Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಹಾಗೂ ಐಶ್ವರ್ಯಾ ದಂಪತಿ ಮಧ್ಯೆ ಬಂದ ಮೂರನೇ ವ್ಯಕ್ತಿ ಯಾರು?

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ದಾಂಪತ್ಯದ ಬಗ್ಗೆ ಆಗಾಗ ಕೆಲವು ವದಂತಿಗಳು ಹರಿದಾಡುತ್ತಲೇ ಇರುತ್ತವೆ. ಈ ದಂಪತಿ ವಿಚ್ಛೇದನ ಪಡೆದಿದ್ದಾರೆ ಎಂದು ಕೆಲವರು ಹೇಳಿದರೆ,ಇನ್ನೂ ಕೆಲವರು ಇದನ್ನು ಅಲ್ಲಗಳೆದಿದ್ದಾರೆ. ಅಭಿಷೇಕ್ ಹಾಗೂ ಐಶ್ವರ್ಯಾ ಪ್ರತ್ಯೇಕವಾಗಲು ಬಾಲಿವುಡ್​ನ ನಟಿಯೊಬ್ಬರು ಕಾರಣ ಎಂದು ಹೇಳಲಾಗುತ್ತಿದೆ.

ಅಭಿಷೇಕ್ ಹಾಗೂ ಐಶ್ವರ್ಯಾ ದಂಪತಿ ಮಧ್ಯೆ ಬಂದ ಮೂರನೇ ವ್ಯಕ್ತಿ ಯಾರು?
ಅಭಿಷೇಕ್-ಐಶ್ವರ್ಯಾ
Follow us
ರಾಜೇಶ್ ದುಗ್ಗುಮನೆ
|

Updated on: Oct 21, 2024 | 1:26 PM

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ಬೇರೆ ಆಗಿದ್ದಾರೆ ಎನ್ನುವ ಸುದ್ದಿ ಕಳೆದ ಕೆಲವು ತಿಂಗಳಿಂದ ಹರಿದಾಡುತ್ತಲೇ ಇದೆ. ಇವರು ಈವೆಂಟ್​ಗಳಿಗೆ ಪ್ರತ್ಯೇಕವಾಗಿಯೇ ತೆರಳುತ್ತಿದ್ದಾರೆ ಎನ್ನಲಾಗಿದೆ. ಈಗ ಅಭಿಷೇಕ್ ಹಾಗೂ ಐಶ್ವರ್ಯಾ ಪ್ರತ್ಯೇಕವಾಗಲು ಬಾಲಿವುಡ್​ನ ನಟಿಯೊಬ್ಬರು ಕಾರಣ ಎಂದು ಹೇಳಲಾಗುತ್ತಿದೆ. ಅವರು ಯಾರು ಎನ್ನುವ ಪ್ರಶ್ನೆಗೆ ಈ ಸ್ಟೋರಿಯಲ್ಲಿ ಇದೆ ಉತ್ತರ.

ಐಶ್ವರ್ಯಾ ಅವರು ಅಭಿಷೇಕ್ ಬಚ್ಚನ್ ಅವರಿಂದ ದೂರವಾಗಿ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದಾರೆ.  ಐಶ್ವರ್ಯಾ ಮಗಳು ಆರಾಧ್ಯಾ ಜೊತೆ ತಮ್ಮ ತಾಯಿ ಮನೆಯಲ್ಲಿ ಇದ್ದಾರೆ ಎನ್ನಲಾಗಿದೆ. ಆದರೆ, ಇವರು ಕಾನೂನಾತ್ಮಕವಾಗಿ ವಿಚ್ಛೇದನ ಪಡೆಯೋ ಆಲೋಚನೆಯಲ್ಲಿ ಇಲ್ಲವಂತೆ. ಐಶ್ವರ್ಯಾಗೆ ಸಮಸ್ಯೆ ಆಗುತ್ತಿರುವುದು ಪತಿಯಿಂದಲೇ ಎನ್ನಲಾಗಿದೆ.

ಅಭಿಷೇಕ್ ಬಚ್ಚನ್​ಗೆ ತಮ್ಮ ನಟನಾ ವೃತ್ತಿಯ ಬಗ್ಗೆ ಅಭದ್ರತೆ ಕಾಡುತ್ತಿದೆ. ಇದೇ ವೇಳೆ ಅವರು ನಟಿ ನಮೃತ್ ಕೌರ್ ಜೊತೆ ರಿಲೇಶನ್​ಶಿಪ್ ಹೊಂದಿದ್ದಾರೆ ಎಂದು ಕೂಡ ವರದಿ ಆಗಿದೆ. ಈ ವಿಚಾರ ಅವರ ಅಭಿಮಾನಿಗಳಿಗೆ ಶಾಕಿಂಗ್ ಎನಿಸಿದೆ. ಇದು ನಿಜ ಆಗದೇ ಇರಲಿ ಎಂದು ಫ್ಯಾನ್ಸ್ ಬಯಸುತ್ತಾ ಇದ್ದಾರೆ.

ಅಭಿಷೇಕ್ ಬಚ್ಚನ್ ಅವರು ತಮ್ಮ ಫೇಲ್ಯೂವರ್​ಗಳ ಬಗ್ಗೆ ಬೇಸರದಲ್ಲಿ ಇದ್ದಾರೆ. ಅವರ ಯಾವ ಸಿನಿಮಾಗಳೂ ಹಿಟ್ ಆಗುತ್ತಿಲ್ಲ. ‘ದಾಸ್ವಿ’ ಸಿನಿಮಾದ ಶೂಟ್ ವೇಳೆ ಅವರು ನಮೃತ್​ ಕೌರ್ ಜೊತೆ ಆಪ್ತತೆ ಬೆಳೆ ಸಿಕೊಂಡಿದ್ದರು. ನಮೃತಾ ಅವರು ಅಭಿಷೇಕ್ ವಿಚಾರದಲ್ಲಿ ಗಂಭೀರವಾಗಿದ್ದರು.  ಆ ಬಳಿಕ ತಪ್ಪು ಅರಿತ ಅಭಿಷೇಕ್ ಅವರು ನಮೃತಾರನ್ನು ಕೈಬಿಟ್ಟರು.

ಈ ಬಗ್ಗೆ ಕುಟುಂಬದ ಯಾರೊಬ್ಬರೂ ಅಧಿಕೃತವಾಗಿ ಹೇಳಿಕೆ ನೀಡಿಲ್ಲ. ಇದು ಸಂಪೂರ್ಣವಾಗಿ ಸತ್ಯ ಎಂದು ಒಪ್ಪಿಕೊಳ್ಳಲೂ ಆಗುತ್ತಿಲ್ಲ. ಇದು ಸದ್ಯಕ್ಕೆ ಹರಿದಾಡುತ್ತಿರುವ ಅಂತೆ-ಕಂತೆ ಅಷ್ಟೇ. ಈ ಬಗ್ಗೆ ದಂಪತಿ ಅಧಿಕೃತವಾಗಿ ಮಾಹಿತಿ ನೀಡಲಿ ಎಂದು ಫ್ಯಾನ್ಸ್ ಕಾಡುತ್ತಿದ್ದಾರೆ.

ಇದನ್ನೂ ಓದಿ: ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ನಡುವಿನ ವಯಸ್ಸಿನ ಅಂತರವೆಷ್ಟು? ಅಭಿಷೇಕ್ ಹಿರಿಯರಲ್ಲ

ಐಶ್ವರ್ಯಾ ಅವರಿಗೆ ಅನಾರೋಗ್ಯ ಉಂಟಾಗಿದೆ ಎನ್ನಲಾಗಿದೆ. ಈ ಕಾರಣದಿಂದಲೇ ಅವರ ದೇಹದ ತೂಕ ಹೆಚ್ಚುತ್ತಿದೆಯಂತೆ. ಅವರು ಮೊದಲಿಗಿಂತ ದಪ್ಪ ಆಗಿದ್ದಾರೆ ಎಂದು ಕೆಲವರು ಹೇಳಿದ್ದು ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !