AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಹಾಗೂ ಐಶ್ವರ್ಯಾ ದಂಪತಿ ಮಧ್ಯೆ ಬಂದ ಮೂರನೇ ವ್ಯಕ್ತಿ ಯಾರು?

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ದಾಂಪತ್ಯದ ಬಗ್ಗೆ ಆಗಾಗ ಕೆಲವು ವದಂತಿಗಳು ಹರಿದಾಡುತ್ತಲೇ ಇರುತ್ತವೆ. ಈ ದಂಪತಿ ವಿಚ್ಛೇದನ ಪಡೆದಿದ್ದಾರೆ ಎಂದು ಕೆಲವರು ಹೇಳಿದರೆ,ಇನ್ನೂ ಕೆಲವರು ಇದನ್ನು ಅಲ್ಲಗಳೆದಿದ್ದಾರೆ. ಅಭಿಷೇಕ್ ಹಾಗೂ ಐಶ್ವರ್ಯಾ ಪ್ರತ್ಯೇಕವಾಗಲು ಬಾಲಿವುಡ್​ನ ನಟಿಯೊಬ್ಬರು ಕಾರಣ ಎಂದು ಹೇಳಲಾಗುತ್ತಿದೆ.

ಅಭಿಷೇಕ್ ಹಾಗೂ ಐಶ್ವರ್ಯಾ ದಂಪತಿ ಮಧ್ಯೆ ಬಂದ ಮೂರನೇ ವ್ಯಕ್ತಿ ಯಾರು?
ಅಭಿಷೇಕ್-ಐಶ್ವರ್ಯಾ
ರಾಜೇಶ್ ದುಗ್ಗುಮನೆ
|

Updated on: Oct 21, 2024 | 1:26 PM

Share

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಬೇರೆ ಆಗಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲವು ತಿಂಗಳಿಂದ ಹರಿದಾಡುತ್ತಲೇ ಇದೆ. ಇವರು ಈವೆಂಟ್​ಗಳಿಗೆ ಪ್ರತ್ಯೇಕವಾಗಿಯೇ ತೆರಳುತ್ತಿದ್ದಾರೆ ಎನ್ನಲಾಗಿದೆ. ಈಗ ಅಭಿಷೇಕ್ ಹಾಗೂ ಐಶ್ವರ್ಯಾ ಪ್ರತ್ಯೇಕವಾಗಲು ಬಾಲಿವುಡ್​ನ ನಟಿಯೊಬ್ಬರು ಕಾರಣ ಎಂದು ಹೇಳಲಾಗುತ್ತಿದೆ. ಅವರು ಯಾರು ಎನ್ನುವ ಪ್ರಶ್ನೆಗೆ ಈ ಸ್ಟೋರಿಯಲ್ಲಿ ಇದೆ ಉತ್ತರ.

ಐಶ್ವರ್ಯಾ ಅವರು ಅಭಿಷೇಕ್ ಬಚ್ಚನ್ ಅವರಿಂದ ದೂರವಾಗಿ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದಾರೆ.  ಐಶ್ವರ್ಯಾ ಮಗಳು ಆರಾಧ್ಯಾ ಜೊತೆ ತಮ್ಮ ತಾಯಿ ಮನೆಯಲ್ಲಿ ಇದ್ದಾರೆ ಎನ್ನಲಾಗಿದೆ. ಆದರೆ, ಇವರು ಕಾನೂನಾತ್ಮಕವಾಗಿ ವಿಚ್ಛೇದನ ಪಡೆಯೋ ಆಲೋಚನೆಯಲ್ಲಿ ಇಲ್ಲವಂತೆ. ಐಶ್ವರ್ಯಾಗೆ ಸಮಸ್ಯೆ ಆಗುತ್ತಿರುವುದು ಪತಿಯಿಂದಲೇ ಎನ್ನಲಾಗಿದೆ.

ಅಭಿಷೇಕ್ ಬಚ್ಚನ್​ಗೆ ತಮ್ಮ ನಟನಾ ವೃತ್ತಿಯ ಬಗ್ಗೆ ಅಭದ್ರತೆ ಕಾಡುತ್ತಿದೆ. ಇದೇ ವೇಳೆ ಅವರು ನಟಿ ನಮೃತ್ ಕೌರ್ ಜೊತೆ ರಿಲೇಶನ್​ಶಿಪ್ ಹೊಂದಿದ್ದಾರೆ ಎಂದು ಕೂಡ ವರದಿ ಆಗಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ಇದು ನಿಜ ಆಗದೇ ಇರಲಿ ಎಂದು ಫ್ಯಾನ್ಸ್ ಬಯಸುತ್ತಾ ಇದ್ದಾರೆ.

ಅಭಿಷೇಕ್ ಬಚ್ಚನ್ ಅವರು ತಮ್ಮ ಫೇಲ್ಯೂವರ್​ಗಳ ಬಗ್ಗೆ ಬೇಸರದಲ್ಲಿ ಇದ್ದಾರೆ. ಅವರ ಯಾವ ಸಿನಿಮಾಗಳೂ ಹಿಟ್ ಆಗುತ್ತಿಲ್ಲ. ‘ದಾಸ್ವಿ’ ಸಿನಿಮಾದ ಶೂಟ್ ವೇಳೆ ಅವರು ನಮೃತ್​ ಕೌರ್ ಜೊತೆ ಆಪ್ತತೆ ಬೆಳೆ ಸಿಕೊಂಡಿದ್ದರು. ನಮೃತಾ ಅವರು ಅಭಿಷೇಕ್ ವಿಚಾರದಲ್ಲಿ ಗಂಭೀರವಾಗಿದ್ದರು.  ಆ ಬಳಿಕ ತಪ್ಪು ಅರಿತ ಅಭಿಷೇಕ್ ಅವರು ನಮೃತಾರನ್ನು ಕೈಬಿಟ್ಟರು.

ಈ ಬಗ್ಗೆ ಕುಟುಂಬದ ಯಾರೊಬ್ಬರೂ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಇದು ಸಂಪೂರ್ಣವಾಗಿ ಸತ್ಯ ಎಂದು ಒಪ್ಪಿಕೊಳ್ಳಲೂ ಆಗುತ್ತಿಲ್ಲ. ಇದು ಸದ್ಯಕ್ಕೆ ಹರಿದಾಡುತ್ತಿರುವ ಅಂತೆ-ಕಂತೆ ಅಷ್ಟೇ. ಈ ಬಗ್ಗೆ ದಂಪತಿ ಅಧಿಕೃತವಾಗಿ ಮಾಹಿತಿ ನೀಡಲಿ ಎಂದು ಫ್ಯಾನ್ಸ್ ಕಾಡುತ್ತಿದ್ದಾರೆ.

ಇದನ್ನೂ ಓದಿ: ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ನಡುವಿನ ವಯಸ್ಸಿನ ಅಂತರವೆಷ್ಟು? ಅಭಿಷೇಕ್ ಹಿರಿಯರಲ್ಲ

ಐಶ್ವರ್ಯಾ ಅವರಿಗೆ ಅನಾರೋಗ್ಯ ಉಂಟಾಗಿದೆ ಎನ್ನಲಾಗಿದೆ. ಈ ಕಾರಣದಿಂದಲೇ ಅವರ ದೇಹದ ತೂಕ ಹೆಚ್ಚುತ್ತಿದೆಯಂತೆ. ಅವರು ಮೊದಲಿಗಿಂತ ದಪ್ಪ ಆಗಿದ್ದಾರೆ ಎಂದು ಕೆಲವರು ಹೇಳಿದ್ದು ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್