AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನೋರಾ ಫತೇಹಿ, ಜಾಕ್ವೆಲಿನ್​ ಫರ್ನಾಂಡಿಸ್​ಗೆ ಸಂಕಷ್ಟ

ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್​ ಚಂದ್ರಶೇಖರ್​ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್ ಹಾಗೂ ನೋರಾ​ ಮೇಲೂ ಅನುಮಾನ ಮೂಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನೋರಾ ಫತೇಹಿ, ಜಾಕ್ವೆಲಿನ್​ ಫರ್ನಾಂಡಿಸ್​ಗೆ ಸಂಕಷ್ಟ
ಜಾಕ್ವೆಲಿನ್-ನೋರಾ ಫತೇಹಿ
TV9 Web
| Edited By: |

Updated on: Oct 14, 2021 | 1:28 PM

Share

ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಅನೇಕ ನಟಿಯರ ಹೆಸರು ತಳುಕು ಹಾಕಿಕೊಳ್ಳುತ್ತಿದೆ. ಜನಪ್ರಿಯ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಇತ್ತೀಚೆಗೆ ಸಮನ್ಸ್​ ನೀಡಲಾಗಿತ್ತು. ಈಗ ನೋರಾ ಫತೇಹಿ ಸರದಿ. ಬರೋಬ್ಬರಿ 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದಿದೆ. ಹೀಗಾಗಿ, ಜಾರಿ ನಿರ್ದೇಶನಾಲಯ (ಇಡಿ) ನೋರಾಗೆ ಸಮನ್ಸ್​ ನೀಡಿದೆ. ಇದರ ಜತೆ ಜಾಕ್ವೆಲಿನ್​ ಅವರನ್ನು ಮತ್ತೆ ವಿಚಾರಣೆಗೆ ಕರೆಯಲಾಗಿದೆ.

ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್​ ಚಂದ್ರಶೇಖರ್​ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್ ಹಾಗೂ ನೋರಾ​ ಮೇಲೂ ಅನುಮಾನ ಮೂಡಿದೆ. ಹಾಗಾಗಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಶ್ರೀಲಂಕಾ ಮೂಲದ ಜಾಕ್ವೆಲಿನ್​ ಅವರು ಬಾಲಿವುಡ್​ನಲ್ಲಿ ಭಾರಿ ಬೇಡಿಕೆಯ ನಟಿಯಾಗಿದ್ದಾರೆ. ಸಲ್ಮಾನ್​ ಖಾನ್​ ವಲಯದಲ್ಲಿ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಅವರು ಕನ್ನಡ ಚಿತ್ರರಂಗಕ್ಕೂ ಕಾಲಿಡುತ್ತಿದ್ದಾರೆ. ನೋರಾ ಅವರು ವಿಶೇಷ ಸಾಂಗ್​ಗೆ ಹೆಕ್ಕೆ ಹಾಕುವ ಮೂಲಕ ಗುರುತಿಸಿಕೊಂಡಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ಹಿಂದೆ ಜಾಕ್ವೆಲಿನ್​ ಅವರನ್ನು 5 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು. ಸೆ.25 ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಅವರು ಜಾರಿ ನಿರ್ದೇಶನಾಲಯದ ಕಚೇರಿಗೆ ಬಂದಿರಲಿಲ್ಲ. ಈ ಕಾರಣಕ್ಕೆ ಅವರಿಗೆ ಮತ್ತೆ ನೋಟಿಸ್​ ನೀಡಲಾಗಿದೆ ಎನ್ನಲಾಗಿದೆ.

ಜಾಕ್ವೆಲಿನ್​​ ಫರ್ನಾಂಡಿಸ್ ಹಾಗೂ ನೋರಾ ಜತೆ ಮುಖ್ಯ ಆರೋಪಿ ಸುಕೇಶ್​ ಚಂದ್ರಶೇಖರ್​ ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು? 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಇವರ​ ಕೈವಾಡ ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಸುಕೇಶ್​ ಚಂದ್ರಶೇಖರ್ ಒಡೆತನದಲ್ಲಿ ಇದ್ದ ಚೆನ್ನೈನ ಬಂಗಲೆ, 82 ಲಕ್ಷ ರೂ. ಹಣ ಹಾಗೂ 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಪ್ರಕರಣ; ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್ ವಿಚಾರಣೆ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ