AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ನಟಿ ತಲೆಗೆ ಗನ್​ ಇಟ್ಟು ಹಣ, ಆಭರಣ ದೋಚಿದ ದರೋಡೆಕೋರರು; ಸಿನಿಮೀಯ ರೀತಿಯಲ್ಲಿ ನಡೆಯಿತು ಘಟನೆ

ನಿರ್ಜನ ಪ್ರದೇಶದಲ್ಲಿ ಕೆಲ ಮುಸುಕುಧಾರಿಗಳು ಇವರಿಗೆ ಎದುರಾಗಿದ್ದಾರೆ. ಅವರನ್ನು ನೋಡಿ ನಿಖಿತಾಗೆ ಭಯವಾಗಿದೆ. ಗನ್​ ತೋರಿಸಿ ಎಲ್ಲವನ್ನೂ ನೀಡುವಂತೆ ಬೆದರಿಕೆ ಹಾಕಿದ್ದಾರೆ.

ಬಾಲಿವುಡ್ ನಟಿ ತಲೆಗೆ ಗನ್​ ಇಟ್ಟು ಹಣ, ಆಭರಣ ದೋಚಿದ ದರೋಡೆಕೋರರು; ಸಿನಿಮೀಯ ರೀತಿಯಲ್ಲಿ ನಡೆಯಿತು ಘಟನೆ
TV9 Web
| Edited By: |

Updated on: Sep 15, 2021 | 5:48 PM

Share

ನಡೆದುಕೊಂಡು ಹೋಗುತ್ತಿದ್ದ ಬಾಲಿವುಡ್​ ನಟಿಯನ್ನು ಮುಸುಕುಧಾರಿಗಳು ಅಡ್ಡಗಟ್ಟಿ ದರೋಡೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಸದ್ಯ, ಪೊಲೀಸರು ವಿಚಾರಣೆ ಆರಂಭಿಸಿದ್ದು, ಶೀಘ್ರವೇ ಅಪರಾಧಿಗಳನ್ನು ಬಂಧಿಸುವ ಭರವಸೆ ನೀಡಿದ್ದಾರೆ.

ಹಿಂದಿ ಸಿನಿಮಾ ನಟಿ ನಿಖಿತಾ ರಾವಲ್​ ಹೊರಗೆ ತೆರಳಿದ್ದರು. ಕೆಲಸ ಮುಗಿಸಿ ನಂತರ ಅವರು ಮನೆಯತ್ತ ಹೆಜ್ಜೆ ಹಾಕಿದ್ದಾರೆ. ಶಾಸ್ತ್ರಿ ನಗರದಲ್ಲಿ ಅವರ ನಿವಾಸ ಇದೆ. ಈ ವೇಳೆ ನಿರ್ಜನ ಪ್ರದೇಶದಲ್ಲಿ ಕೆಲ ಮುಸುಕುಧಾರಿಗಳು ಇವರಿಗೆ ಎದುರಾಗಿದ್ದಾರೆ. ಅವರನ್ನು ನೋಡಿ ನಿಖಿತಾಗೆ ಭಯವಾಗಿದೆ. ಗನ್​ ತೋರಿಸಿ ಎಲ್ಲವನ್ನೂ ನೀಡುವಂತೆ ಬೆದರಿಕೆ ಹಾಕಿದ್ದಾರೆ. ನಟಿ ಗನ್ ನೋಡಿ ಭಯಗೊಂಡಿದ್ದಾರೆ. ನಿಖಿತಾ ಬಳಿ 7 ಲಕ್ಷ ರೂಪಾಯಿ ನಗದು ಹಣ ಇತ್ತು. ಇದರ ಜತೆ, ಅವರ ಬಳಿ ಇದ್ದ ಬೆಲೆ ಬಾಳುವ ವಸ್ತು ಹಾಗೂ ಚಿನ್ನದ ಸರಗಳನ್ನು ಕದ್ದು ದರೋಡೆಕೋರರು ಪರಾರಿಯಾಗಿದ್ದಾರೆ.

ದರೋಡೆಕೋರರು ಶೂಟ್​ ಮಾಡಬಹುದು ಎನ್ನುವ ಭಯ ನಿಖಿತಾಗೆ ಕಾಡಿದೆ. ಈ ಕಾರಣಕ್ಕೆ ಅವರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ತಮ್ಮ ಮನೆಗೆ ಬಂದು ಅವರು ಬಾಗಿಲು ಹಾಕಿಕೊಂಡಿದ್ದಾರೆ. ನಂತರ ದೂರವಾಣಿ ಮೂಲಕ ಈ ವಿಚಾರವನ್ನು ಅವರು ಪೊಲೀಸರಿಗೆ ತಿಳಿಸಿದ್ದಾರೆ. ನಿಖಿತಾ ಈ ವಿಚಾರವನ್ನು ಸೋಶಿಯಲ್​ ಮೀಡಿಯಾದಲ್ಲಿಯೂ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅವರ ಅಭಿಮಾನಿಗಳು ಆತಂಕ ಹೊರಹಾಕಿದ್ದಾರೆ. ಸದ್ಯ, ಪೊಲೀಸರು ಪ್ರಕರಣ ಕೈಗೆತ್ತಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ನಿಖಿತಾ ಬಾಲಿವುಡ್​ನಲ್ಲಿ ಕೆಲವೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ರೋಟಿ ಕಪ್ಡಾ ಔರ್​ ರೊಮ್ಯಾನ್ಸ್​’ ಚಿತ್ರದಲ್ಲಿ ನಿಖಿತಾ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅರ್ಷದ್​ ವಾರ್ಷಿ ಮತ್ತು ಚಂಕಿ ಪಾಂಡೇ ಲೀಡ್​ ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ನಾನು ವಿರಾಟ್ ಕೊಹ್ಲಿಯನ್ನು ಪ್ರೀತಿಸುತ್ತಿದ್ದೆ’; ರಹಸ್ಯ ಬಿಚ್ಚಿಟ್ಟ ಬಾಲಿವುಡ್​ ನಟಿ

ಬಾಲಿವುಡ್​ನ ಯಾವೆಲ್ಲಾ ಖ್ಯಾತ ನಟರು ಕೂದಲು ಕಸಿ ಮಾಡಿಸಿಕೊಂಡಿದ್ದಾರೆ?; ಇಲ್ಲಿದೆ ಅಚ್ಚರಿಯ ಮಾಹಿತಿ

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ