AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್​’ ಚಿತ್ರಕ್ಕೆ ರಶ್ಮಿಕಾಗಿಂತ ಮುನ್ನ ಆಗಿತ್ತು ಬೇರೆ ನಟಿಯ ಆಯ್ಕೆ; ಯಾರು ಅದು?

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂದೀಪ್​ ರೆಡ್ಡಿ ವಂಗಾ ಅವರು ಪಾತ್ರವರ್ಗದ ಆಯ್ಕೆ ಬಗ್ಗೆ ಮಾತನಾಡಿದ್ದಾರೆ. ‘ಅನಿಮಲ್​ ಶೂಟಿಂಗ್​ ಶುರು ಆಗುವುದಕ್ಕಿಂತ ಒಂದೂವರೆ ವರ್ಷ ಮೊದಲೇ ಆ ನಟಿ ನಮ್ಮ ಚಿತ್ರಕ್ಕೆ ಸಹಿ ಮಾಡಿದ್ದರು. ಆದರೆ ಅವರಲ್ಲಿ ನನಗೆ ಗೀತಾಂಜಲಿ ಪಾತ್ರ ಕಾಣಿಸಲಿಲ್ಲ’ ಎಂದು ಅವರು ಹೇಳಿದ್ದಾರೆ.

‘ಅನಿಮಲ್​’ ಚಿತ್ರಕ್ಕೆ ರಶ್ಮಿಕಾಗಿಂತ ಮುನ್ನ ಆಗಿತ್ತು ಬೇರೆ ನಟಿಯ ಆಯ್ಕೆ; ಯಾರು ಅದು?
ರಶ್ಮಿಕಾ ಮಂದಣ್ಣ, ಸಂದೀಪ್​ ರೆಡ್ಡಿ ವಂಗಾ
ಮದನ್​ ಕುಮಾರ್​
|

Updated on: Dec 24, 2023 | 2:06 PM

Share

ಪ್ಯಾನ್​ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಒಂದಕ್ಕಿಂತ ಒಂದು ಉತ್ತಮವಾದ ಅವಕಾಶಗಳು ಸಿಗುತ್ತಿವೆ. ಅವರು ನಟಿಸಿದ ಎಲ್ಲ ಸಿನಿಮಾಗಳು ಗೆಲ್ಲುತ್ತಿವೆ. ಇದರಿಂದ ಅವರ ಖ್ಯಾತಿ ಹೆಚ್ಚಾಗಿದೆ. ಇತ್ತೀಚೆಗೆ ತೆರೆಕಂಡ ‘ಅನಿಮಲ್​’ (Animal) ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಚಿತ್ರಕ್ಕೆ ಗಲ್ಲಾಪೆಟ್ಟಿಗೆಯಲ್ಲಿ 500 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಆಗಿದೆ. ಅಚ್ಚರಿ ಏನೆಂದರೆ, ‘ಅನಿಮಲ್​’ ಸಿನಿಮಾಗೆ ರಶ್ಮಿಕಾ ಮಂದಣ್ಣ ಅವರು ಮೊದಲ ಆಯ್ಕೆ ಆಗಿರಲಿಲ್ಲ. ಅವರಿಗಿಂತಲೂ ಮುನ್ನ ಪರಿಣೀತಿ ಚೋಪ್ರಾ (Parineeti Chopra) ಆಯ್ಕೆ ಆಗಿದ್ದರು.

ಸಂದೀಪ್​ ರೆಡ್ಡಿ ವಂಗಾ ಅವರು ‘ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾವನ್ನು ಕೆಲವರು ಕಟುವಾಗಿ ಟೀಕಿಸಿದ್ದಾರೆ. ಮಹಿಳೆಯರನ್ನು ಅವಹೇಳನ ಮಾಡುವಂತಹ ದೃಶ್ಯಗಳು ಮತ್ತು ಸಂಭಾಷಣೆಗಳು ಈ ಚಿತ್ರದಲ್ಲಿ ಇವೆ ಎಂಬುದು ಅನೇಕರ ವಾದ. ಅದೇನೇ ಇದ್ದರೂ, ಸಿನಿಮಾದ ಗಳಿಕೆಗೆ ತೊಂದರೆ ಆಗಿಲ್ಲ. ಈ ಸಿನಿಮಾದ ಪಾತ್ರವರ್ಗದ ಆಯ್ಕೆ ಬಗ್ಗೆ ಸಂದೀಪ್​ ರೆಡ್ಡಿ ವಂಗಾ ಅವರು ಈಗ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಅನಿಮಲ್​’ ಚಿತ್ರದ ಬೋಲ್ಡ್​ ದೃಶ್ಯಗಳಿಗೆ ಕತ್ತರಿ; 27 ನಿಮಿಷ ಕಟ್​ ಮಾಡಿದ ಸೆನ್ಸಾರ್​ ಮಂಡಳಿ

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂದೀಪ್​ ರೆಡ್ಡಿ ವಂಗಾ ಅವರು ಪರಿಣೀತಿ ಚೋಪ್ರಾ ಬಗ್ಗೆ ಮಾತನಾಡಿದ್ದಾರೆ. ‘ಅನಿಮಲ್​ ಸಿನಿಮಾದ ಶೂಟಿಂಗ್​ ಶುರು ಆಗುವುದಕ್ಕಿಂತ ಒಂದೂವರೆ ವರ್ಷ ಮೊದಲೇ ಪರಿಣೀತಿ ಚೋಪ್ರಾ ಈ ಚಿತ್ರಕ್ಕೆ ಸಹಿ ಮಾಡಿದ್ದರು. ಆದರೆ ತಪ್ಪು ನನ್ನದೇ. ಅದಕ್ಕಾಗಿ ಅವರಿಗೆ ನಾನು ಕ್ಷಮೆ ಕೇಳಿದ್ದೇನೆ. ಅವರಲ್ಲಿ ನನಗೆ ಗೀತಾಂಜಲಿ ಪಾತ್ರ ಕಾಣಿಸಲಿಲ್ಲ. ಕೆಲವರಿಗೆ ಕೆಲವು ಪಾತ್ರಗಳು ಸೂಕ್ತ ಆಗುವುದಿಲ್ಲ’ ಎಂದು ಸಂದೀಪ್​ ರೆಡ್ಡಿ ವಂಗಾ ಹೇಳಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಡೀಪ್​ಫೇಕ್​ ವಿಡಿಯೋ ಕೇಸ್​: ನಾಲ್ವರು ಶಂಕಿತರ ವಿಚಾರಣೆ

‘ನನಗೆ ಆಡಿಷನ್​ನಲ್ಲಿ ನಂಬಿಕೆ ಇಲ್ಲ. ಆ ಕ್ಷಣಕ್ಕೆ ಅನಿಸಿದ್ದನ್ನು ಮಾಡುತ್ತೇನೆ. ಮೊದಲಿಂದಲೂ ನನಗೆ ಪರಿಣೀತ ಚೋಪ್ರಾ ನಟನೆ ಇಷ್ಟ ಆಗಿತ್ತು. ಅವರ ಜೊತೆ ಸಿನಿಮಾ ಮಾಡಲು ನಾನು ಬಯಸಿದ್ದೆ. ‘ಕಬೀರ್​ ಸಿಂಗ್​’ ಸಿನಿಮಾಗೂ ಅವರೇ ನಾಯಕಿ ಆಗಬೇಕಿತ್ತು. ಆದರೆ ಸಾಧ್ಯವಾಗಿರಲಿಲ್ಲ. ಈ ಬಾರಿ ನಾನು ಅವರಿಗೆ ಕ್ಷಮೆ ಕೇಳಿದೆ. ಸಿನಿಮಾಗಿಂತಲೂ ದೊಡ್ಡದು ಯಾವುದೂ ಇಲ್ಲ. ಹಾಗಾಗಿ ನಾನು ‘ಅನಿಮಲ್​’ ಚಿತ್ರಕ್ಕೆ ಬೇರೆ ನಟಿಯನ್ನುಆಯ್ಕೆ ಮಾಡಿಕೊಳ್ಳುತ್ತೇನೆ ಎಂದೆ. ಅದರಿಂದ ಅವರಿಗೆ ಬೇಸರ ಆಯಿತು. ಆದರೂ ನನ್ನನ್ನು ಅರ್ಥ ಮಾಡಿಕೊಂಡರು’ ಎಂದಿದ್ದಾರೆ ಸಂದೀಪ್​ ರೆಡ್ಡಿ ವಂಗಾ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ