AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೆಗ್ನೆನ್ಸಿ ಅನೌನ್ಸ್ ಮಾಡಿ ಸರ್​ಪ್ರೈಸ್ ನೀಡಿದ ಸೆಲೆಬ್ರಿಟಿ ದಂಪತಿಗಳಿವರು..

ಮಗುವಿಗೆ ಸಂಬಂಧಿಸಿದ ಬಟ್ಟೆ, ಶೂ, ಆಟಿಕೆ, ಟೋಪಿ ಮುಂತಾದ ವಸ್ತುಗಳಿರುವ ಚಿತ್ರವನ್ನು ದೀಪಿಕಾ ಪೋಸ್ಟ್​ ಮಾಡಿದ್ದಾರೆ. ‘ಸೆಪ್ಟೆಂಬರ್​ 2024 ’ ಎಂದು ಇದರಲ್ಲಿ ಬರೆಯಲಾಗಿದೆ. ಈ ದಂಪತಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಈ ರೀತಿ ಸರ್​ಪ್ರೈಸ್ ನೀಡಿದ ಅನೇಕ ಸೆಲೆಬ್ರಿಟಿಗಳು ಇದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.

ಪ್ರೆಗ್ನೆನ್ಸಿ ಅನೌನ್ಸ್ ಮಾಡಿ ಸರ್​ಪ್ರೈಸ್ ನೀಡಿದ ಸೆಲೆಬ್ರಿಟಿ ದಂಪತಿಗಳಿವರು..
ಪ್ರೆಗ್ನೆನ್ಸಿ ಅನೌನ್ಸ್ ಮಾಡಿ ಸರ್​ಪ್ರೈಸ್ ನೀಡಿದ ಸೆಲೆಬ್ರಿಟಿ ದಂಪತಿಗಳಿವರು..
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 01, 2024 | 9:39 AM

Share

ರಣವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ (Deepika Padukone) ಮದುವೆ ಆಗಿ ಹಲವು ವರ್ಷಗಳ ಬಳಿಕ ಮಗು ಹೊಂದುವ ನಿರ್ಧಾರಕ್ಕೆ ಬಂದಿದ್ದಾರೆ. ಇವರ ಘೋಷಣೆ ಅನೇಕರಿಗೆ ಅಚ್ಚರಿ ಮೂಡಿಸಿದೆ. ಸೆಪ್ಟೆಂಬರ್​ನಲ್ಲಿ ದೀಪಿಕಾ ಹಾಗೂ ರಣವೀರ್ ಸಿಂಗ್ ಪಾಲಕರಾಗಿ ಪ್ರಮೋಟ್ ಆಗಲಿದ್ದಾರೆ. ರಣವೀರ್, ದೀಪಿಕಾ ಘೋಷಣೆ ಅನೇಕರಲ್ಲಿ ಅಚ್ಚರಿ ಮೂಡಿಸಿದೆ.  ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಕಾಣಿಸಿಕೊಂಡಾಗ ಅವರ ಹೊಟ್ಟೆ ಸ್ವಲ್ಪ ದೊಡ್ಡದಾಗಿದ್ದರೂ ಪ್ರೆಗ್ನೆಂಟ್ ವಿಚಾರ ಹರಿದಾಡುತ್ತದೆ. ಆದರೆ, ಕೆಲವೊಮ್ಮೆ ಆ ರೀತಿ ಆಗುವುದಿಲ್ಲ. ಏಕಾಏಕಿ ಘೋಷಣೆಯಿಂದ ಅನೇಕರಿಗೆ ಅಚ್ಚರಿ ಆಗುತ್ತದೆ. ಈ ರೀತಿ ಅಚ್ಚರಿ ತಂದ ಘೋಷಣೆಗಳು ಇವು.

ಸೋನಂ ಕಪೂರ್ ಆನಂದ್ ಅಹೂಜಾ

ಸೋನಂ ಕಪೂರ್ ಹಾಗೂ ಆನಂದ್ ಅಹೂಜಾ ಅವರು ಮದುವೆ ಆಗಿ ಕೆಲವು ವರ್ಷಗಳ ಬಳಿಕ ಮಗುವನ್ನು ಪಡೆದರು. ಬೇಬಿ ಬಂಪ್ ಫೋಟೋ ಹಂಚಿಕೊಂಡು ಸೋನಂ ಈ ವಿಚಾರ ರಿವೀಲ್ ಮಾಡಿದ್ದರು. ಈ ವಿಚಾರ ಸಾಕಷ್ಟು ಸದ್ದು ಮಾಡಿತ್ತು.

ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್

ಕರೀನಾ ಕಪೂರ್ ಹಾಗೂ ಸೈಫ್ ಅಲಿ ಖಾನ್ ಅವರು 2016ರಲ್ಲಿ ಮಗು ಹೊಂದುತ್ತಿರುವ ಬಗ್ಗೆ ಘೋಷಣೆ ಮಾಡಿದರು. ಸೋಶಿಯಲ್ ಮೀಡಿಯಾ ಮೂಲಕ ಸೋನಂ ಕಪೂರ್ ಪ್ರೆಗ್ನೆನ್ಸಿ ವಿಚಾರ ರಿವೀಲ್ ಮಾಡಿದರು. ಅವರ ಬೇಬಿಬಂಪ್ ಫೋಟೋ ಗಮನ ಸೆಳೆಯಿತು.

ನಟಾಶಾ ಹಾಗೂ ಹಾರ್ದಿಕ್ ಪಾಂಡ್ಯ

ಭಾರತ ಕ್ರಿಕೆಟ್ ತಂಡದ ಆಟಗಾರ ಹಾರ್ದಿಕ್ ಪಾಂಡ್ಯಾ ಹಾಗೂ ಅವರ ಪತ್ನಿ ನಟಿ ನಟಾಶಾ ಮದುವೆಗೂ ಮೊದಲೇ ಮಗು ಹೊಂದಿದರು. ಡೇಟಿಂಗ್ ಮಾಡುವಾಗಲೇ ನಟಾಶಾ ಪ್ರೆಗ್ನೆಂಟ್ ಆದರು. ಮಗು ಹುಟ್ಟಿದ ಬಳಿಕ ಮದುವೆ ಆದರು ಇವರು.

ನೇಹಾ ಧೂಪಿಯಾ ಹಾಗೂ ಅಂಗದ್ ಬೇಡಿ

ನೇಹಾ ಧೂಪಿಯಾ ಹಾಗೂ ಅಂಗದ್ ಬೇಡಿ ಮದುವೆ ಆದ ಕೆಲವೇ ತಿಂಗಳಲ್ಲಿ ಮಗುವಿನ ವಿಚಾರ ರಿವೀಲ್ ಮಾಡಿದರು. ಈ ಕಾರಣಕ್ಕೆ ನೇಹಾ ಅವರು ಸಾಕಷ್ಟು ಟ್ರೋಲ್ ಆಗಬೇಕಾಯಿತು.

ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ

ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮದುವೆ ಆದ ನಂತರ ಹಾಯಾಗಿ ಸುತ್ತಾಟ ನಡೆಸಿದರು. ಕೆಲವು ವರ್ಷಗಳ ಬಳಿಕ ಮಗು ಹೊಂದಿದರು. ಮೊದಲ ಮಗುವಿನ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಅನೌನ್ಸ್ ಮಾಡಿದ್ದರು. ಆದರೆ, ಎರಡನೇ ಮಗುವಿನ ವಿಚಾರವನ್ನು ಗುಟ್ಟಾಗಿಯೇ ಇಡಲಾಗಿತ್ತು.

ವರುಣ್ ಧವನ್ ಹಾಗೂ ನಟಾಶಾ

ಬಾಲಿವುಡ್ ಕಪಲ್ ವರುಣ್ ಧವನ್ ಹಾಗೂ ನಟಾಶಾ ಅವರು ತಮ್ಮದೇ ಸ್ಟೈಲ್​ನಲ್ಲಿ ಪ್ರೆಗ್ನೆನ್ಸಿ ವಿಚಾರ ರಿವೀಲ್ ಮಾಡಿದ್ದರು. ಬ್ಲಾಕ್ ಆ್ಯಂಡ್ ವೈಟ್ ಫೋಟೋ ಹಂಚಿಕೊಂಡಿದ್ದ ವರುಣ್ ಧವನ್ ಅವರು ನಟಾಶಾ ಹೊಟ್ಟೆಗೆ ಮುತ್ತಿಡುತ್ತಿದ್ದರು. ಈ ಮೂಲಕ ವಿಚಾರ ರಿವೀಲ್ ಮಾಡಿದ್ದರು.

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್

ಆಲಿಯಾ ಭಟ್ ಹಾಗೂ ರಣಬೀರ್ ಕಪೂರ್ 2022ರ ಏಪ್ರಿಲ್ 14ರಂದು ಮದುವೆ ಆದರು. ಮದುವೆ ಆದ ಕೆಲವೇ ತಿಂಗಳಲ್ಲಿ ಪ್ರೆಗ್ನೆನ್ಸಿ ವಿಚಾರ ರಿವೀಲ್ ಮಾಡಿದರು ಆಲಿಯಾ. ಮದುವೆ ಆದ ಕೇವಲ ಏಳು ತಿಂಗಳಿಗೆ ಮಗು ಹೊಂದಿದರು ಆಲಿಯಾ.

ಬಿಪಾಶಾ ಬಸು ಹಾಗೂ ಕರಣ್ ಸಿಂಗ್ ಗ್ರೋವರ್

ಬಿಪಾಶಾ ಬಸ್ಸು ಅವರು ಬೇಬಿ ಬಂಪ್ ಫೋಟೋ ಹಂಚಿಕೊಂಡು ಸಿಹಿ ಸುದ್ದಿ ನೀಡಿದ್ದರು. ಅವರು ಸದ್ಯ ಚಿತ್ರರಂಗದಿಂದ ದೂರವೇ ಇದ್ದಾರೆ. ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇದ್ದಾರೆ.

ಶಾಹಿದ್ ಕಪೂರ್ ಹಾಗೂ ಮೀರಾ ಕಪೂರ್

ಶಾಹಿದ್ ಕಪೂರ್ ಹಾಗೂ ಮೀರಾ ಕಪೂರ್ 2018ರಲ್ಲಿ ಎರಡನೇ ಮಗು ಹೊಂದುತ್ತಿರುವ ಬಗ್ಗೆ ಘೋಷಣೆ ಮಾಡಿದರು. ತಾನು ಅಕ್ಕ ಆಗುತ್ತಿದ್ದೇನೆ ಎಂದು ಶಾಹಿದ್ ಹಾಗೂ ಮೀರಾ ಮಗಳು ಮಿಶಾ ಅನೌನ್ಸ್ ಮಾಡುವ ರೀತಿಯಲ್ಲಿ ಈ ಫೋಟೋ ಇತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ