AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನೋರಾ ಫತೇಹಿ, ಜಾಕ್ವೆಲಿನ್​ ಫರ್ನಾಂಡಿಸ್​ಗೆ ಸಂಕಷ್ಟ

ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್​ ಚಂದ್ರಶೇಖರ್​ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್ ಹಾಗೂ ನೋರಾ​ ಮೇಲೂ ಅನುಮಾನ ಮೂಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನೋರಾ ಫತೇಹಿ, ಜಾಕ್ವೆಲಿನ್​ ಫರ್ನಾಂಡಿಸ್​ಗೆ ಸಂಕಷ್ಟ
ಜಾಕ್ವೆಲಿನ್-ನೋರಾ ಫತೇಹಿ
TV9 Web
| Edited By: |

Updated on: Oct 14, 2021 | 1:28 PM

Share

ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಅನೇಕ ನಟಿಯರ ಹೆಸರು ತಳುಕು ಹಾಕಿಕೊಳ್ಳುತ್ತಿದೆ. ಜನಪ್ರಿಯ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಇತ್ತೀಚೆಗೆ ಸಮನ್ಸ್​ ನೀಡಲಾಗಿತ್ತು. ಈಗ ನೋರಾ ಫತೇಹಿ ಸರದಿ. ಬರೋಬ್ಬರಿ 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದಿದೆ. ಹೀಗಾಗಿ, ಜಾರಿ ನಿರ್ದೇಶನಾಲಯ (ಇಡಿ) ನೋರಾಗೆ ಸಮನ್ಸ್​ ನೀಡಿದೆ. ಇದರ ಜತೆ ಜಾಕ್ವೆಲಿನ್​ ಅವರನ್ನು ಮತ್ತೆ ವಿಚಾರಣೆಗೆ ಕರೆಯಲಾಗಿದೆ.

ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್​ ಚಂದ್ರಶೇಖರ್​ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್ ಹಾಗೂ ನೋರಾ​ ಮೇಲೂ ಅನುಮಾನ ಮೂಡಿದೆ. ಹಾಗಾಗಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಶ್ರೀಲಂಕಾ ಮೂಲದ ಜಾಕ್ವೆಲಿನ್​ ಅವರು ಬಾಲಿವುಡ್​ನಲ್ಲಿ ಭಾರಿ ಬೇಡಿಕೆಯ ನಟಿಯಾಗಿದ್ದಾರೆ. ಸಲ್ಮಾನ್​ ಖಾನ್​ ವಲಯದಲ್ಲಿ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಅವರು ಕನ್ನಡ ಚಿತ್ರರಂಗಕ್ಕೂ ಕಾಲಿಡುತ್ತಿದ್ದಾರೆ. ನೋರಾ ಅವರು ವಿಶೇಷ ಸಾಂಗ್​ಗೆ ಹೆಕ್ಕೆ ಹಾಕುವ ಮೂಲಕ ಗುರುತಿಸಿಕೊಂಡಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ಹಿಂದೆ ಜಾಕ್ವೆಲಿನ್​ ಅವರನ್ನು 5 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು. ಸೆ.25 ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಅವರು ಜಾರಿ ನಿರ್ದೇಶನಾಲಯದ ಕಚೇರಿಗೆ ಬಂದಿರಲಿಲ್ಲ. ಈ ಕಾರಣಕ್ಕೆ ಅವರಿಗೆ ಮತ್ತೆ ನೋಟಿಸ್​ ನೀಡಲಾಗಿದೆ ಎನ್ನಲಾಗಿದೆ.

ಜಾಕ್ವೆಲಿನ್​​ ಫರ್ನಾಂಡಿಸ್ ಹಾಗೂ ನೋರಾ ಜತೆ ಮುಖ್ಯ ಆರೋಪಿ ಸುಕೇಶ್​ ಚಂದ್ರಶೇಖರ್​ ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು? 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಇವರ​ ಕೈವಾಡ ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಸುಕೇಶ್​ ಚಂದ್ರಶೇಖರ್ ಒಡೆತನದಲ್ಲಿ ಇದ್ದ ಚೆನ್ನೈನ ಬಂಗಲೆ, 82 ಲಕ್ಷ ರೂ. ಹಣ ಹಾಗೂ 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿಚಾರಣೆ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು