AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನ್ ಮಸಾಲ ವಿವಾದ: ಶಾರುಖ್, ಅಜಯ್ ದೇವಗನ್, ಟೈಗರ್‌ ಶ್ರಾಫ್‌ಗೆ ದೆಹಲಿ ಹೈಕೋರ್ಟ್‌ನಿಂದ ಇಲ್ಲ ರಿಲೀಫ್

ವಿಮಲ್ ಪಾನ್ ಮಸಾಲದ ಪರೋಕ್ಷ ಪ್ರಚಾರ ಆರೋಪದಡಿ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ನೀಡಿದ್ದ ಶೋಕಾಸ್ ನೋಟಿಸ್ ಸವಾಲು ಮಾಡಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಾಂಗ ವ್ಯಾಪ್ತಿಯ ಕಾರಣ ನೀಡಿ ಅರ್ಜಿಯನ್ನು ತಳ್ಳಿಹಾಕಿದ್ದು, ನಟರಿಗೆ ಯಾವುದೇ ರಿಲೀಫ್ ಸಿಕ್ಕಿಲ್ಲ.

ಪಾನ್ ಮಸಾಲ ವಿವಾದ: ಶಾರುಖ್, ಅಜಯ್ ದೇವಗನ್, ಟೈಗರ್‌ ಶ್ರಾಫ್‌ಗೆ ದೆಹಲಿ ಹೈಕೋರ್ಟ್‌ನಿಂದ ಇಲ್ಲ ರಿಲೀಫ್
ಪಾನ್ ಮಸಾಲ ಜಾಹೀರಾತು
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 15, 2026 | 11:00 AM

Share

ಮುಖ್ಯಾಂಶಗಳು

  • ಬಾಲಿವುಡ್ ನಟರಿಗೆ ದೆಹಲಿ ಹೈಕೋರ್ಟ್ ಶಾಕ್
  • ವಿಮಲ್ ಪಾನ್ ಮಸಾಲ ಅರ್ಜಿ ವಜಾ
  • ನ್ಯಾಯಾಂಗ ವ್ಯಾಪ್ತಿ ಇಲ್ಲವೆಂದ ಕೋರ್ಟ್

ವಿಮಲ್ ಪಾನ್ ಮಸಾಲ ಜಾಹೀರಾತಿಗೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ನೀಡಿದ್ದ ಶೋಕಾಸ್ ನೋಟಿಸ್ ರದ್ದುಗೊಳಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ನಟರ ಪರವಾಗಿ ಕಂಪನಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಬಾಲಿವುಡ್ ದಿಗ್ಗಜ ನಟರಿಗೆ ಆರಂಭಿಕವಾಗಿ ಯಾವುದೇ ರೀತಿಯ ತಾತ್ಕಾಲಿಕ ಉಪಶಮನ ಸಿಗದಂತಾಗಿದೆ.

ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯ ವಿಚಾರಣೆ ನಡೆಸಿ ಮಹತ್ವದ ತೀರ್ಪು ಪ್ರಕಟಿಸಿದೆ. ಈ ಪ್ರಕರಣವು ದೆಹಲಿ ಹೈಕೋರ್ಟ್‌ನ ಪ್ರಾಂತೀಯ ನ್ಯಾಯಾಂಗ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ ವಿಷಯದಲ್ಲಿ ಯಾವುದೇ ಆಕ್ಷೇಪಣೆಗಳು ಅಥವಾ ಮೇಲ್ಮನವಿಗಳಿದ್ದರೆ ಅದನ್ನು ಮಹಾರಾಷ್ಟ್ರದ ಸೂಕ್ತ ನ್ಯಾಯಾಲಯದಲ್ಲೇ ಪ್ರಶ್ನಿಸಬೇಕು ಎಂದು ಸೂಚಿಸಿದೆ.

ತಮ್ಮ ಕಂಪನಿಯ ಮುಖ್ಯ ಕಚೇರಿ ದೆಹಲಿಯಲ್ಲಿದೆ ಎಂದು ಅರ್ಜಿದಾರ ಕಂಪನಿ ಪಿಬಿ ಅಗ್ರೋ ವಾದಿಸಿತ್ತು. ಜಾಹೀರಾತು ಕಲ್ಪನೆ ಮತ್ತು ನಟರಿಗೆ ನೀಡಿದ ಸಂಭಾವನೆ ಎಲ್ಲವೂ ದೆಹಲಿಯಿಂದಲೇ ನಡೆದಿದೆ ಎಂದು ಕಂಪನಿ ಹೇಳಿತ್ತು. ಆದರೆ ಹೈಕೋರ್ಟ್ ಈ ಎಲ್ಲಾ ವಾದಗಳನ್ನು ಸಂಪೂರ್ಣವಾಗಿ ತಿರಸ್ಕರಿಸಿದೆ. ಪ್ರಕರಣದ ಪ್ರಮುಖ ಘಟನೆಗಳು ದೆಹಲಿಯಲ್ಲಿ ನಡೆದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಮಹಾರಾಷ್ಟ್ರ ಎಫ್‌ಡಿಎ ಈ ಶೋಕಾಸ್ ನೋಟಿಸ್‌ಗಳನ್ನು ನಟರಿಗೆ ಮಾತ್ರ ನೀಡಿದೆ. ಪಿಬಿ ಅಗ್ರೋ ಕಂಪನಿಗೆ ಯಾವುದೇ ನೋಟಿಸ್ ನೀಡಲಾಗಿಲ್ಲ. ಕಂಪನಿಯನ್ನು ಯಾವುದೇ ಸ್ಪಷ್ಟನೆ ಕೇಳಿಲ್ಲ ಅಥವಾ ವಿಚಾರಣೆಗೆ ಕರೆದಿಲ್ಲ. ಆದ್ದರಿಂದ ಕಂಪನಿಯು ದೆಹಲಿ ಹೈಕೋರ್ಟ್‌ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಪೀಠವು ತನ್ನ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದೆ.

ಇದನ್ನೂ ಓದಿ: ಪಾನ್ ಮಸಾಲ ಜಹೀರಾತು ವಿವಾದ: ಶಾರುಖ್, ಅಜಯ್ ದೇವಗನ್ ನೀಡಿದ್ದ ಸಮರ್ಥನೆ ಏನು?

ವಿಮಲ್ ಇಲೈಚಿ ಜಾರೀತಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಎಫ್‌ಡಿಎ ನಟರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ದೆಹಲಿ ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿರುವುದರಿಂದ ಈಗ ನಟರು ಬಾಂಬೆ ಹೈಕೋರ್ಟ್ ಮೆಟ್ಟಿಲೇರುವುದು ಅನಿವಾರ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಡೆಂಕಣಿಕೋಟೆಯಲ್ಲಿ 'ಕಾಂತಾರ ಗಣಪನ' ಭಾರಿ ಹವಾ
ಡೆಂಕಣಿಕೋಟೆಯಲ್ಲಿ 'ಕಾಂತಾರ ಗಣಪನ' ಭಾರಿ ಹವಾ
ಮಾತೆರೆಗ್​ಲ ಸೊಲ್ಮೆಲು: ಮಂಗಳೂರಿನಲ್ಲಿ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ
ಮಾತೆರೆಗ್​ಲ ಸೊಲ್ಮೆಲು: ಮಂಗಳೂರಿನಲ್ಲಿ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ
ಇಂದು ಗಜಕೇಸರಿ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನಕಲಿ ಮೆಡಿಸಿನ್‌ನಿಂದಲೇ ಕೋಟಿ ಕೋಟಿ ಸಂಪಾದನೆ
ನಕಲಿ ಮೆಡಿಸಿನ್‌ನಿಂದಲೇ ಕೋಟಿ ಕೋಟಿ ಸಂಪಾದನೆ
ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ