‘ನಾನು ಇಲ್ಲಿ ಒಬ್ಬಂಟಿ, ನನ್ನ ಬಲಿಪಶು ಮಾಡಲಾಗಿದೆ’; ಕೋರ್ಟ್​ ಎದುರು ಭಾವುಕರಾದ ನಟಿ ನೋರಾ ಫತೇಹಿ

‘ನಾನು ಸುಕೇಶ್​ ಚಂದ್ರಶೇಖರ್​ ಜೊತೆ ಸಂಬಂಧ ಇಟ್ಟುಕೊಂಡಿದ್ದೆ ಎಂದು ಆರೋಪಿಸಿದರು. ಎಲ್ಲರ ಗಮನ ಬೇರೆಡೆ ಸೆಳೆಯಲು ನನ್ನ ಹೆಸರನ್ನು ಸೇರಿಸಲಾಗಿದೆ’ ಎಂದು ನೋರಾ ಹೇಳಿದ್ದಾರೆ.  

‘ನಾನು ಇಲ್ಲಿ ಒಬ್ಬಂಟಿ, ನನ್ನ ಬಲಿಪಶು ಮಾಡಲಾಗಿದೆ’; ಕೋರ್ಟ್​ ಎದುರು ಭಾವುಕರಾದ ನಟಿ ನೋರಾ ಫತೇಹಿ
ನೋರಾ-ಜಾಕ್ವೆಲಿನ್
Follow us
|

Updated on:Aug 01, 2023 | 8:28 AM

200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ (Sukesh Chandrashekhar) ಅರೆಸ್ಟ್​ ಆಗಿದ್ದಾನೆ. ಈತನ ಜೊತೆ ಸಂಪರ್ಕದಲ್ಲಿದ್ದರು ಎಂಬ ಆರೋಪದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಹಾಗೂ ನೋರಾ ಫತೇಹಿ ಕೂಡ ಸಂಕಷ್ಟ ಅನುಭವಿಸಿದ್ದಾರೆ. ಆಗಾಗ ಅವರು ವಿಚಾರಣೆ ಎದುರಿಸುತ್ತಿದ್ದಾರೆ. ತಮ್ಮ ಮಾನ ಹಾನಿ ಮಾಡಲಾಗಿದೆ ಎಂದು ಕಳೆದ ಡಿಸೆಂಬರ್​ನಲ್ಲಿ ನೋರಾ ಅವರು ಜಾಕ್ವೆಲಿನ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣದ ವಿಚಾರಣೆ ದೆಹಲಿಯ ಪಟಿಯಾಲ ಹೌಸ್​ಕೋರ್ಟ್​ನಲ್ಲಿ ನಡೆದಿದೆ. ಕೋರ್ಟ್​ಗೆ ಹಾಜರಿ ಹಾಕಿ ನೋರಾ ಅವರು ತಮ್ಮ ಹೇಳಿಕೆ ದಾಖಲು ಮಾಡಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನನ್ನನ್ನು ಬಲಿಪಶು ಮಾಡಲಾಗಿದೆ ಎಂಬುದು ನೋರಾ ಅವರ ಹೇಳಿಕೆ. ‘ನನ್ನನ್ನು ಸಮಯಸಾಧಕಿ ಎಂದು ಕರೆದರು. ನಾನು ಸುಕೇಶ್​ ಚಂದ್ರಶೇಖರ್​ ಜೊತೆ ಸಂಬಂಧ ಇಟ್ಟುಕೊಂಡಿದ್ದೆ ಎಂದು ಆರೋಪಿಸಿದರು. ಎಲ್ಲರ ಗಮನ ಬೇರೆಡೆ ಸೆಳೆಯಲು ನನ್ನ ಹೆಸರನ್ನು ಸೇರಿಸಲಾಗಿದೆ’ ಎಂದು ನೋರಾ ಹೇಳಿದ್ದಾರೆ.

‘ಈ ಪ್ರಕರಣದಿಂದ ನಾನು ಸಾಕಷ್ಟು ಆಫರ್ ಕಳೆದುಕೊಂಡಿದ್ದೇನೆ. ನನ್ನ ವರ್ಚಸ್ಸಿಗೆ ಕುತ್ತು ಬಂದಿದೆ. ಮಾನಸಿಕವಾಗಿ ಕಿರಿಕಿರಿ ಆಗಿದೆ. ಕಾರ್ಯಕ್ರಮವೊಂದಕ್ಕೆ ನನ್ನನ್ನು ಮುಖ್ಯ ಅತಿಥಿಯಾಗಿ ಕರೆಯಲಾಗಿತ್ತು ಅಷ್ಟೇ. ಈ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ನನಗೆ ಅವರ ಬಗ್ಗೆ ಗೊತ್ತೂ ಇಲ್ಲ. ನಾನು ಹೊರಗಿನವಳು. ನಾನು ಈ ದೇಶದಲ್ಲಿ ಒಬ್ಬಂಟಿ. ಹೀಗಾಗಿ ಕೆಲವರನ್ನು ರಕ್ಷಿಸಲು ನನ್ನ ಬಲಿಪಶು ಮಾಡಲಾಗಿದೆ’ ಎಂದು ನೋರಾ ಫತೇಹಿ ಹೇಳಿದ್ದಾರೆ.

ಇದನ್ನೂ ಓದಿ:  ಜಾಕ್ವೆಲಿನ್​ ಫರ್ನಾಂಡಿಸ್​ ಹಾಟ್​ ಫೋಟೋಸ್​ ನೋಡಿ ಹುಬ್ಬೇರಿಸಿದ ಪಡ್ಡೆ ಹುಡುಗರು

‘ನನ್ನ ವೃತ್ತಿ ಜೀವನಕ್ಕೆ ಹಾಗೂ ವರ್ಚಸ್ಸಿಗೆ ಉಂಟಾದ ಹಾನಿಗೆ ಪರಿಹಾರ ಹಣ ಬೇಕು. ಈ ಕಾರಣದಿಂದ ನಾನು ಮಾನಹಾನಿ ಅರ್ಜಿ ಸಲ್ಲಿಸಿದ್ದೇನೆ’ ಎಂದು ನೋರಾ ಹೇಳಿದ್ದಾರೆ. ಡಿಸೆಂಬರ್ 12ರಂದು ನೋರಾ ಅವರು ಜಾಕ್ವೆಲಿನ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದರು. ಈ ಪ್ರಕರಣದಲ್ಲಿ ನೋರಾ ಹೆಸರನ್ನು  ಜಾಕ್ವೆಲಿನ್ ಎಳೆದು ತಂದಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:22 am, Tue, 1 August 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!