AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ಸಿನಿಮಾದ ಹೈಲೈಟ್ ವಿಎಫ್​​ಎಕ್ಸ್ ಅಲ್ಲ, ನಿರ್ದೇಶಕ ಹೇಳಿದ್ದೇನು?

Ramayana Movie: ‘ರಾಮಾಯಣ’ ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ರಣ್​​ಬೀರ್, ಯಶ್ ಇನ್ನೂ ಹಲವು ಸ್ಟಾರ್​​ಗಳು ಸಿನಿಮಾನಲ್ಲಿ ನಟಿಸಲಿದ್ದಾರೆ. ಇಷ್ಟೆಲ್ಲ ಇದ್ದರೂ, ಸಿನಿಮಾದ ಮುಖ್ಯ ಹೈಲೆಟ್ ಪಾಯಿಂಟ್ ಬೇರೆ ಏನೋ ಇದೆಯಂತೆ. ಖುದ್ದು ಸಿನಿಮಾದ ನಿರ್ದೇಶಕ ನಿತೇಶ್ ತಿವಾರಿ ಈ ಬಗ್ಗೆ ಮಾತನಾಡಿದ್ದಾರೆ.

‘ರಾಮಾಯಣ’ ಸಿನಿಮಾದ ಹೈಲೈಟ್ ವಿಎಫ್​​ಎಕ್ಸ್ ಅಲ್ಲ, ನಿರ್ದೇಶಕ ಹೇಳಿದ್ದೇನು?
Ramayana
ಮಂಜುನಾಥ ಸಿ.
|

Updated on: Apr 05, 2026 | 6:55 PM

Share

ರಣ್​​ಬೀರ್ ಕಪೂರ್ (Ranbir Kapoor), ಯಶ್ ಮತ್ತು ಸಾಯಿ ಪಲ್ಲವಿ ನಟಿಸಿರುವ ‘ರಾಮಾಯಣ’ ಸಿನಿಮಾದ ಟೀಸರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ. ಭಾರಿ ಅದ್ಧೂರಿ ವಿಎಫ್​​ಎಕ್ಸ್, ಅದ್ಧೂರಿ ಸೆಟ್​​ಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಪೌರಾಣಿಕ ಕತೆಗೆ ಭವ್ಯತೆಯನ್ನು ಸೇರಿಸಿ ಪ್ರೇಕ್ಷಕರಿಗೆ ನೀಡಲಾಗುತ್ತಿದೆ ‘ರಾಮಾಯಣ’ ಸಿನಿಮಾನಲ್ಲಿ. ಹಲವು ಆಸ್ಕರ್​​ಗಳನ್ನು ಗೆದ್ದಿರುವ ಡಿಎನ್​​ಇಜಿ ಸಂಸ್ಥೆ ಈ ಸಿನಿಮಾಕ್ಕೆ ವಿಎಫ್​​ಎಕ್ಸ್ ಮಾಡಿದೆ. ಸಿನಿಮಾಕ್ಕೆ ಇಬ್ಬರು ಆಸ್ಕರ್ ವಿಜೇತ ಸಂಗೀತ ನಿರ್ದೇಶಕರು ಸಂಗೀತ ನೀಡಲಿದ್ದಾರೆ. ರಣ್​​ಬೀರ್, ಯಶ್ ಇನ್ನೂ ಹಲವು ಸ್ಟಾರ್​​ಗಳು ಸಿನಿಮಾನಲ್ಲಿ ನಟಿಸಲಿದ್ದಾರೆ. ಇಷ್ಟೆಲ್ಲ ಇದ್ದರೂ, ಸಿನಿಮಾದ ಮುಖ್ಯ ಹೈಲೆಟ್ ಪಾಯಿಂಟ್ ಬೇರೆ ಏನೋ ಇದೆಯಂತೆ. ಖುದ್ದು ಸಿನಿಮಾದ ನಿರ್ದೇಶಕ ನಿತೇಶ್ ತಿವಾರಿ ಈ ಬಗ್ಗೆ ಮಾತನಾಡಿದ್ದಾರೆ.

ನಿರ್ದೇಶಕ ನಿತೇಶ್ ತಿವಾರಿ ಅವರು ಹೇಳಿರುವಂತೆ ಅವರ ಪ್ರಕಾರ ಈ ವರ್ಷ ಬಿಡುಗಡೆ ಆಗಲಿರುವ ‘ರಾಮಾಯಣ’ ಸಿನಿಮಾದ ಮೊದಲ ಭಾಗದಲ್ಲಿ ಹೈಲೆಟ್ ದೃಶ್ಯವೆಂದರೆ ಅದು ರಾಮ ಅಯೋಧ್ಯೆ ಬಿಟ್ಟು ಹೋಗುವ ದೃಶ್ಯವಂತೆ. ನಿತೇಶ್ ತಿವಾರಿ ಅವರು ಹೇಳಿರುವಂತೆ ‘ಸಿನಿಮಾ ಬಿಡುಗಡೆ ಆದಾಗ ಜನ ಆ ದೃಶ್ಯಕ್ಕೆ ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ನೋಡಲು ಕಾತರನಾಗಿ ಕಾಯುತ್ತಿದ್ದೇನೆ. ಆ ಇಡೀ ಸನ್ನಿವೇಶ ನಮ್ಮ ಸಿನಿಮಾನಲ್ಲಿ ಅದ್ಭುತವಾಗಿ ಮೂಡಿ ಬಂದಿದೆ. ನಾನಂತೂ ಪ್ರತಿ ಬಾರಿ ಆ ದೃಶ್ಯವನ್ನು ನೋಡಿದಾಗಲೂ ಕಣ್ಣೀರಾಗುತ್ತೇನೆ. ಆ ದೃಶ್ಯ ನಮ್ಮ ಸಿನಿಮಾದ ಬಹಳ ಮುಖ್ಯವಾದ ದೃಶ್ಯ’ ಎಂದಿದ್ದಾರೆ ನಿತೇಶ್ ತಿವಾರಿ.

ಇದನ್ನೂ ಓದಿ:ರಾವಣನ ಪಾತ್ರ ಮಾಡಿದ ಯಶ್​ನ ಹಾಡಿ ಹೊಗಳಿದ ರಣಬೀರ್ ಕಪೂರ್

ಇದೀಗ ಬಿಡುಗಡೆ ಆಗಿರುವ ‘ರಾಮಾಯಣ’ ಟೀಸರ್​​ನಲ್ಲಿ ಆ ಸನ್ನಿವೇಶದ ಎರಡು ಸಣ್ಣ ದೃಶ್ಯಗಳನ್ನು ಸೇರಿಸಲಾಗಿದೆ. ಆದರೆ ಸಿನಿಮಾದ ವೈಭವದ ದೃಶ್ಯಗಳು, ಕೆಲ ಆಕ್ಷನ್ ದೃಶ್ಯಗಳು, ಪುಷ್ಪಕ ವಿಮಾನ ಮತ್ತು ರಣ್​​ಬೀರ್ ಕಪೂರ್ ಅವರ ರಾಮನ ಪಾತ್ರದ ಮೇಲೆ ಟೀಸರ್ ಹೆಚ್ಚು ಪೋಕಸ್ ಆಗಿತ್ತು. ಸಿನಿಮಾದ ಟೀಸರ್ ಬಿಡುಗಡೆ ಆದ ಬಳಿಕ ಸಹಜವಾಗಿಯೇ ಕೆಲವರು ಮೆಚ್ಚಿಕೊಂಡರೆ ಇನ್ನು ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ.

‘ರಾಮಾಯಣ’ ಸಿನಿಮಾನಲ್ಲಿ ರಣ್​​ಬೀರ್ ಕಪೂರ್ ರಾಮನ ಪಾತ್ರದಲ್ಲಿ, ಯಶ್ ರಾವಣನ ಪಾತ್ರದಲ್ಲಿ ನಟಿಸಿದ್ದಾರೆ. ಸಾಯಿ ಪಲ್ಲವಿ ಸೀತೆ ಹಾಗೂ ಸನ್ನಿ ಡಿಯೋಲ್ ಹನುಮಂತನ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಆಸ್ಕರ್ ವಿಜೇತ ಎಆರ್ ರೆಹಮಾನ್ ಮತ್ತು ಹಾನ್ಸ್ ಜೀಮರ್ ಅವರು ಸಂಗೀತ ನೀಡಿದ್ದಾರೆ. ರಾಮಾಯಣ ಸಿನಿಮಾದ ಎರಡೂ ಭಾಗಗಳಿಗೆ 4000 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆಯಂತೆ. ಸಿನಿಮಾದ ಮೊದಲ ಭಾಗ ಇದೇ ದೀಪಾವಳಿ ಹಬ್ಬಕ್ಕೆ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆಯಲ್ಲಿ ಜಮೀರ್ ಅಚ್ಚರಿ ಮಾತು!
1 ಗಂಟೆಯಲ್ಲಿ ಏನೇನೋ ಆಗ್ಬಹುದು: ದಾವಣಗೆರೆಯಲ್ಲಿ ಜಮೀರ್ ಅಚ್ಚರಿ ಮಾತು!
ಕಿಶನ್ ವಿಕೆಟ್ ಬಿದ್ದ ಕೂಡಲೇ ದೇವರಿಗೆ ಕೈಮುಗಿದ ಲಕ್ನೋ ಮಾಲೀಕ
ಕಿಶನ್ ವಿಕೆಟ್ ಬಿದ್ದ ಕೂಡಲೇ ದೇವರಿಗೆ ಕೈಮುಗಿದ ಲಕ್ನೋ ಮಾಲೀಕ
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಏಕವಚನದಲ್ಲಿ ಬೈದಿದ್ದ ಸಚಿವ ಮಲ್ಲಿಕಾರ್ಜುರನ್ನು ಕ್ಷಮಿಸಿದ ಜಮೀರ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್