯಿ ನಗದು ಹಣ ಇತ್ತು. ಇದರ ಜತೆ, ಅವರ ಬಳಿ ಇದ್ದ ಬೆಲೆ ಬಾಳುವ ವಸ್ತು ಹಾಗೂ ಚಿನ್ನದ ಸರಗಳನ್ನು ಕದ್ದು ದರೋಡೆಕೋರರು ಪರಾರಿಯಾಗಿದ್ದಾರೆ.

ದರೋಡೆಕೋರರು ಶೂಟ್​ ಮಾಡಬಹುದು ಎನ್ನುವ ಭಯ ನಿಖಿತಾಗೆ ಕಾಡಿದೆ. ಈ ಕಾರಣಕ್ಕೆ ಅವರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ತಮ್ಮ ಮನೆಗೆ ಬಂದು ಅವರು ಬಾಗಿಲು ಹಾಕಿಕೊಂಡಿದ್ದಾರೆ. ನಂತರ ದೂರವಾಣಿ ಮೂಲಕ ಈ ವಿಚಾರವನ್ನು ಅವರು ಪೊಲೀಸರಿಗೆ ತಿಳಿಸಿದ್ದಾರೆ. ನಿಖಿತಾ ಈ ವಿಚಾರವನ್ನು ಸೋಶಿಯಲ್​ ಮೀಡಿಯಾದಲ್ಲಿಯೂ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅವರ ಅಭಿಮಾನಿಗಳು ಆತಂಕ ಹೊರಹಾಕಿದ್ದಾರೆ. ಸದ್ಯ, ಪೊಲೀಸರು ಪ್ರಕರಣ ಕೈಗೆತ್ತಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ನಿಖಿತಾ ಬಾಲಿವುಡ್​ನಲ್ಲಿ ಕೆಲವೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ರೋಟಿ ಕಪ್ಡಾ ಔರ್​ ರೊಮ್ಯಾನ್ಸ್​’ ಚಿತ್ರದಲ್ಲಿ ನಿಖಿತಾ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅರ್ಷದ್​ ವಾರ್ಷಿ ಮತ್ತು ಚಂಕಿ ಪಾಂಡೇ ಲೀಡ್​ ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ನಾನು ವಿರಾಟ್ ಕೊಹ್ಲಿಯನ್ನು ಪ್ರೀತಿಸುತ್ತಿದ್ದೆ’; ರಹಸ್ಯ ಬಿಚ್ಚಿಟ್ಟ ಬಾಲಿವುಡ್​ ನಟಿ

ಬಾಲಿವುಡ್​ನ ಯಾವೆಲ್ಲಾ ಖ್ಯಾತ ನಟರು ಕೂದಲು ಕಸಿ ಮಾಡಿಸಿಕೊಂಡಿದ್ದಾರೆ?; ಇಲ್ಲಿದೆ ಅಚ್ಚರಿಯ ಮಾಹಿತಿ

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು