AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್​’ ಚಿತ್ರಕ್ಕೆ ರಶ್ಮಿಕಾಗಿಂತ ಮುನ್ನ ಆಗಿತ್ತು ಬೇರೆ ನಟಿಯ ಆಯ್ಕೆ; ಯಾರು ಅದು?

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂದೀಪ್​ ರೆಡ್ಡಿ ವಂಗಾ ಅವರು ಪಾತ್ರವರ್ಗದ ಆಯ್ಕೆ ಬಗ್ಗೆ ಮಾತನಾಡಿದ್ದಾರೆ. ‘ಅನಿಮಲ್​ ಶೂಟಿಂಗ್​ ಶುರು ಆಗುವುದಕ್ಕಿಂತ ಒಂದೂವರೆ ವರ್ಷ ಮೊದಲೇ ಆ ನಟಿ ನಮ್ಮ ಚಿತ್ರಕ್ಕೆ ಸಹಿ ಮಾಡಿದ್ದರು. ಆದರೆ ಅವರಲ್ಲಿ ನನಗೆ ಗೀತಾಂಜಲಿ ಪಾತ್ರ ಕಾಣಿಸಲಿಲ್ಲ’ ಎಂದು ಅವರು ಹೇಳಿದ್ದಾರೆ.

‘ಅನಿಮಲ್​’ ಚಿತ್ರಕ್ಕೆ ರಶ್ಮಿಕಾಗಿಂತ ಮುನ್ನ ಆಗಿತ್ತು ಬೇರೆ ನಟಿಯ ಆಯ್ಕೆ; ಯಾರು ಅದು?
ರಶ್ಮಿಕಾ ಮಂದಣ್ಣ, ಸಂದೀಪ್​ ರೆಡ್ಡಿ ವಂಗಾ
ಮದನ್​ ಕುಮಾರ್​
|

Updated on: Dec 24, 2023 | 2:06 PM

Share

ಪ್ಯಾನ್​ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಒಂದಕ್ಕಿಂತ ಒಂದು ಉತ್ತಮವಾದ ಅವಕಾಶಗಳು ಸಿಗುತ್ತಿವೆ. ಅವರು ನಟಿಸಿದ ಎಲ್ಲ ಸಿನಿಮಾಗಳು ಗೆಲ್ಲುತ್ತಿವೆ. ಇದರಿಂದ ಅವರ ಖ್ಯಾತಿ ಹೆಚ್ಚಾಗಿದೆ. ಇತ್ತೀಚೆಗೆ ತೆರೆಕಂಡ ‘ಅನಿಮಲ್​’ (Animal) ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಚಿತ್ರಕ್ಕೆ ಗಲ್ಲಾಪೆಟ್ಟಿಗೆಯಲ್ಲಿ 500 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಆಗಿದೆ. ಅಚ್ಚರಿ ಏನೆಂದರೆ, ‘ಅನಿಮಲ್​’ ಸಿನಿಮಾಗೆ ರಶ್ಮಿಕಾ ಮಂದಣ್ಣ ಅವರು ಮೊದಲ ಆಯ್ಕೆ ಆಗಿರಲಿಲ್ಲ. ಅವರಿಗಿಂತಲೂ ಮುನ್ನ ಪರಿಣೀತಿ ಚೋಪ್ರಾ (Parineeti Chopra) ಆಯ್ಕೆ ಆಗಿದ್ದರು.

ಸಂದೀಪ್​ ರೆಡ್ಡಿ ವಂಗಾ ಅವರು ‘ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾವನ್ನು ಕೆಲವರು ಕಟುವಾಗಿ ಟೀಕಿಸಿದ್ದಾರೆ. ಮಹಿಳೆಯರನ್ನು ಅವಹೇಳನ ಮಾಡುವಂತಹ ದೃಶ್ಯಗಳು ಮತ್ತು ಸಂಭಾಷಣೆಗಳು ಈ ಚಿತ್ರದಲ್ಲಿ ಇವೆ ಎಂಬುದು ಅನೇಕರ ವಾದ. ಅದೇನೇ ಇದ್ದರೂ, ಸಿನಿಮಾದ ಗಳಿಕೆಗೆ ತೊಂದರೆ ಆಗಿಲ್ಲ. ಈ ಸಿನಿಮಾದ ಪಾತ್ರವರ್ಗದ ಆಯ್ಕೆ ಬಗ್ಗೆ ಸಂದೀಪ್​ ರೆಡ್ಡಿ ವಂಗಾ ಅವರು ಈಗ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಅನಿಮಲ್​’ ಚಿತ್ರದ ಬೋಲ್ಡ್​ ದೃಶ್ಯಗಳಿಗೆ ಕತ್ತರಿ; 27 ನಿಮಿಷ ಕಟ್​ ಮಾಡಿದ ಸೆನ್ಸಾರ್​ ಮಂಡಳಿ

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂದೀಪ್​ ರೆಡ್ಡಿ ವಂಗಾ ಅವರು ಪರಿಣೀತಿ ಚೋಪ್ರಾ ಬಗ್ಗೆ ಮಾತನಾಡಿದ್ದಾರೆ. ‘ಅನಿಮಲ್​ ಸಿನಿಮಾದ ಶೂಟಿಂಗ್​ ಶುರು ಆಗುವುದಕ್ಕಿಂತ ಒಂದೂವರೆ ವರ್ಷ ಮೊದಲೇ ಪರಿಣೀತಿ ಚೋಪ್ರಾ ಈ ಚಿತ್ರಕ್ಕೆ ಸಹಿ ಮಾಡಿದ್ದರು. ಆದರೆ ತಪ್ಪು ನನ್ನದೇ. ಅದಕ್ಕಾಗಿ ಅವರಿಗೆ ನಾನು ಕ್ಷಮೆ ಕೇಳಿದ್ದೇನೆ. ಅವರಲ್ಲಿ ನನಗೆ ಗೀತಾಂಜಲಿ ಪಾತ್ರ ಕಾಣಿಸಲಿಲ್ಲ. ಕೆಲವರಿಗೆ ಕೆಲವು ಪಾತ್ರಗಳು ಸೂಕ್ತ ಆಗುವುದಿಲ್ಲ’ ಎಂದು ಸಂದೀಪ್​ ರೆಡ್ಡಿ ವಂಗಾ ಹೇಳಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಡೀಪ್​ಫೇಕ್​ ವಿಡಿಯೋ ಕೇಸ್​: ನಾಲ್ವರು ಶಂಕಿತರ ವಿಚಾರಣೆ

‘ನನಗೆ ಆಡಿಷನ್​ನಲ್ಲಿ ನಂಬಿಕೆ ಇಲ್ಲ. ಆ ಕ್ಷಣಕ್ಕೆ ಅನಿಸಿದ್ದನ್ನು ಮಾಡುತ್ತೇನೆ. ಮೊದಲಿಂದಲೂ ನನಗೆ ಪರಿಣೀತ ಚೋಪ್ರಾ ನಟನೆ ಇಷ್ಟ ಆಗಿತ್ತು. ಅವರ ಜೊತೆ ಸಿನಿಮಾ ಮಾಡಲು ನಾನು ಬಯಸಿದ್ದೆ. ‘ಕಬೀರ್​ ಸಿಂಗ್​’ ಸಿನಿಮಾಗೂ ಅವರೇ ನಾಯಕಿ ಆಗಬೇಕಿತ್ತು. ಆದರೆ ಸಾಧ್ಯವಾಗಿರಲಿಲ್ಲ. ಈ ಬಾರಿ ನಾನು ಅವರಿಗೆ ಕ್ಷಮೆ ಕೇಳಿದೆ. ಸಿನಿಮಾಗಿಂತಲೂ ದೊಡ್ಡದು ಯಾವುದೂ ಇಲ್ಲ. ಹಾಗಾಗಿ ನಾನು ‘ಅನಿಮಲ್​’ ಚಿತ್ರಕ್ಕೆ ಬೇರೆ ನಟಿಯನ್ನುಆಯ್ಕೆ ಮಾಡಿಕೊಳ್ಳುತ್ತೇನೆ ಎಂದೆ. ಅದರಿಂದ ಅವರಿಗೆ ಬೇಸರ ಆಯಿತು. ಆದರೂ ನನ್ನನ್ನು ಅರ್ಥ ಮಾಡಿಕೊಂಡರು’ ಎಂದಿದ್ದಾರೆ ಸಂದೀಪ್​ ರೆಡ್ಡಿ ವಂಗಾ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ