AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್​’ ಚಿತ್ರಕ್ಕೆ ರಶ್ಮಿಕಾಗಿಂತ ಮುನ್ನ ಆಗಿತ್ತು ಬೇರೆ ನಟಿಯ ಆಯ್ಕೆ; ಯಾರು ಅದು?

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂದೀಪ್​ ರೆಡ್ಡಿ ವಂಗಾ ಅವರು ಪಾತ್ರವರ್ಗದ ಆಯ್ಕೆ ಬಗ್ಗೆ ಮಾತನಾಡಿದ್ದಾರೆ. ‘ಅನಿಮಲ್​ ಶೂಟಿಂಗ್​ ಶುರು ಆಗುವುದಕ್ಕಿಂತ ಒಂದೂವರೆ ವರ್ಷ ಮೊದಲೇ ಆ ನಟಿ ನಮ್ಮ ಚಿತ್ರಕ್ಕೆ ಸಹಿ ಮಾಡಿದ್ದರು. ಆದರೆ ಅವರಲ್ಲಿ ನನಗೆ ಗೀತಾಂಜಲಿ ಪಾತ್ರ ಕಾಣಿಸಲಿಲ್ಲ’ ಎಂದು ಅವರು ಹೇಳಿದ್ದಾರೆ.

‘ಅನಿಮಲ್​’ ಚಿತ್ರಕ್ಕೆ ರಶ್ಮಿಕಾಗಿಂತ ಮುನ್ನ ಆಗಿತ್ತು ಬೇರೆ ನಟಿಯ ಆಯ್ಕೆ; ಯಾರು ಅದು?
ರಶ್ಮಿಕಾ ಮಂದಣ್ಣ, ಸಂದೀಪ್​ ರೆಡ್ಡಿ ವಂಗಾ
ಮದನ್​ ಕುಮಾರ್​
|

Updated on: Dec 24, 2023 | 2:06 PM

Share

ಪ್ಯಾನ್​ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರಿಗೆ ಒಂದಕ್ಕಿಂತ ಒಂದು ಉತ್ತಮವಾದ ಅವಕಾಶಗಳು ಸಿಗುತ್ತಿವೆ. ಅವರು ನಟಿಸಿದ ಎಲ್ಲ ಸಿನಿಮಾಗಳು ಗೆಲ್ಲುತ್ತಿವೆ. ಇದರಿಂದ ಅವರ ಖ್ಯಾತಿ ಹೆಚ್ಚಾಗಿದೆ. ಇತ್ತೀಚೆಗೆ ತೆರೆಕಂಡ ‘ಅನಿಮಲ್​’ (Animal) ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಈ ಚಿತ್ರಕ್ಕೆ ಗಲ್ಲಾಪೆಟ್ಟಿಗೆಯಲ್ಲಿ 500 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಆಗಿದೆ. ಅಚ್ಚರಿ ಏನೆಂದರೆ, ‘ಅನಿಮಲ್​’ ಸಿನಿಮಾಗೆ ರಶ್ಮಿಕಾ ಮಂದಣ್ಣ ಅವರು ಮೊದಲ ಆಯ್ಕೆ ಆಗಿರಲಿಲ್ಲ. ಅವರಿಗಿಂತಲೂ ಮುನ್ನ ಪರಿಣೀತಿ ಚೋಪ್ರಾ (Parineeti Chopra) ಆಯ್ಕೆ ಆಗಿದ್ದರು.

ಸಂದೀಪ್​ ರೆಡ್ಡಿ ವಂಗಾ ಅವರು ‘ಅನಿಮಲ್​’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾವನ್ನು ಕೆಲವರು ಕಟುವಾಗಿ ಟೀಕಿಸಿದ್ದಾರೆ. ಮಹಿಳೆಯರನ್ನು ಅವಹೇಳನ ಮಾಡುವಂತಹ ದೃಶ್ಯಗಳು ಮತ್ತು ಸಂಭಾಷಣೆಗಳು ಈ ಚಿತ್ರದಲ್ಲಿ ಇವೆ ಎಂಬುದು ಅನೇಕರ ವಾದ. ಅದೇನೇ ಇದ್ದರೂ, ಸಿನಿಮಾದ ಗಳಿಕೆಗೆ ತೊಂದರೆ ಆಗಿಲ್ಲ. ಈ ಸಿನಿಮಾದ ಪಾತ್ರವರ್ಗದ ಆಯ್ಕೆ ಬಗ್ಗೆ ಸಂದೀಪ್​ ರೆಡ್ಡಿ ವಂಗಾ ಅವರು ಈಗ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ‘ಅನಿಮಲ್​’ ಚಿತ್ರದ ಬೋಲ್ಡ್​ ದೃಶ್ಯಗಳಿಗೆ ಕತ್ತರಿ; 27 ನಿಮಿಷ ಕಟ್​ ಮಾಡಿದ ಸೆನ್ಸಾರ್​ ಮಂಡಳಿ

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂದೀಪ್​ ರೆಡ್ಡಿ ವಂಗಾ ಅವರು ಪರಿಣೀತಿ ಚೋಪ್ರಾ ಬಗ್ಗೆ ಮಾತನಾಡಿದ್ದಾರೆ. ‘ಅನಿಮಲ್​ ಸಿನಿಮಾದ ಶೂಟಿಂಗ್​ ಶುರು ಆಗುವುದಕ್ಕಿಂತ ಒಂದೂವರೆ ವರ್ಷ ಮೊದಲೇ ಪರಿಣೀತಿ ಚೋಪ್ರಾ ಈ ಚಿತ್ರಕ್ಕೆ ಸಹಿ ಮಾಡಿದ್ದರು. ಆದರೆ ತಪ್ಪು ನನ್ನದೇ. ಅದಕ್ಕಾಗಿ ಅವರಿಗೆ ನಾನು ಕ್ಷಮೆ ಕೇಳಿದ್ದೇನೆ. ಅವರಲ್ಲಿ ನನಗೆ ಗೀತಾಂಜಲಿ ಪಾತ್ರ ಕಾಣಿಸಲಿಲ್ಲ. ಕೆಲವರಿಗೆ ಕೆಲವು ಪಾತ್ರಗಳು ಸೂಕ್ತ ಆಗುವುದಿಲ್ಲ’ ಎಂದು ಸಂದೀಪ್​ ರೆಡ್ಡಿ ವಂಗಾ ಹೇಳಿದ್ದಾರೆ.

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಡೀಪ್​ಫೇಕ್​ ವಿಡಿಯೋ ಕೇಸ್​: ನಾಲ್ವರು ಶಂಕಿತರ ವಿಚಾರಣೆ

‘ನನಗೆ ಆಡಿಷನ್​ನಲ್ಲಿ ನಂಬಿಕೆ ಇಲ್ಲ. ಆ ಕ್ಷಣಕ್ಕೆ ಅನಿಸಿದ್ದನ್ನು ಮಾಡುತ್ತೇನೆ. ಮೊದಲಿಂದಲೂ ನನಗೆ ಪರಿಣೀತ ಚೋಪ್ರಾ ನಟನೆ ಇಷ್ಟ ಆಗಿತ್ತು. ಅವರ ಜೊತೆ ಸಿನಿಮಾ ಮಾಡಲು ನಾನು ಬಯಸಿದ್ದೆ. ‘ಕಬೀರ್​ ಸಿಂಗ್​’ ಸಿನಿಮಾಗೂ ಅವರೇ ನಾಯಕಿ ಆಗಬೇಕಿತ್ತು. ಆದರೆ ಸಾಧ್ಯವಾಗಿರಲಿಲ್ಲ. ಈ ಬಾರಿ ನಾನು ಅವರಿಗೆ ಕ್ಷಮೆ ಕೇಳಿದೆ. ಸಿನಿಮಾಗಿಂತಲೂ ದೊಡ್ಡದು ಯಾವುದೂ ಇಲ್ಲ. ಹಾಗಾಗಿ ನಾನು ‘ಅನಿಮಲ್​’ ಚಿತ್ರಕ್ಕೆ ಬೇರೆ ನಟಿಯನ್ನುಆಯ್ಕೆ ಮಾಡಿಕೊಳ್ಳುತ್ತೇನೆ ಎಂದೆ. ಅದರಿಂದ ಅವರಿಗೆ ಬೇಸರ ಆಯಿತು. ಆದರೂ ನನ್ನನ್ನು ಅರ್ಥ ಮಾಡಿಕೊಂಡರು’ ಎಂದಿದ್ದಾರೆ ಸಂದೀಪ್​ ರೆಡ್ಡಿ ವಂಗಾ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ