AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ್ತ್​ಡೇ ಗರ್ಲ್​ ನುಸ್ರತ್ ಭರುಚಾ ಬಗ್ಗೆ ಇಲ್ಲಿದೆ ಅಪರೂಪದ ಮಾಹಿತಿ

Nushrratt Bharuccha Birthday: ನುಸ್ರತ್ ಭರುಚಾ ಅವರನ್ನು ಇಷ್ಟಪಡುವ ಅಭಿಮಾನಿಗಳು ಅವರ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳಲು ಬಯಸುತ್ತಾರೆ. ಅವರ ಕುಟುಂಬ, ವೈಯಕ್ತಿಕ ಜೀವನದ ಬಗ್ಗೆ ಫ್ಯಾನ್ಸ್​ಗೆ ಬಹಳ ಕಡಿಮೆ ತಿಳಿದಿದೆ. ನುಸ್ರತ್ ಭರುಚಾ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳಲು ಬಯಸಿದರೆ, ಈ ಸ್ಟೋರಿಯಲ್ಲಿ ಬಾಲಿವುಡ್ ನಟಿ ನುಸ್ರತ್ ಭರುಚಾ ಬಗ್ಗೆ ಕೆಲವು ಆಸಕ್ತಿದಾಯಕ ಸಂಗತಿಗಳನ್ನು ಹೇಳುತ್ತಿದ್ದೇವೆ.

ಬರ್ತ್​ಡೇ ಗರ್ಲ್​ ನುಸ್ರತ್ ಭರುಚಾ ಬಗ್ಗೆ ಇಲ್ಲಿದೆ ಅಪರೂಪದ ಮಾಹಿತಿ
ನುಸ್ರತ್
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: May 17, 2024 | 7:46 AM

ಬಾಲಿವುಡ್ ನಟಿ ನುಸ್ರತ್ ಭರುಚಾ (Nushrratt Bharuccha) ಅವರು ಚಿತ್ರರಂಗದಲ್ಲಿ ಅನೇಕ ಸೂಪರ್​​ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಸೋನು ಕೆ ಟಿಟು ಕಿ ಸ್ವೀಟಿ’ ಚಿತ್ರದಲ್ಲಿ ನುಸ್ರತ್ ಅಭಿನಯವು ಬಹಳವಾಗಿ ಮೆಚ್ಚುಗೆ ಪಡೆಯಿತು. ಇದಲ್ಲದೆ, ಆಯುಷ್ಮಾನ್ ಖುರಾನಾ ಅವರೊಂದಿಗೆ ನಟಿಸಿದ ‘ಡ್ರೀಮ್ ಗರ್ಲ್’ ಮತ್ತು ‘ಪ್ಯಾರ್ ಕಾ ಪಂಚ್​ನಾಮಾ’ದಂತಹ ಚಿತ್ರಗಳು ಮೆಚ್ಚುಗೆ ಪಡೆದಿದೆ. ಇದರ ಜೊತೆಗೆ ನುಸ್ರತ್ ಕೆಲವು ಮ್ಯೂಸಿಕ್ ವೀಡಿಯೊಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ. ಇಂದು (ಮೇ 17) ಅವರಿಗೆ ಜನ್ಮದಿನ. ಪ್ರೇಕ್ಷಕರ ಹೃದಯದಲ್ಲಿ ತಮ್ಮದೇ ಆದ ವಿಭಿನ್ನ ಸ್ಥಾನವನ್ನು ಪಡೆದಿರುವ ಅವರಿಗೆ ಎಲ್ಲರೂ ಬರ್ತ್​ಡೇ ಶುಭಾಶಯ ಕೋರುತ್ತಿದ್ದಾರೆ.

ನುಸ್ರತ್ ಭರುಚಾ ಅವರನ್ನು ಇಷ್ಟಪಡುವ ಅಭಿಮಾನಿಗಳು ಅವರ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳಲು ಬಯಸುತ್ತಾರೆ. ಅವರ ಕುಟುಂಬ, ವೈಯಕ್ತಿಕ ಜೀವನದ ಬಗ್ಗೆ ಫ್ಯಾನ್ಸ್​ಗೆ ಬಹಳ ಕಡಿಮೆ ತಿಳಿದಿದೆ. ನುಸ್ರತ್ ಭರುಚಾ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳಲು ಬಯಸಿದರೆ, ಈ ಸ್ಟೋರಿಯಲ್ಲಿ ಬಾಲಿವುಡ್ ನಟಿ ನುಸ್ರತ್ ಭರುಚಾ ಬಗ್ಗೆ ಕೆಲವು ಆಸಕ್ತಿದಾಯಕ ಸಂಗತಿಗಳನ್ನು ಹೇಳುತ್ತಿದ್ದೇವೆ.

2006ರಲ್ಲಿ ರಿಲೀಸ್ ಆದ ‘ಜೈ ಸಂತೋಷಿ ಮಾ’ ಸಿನಿಮಾ ಅವರ ನಟನೆಯ ಮೊದಲ ಚಿತ್ರ. 2011ರಲ್ಲಿ ಬಿಡುಗಡೆಯಾದ ‘ಪ್ಯಾರ್ ಕಾ ಪಂಚ್​​ನಾಮಾ’ ಚಿತ್ರದಲ್ಲಿ ನುಸ್ರತ್ ಭರುಚಾ ಅವರ ನಟನೆಯು ಹೆಚ್ಚು ಮೆಚ್ಚುಗೆ ಪಡೆಯಿತು. ಇದರಿಂದ ಅವರ ವೃತ್ತಿ ಬದುಕು ಬದಲಾಯಿತು. ಸಿನಿಮಾ ಜಗತ್ತಿಗೆ ಬರುವ ಮೊದಲು ನುಸ್ರತ್ ತಮ್ಮ ನಟನಾ ವೃತ್ತಿಯನ್ನು ಸಣ್ಣ ಪರದೆಯಿಂದ ಪ್ರಾರಂಭಿಸಿದರು. ಅವರು 2002ರಲ್ಲಿ Zee TVಯ ಧಾರಾವಾಹಿ ‘ಕಿಟ್ಟಿ ಪಾರ್ಟಿ’ಯಲ್ಲಿ ಕೆಲಸ ಮಾಡಿದರು. ಈ ಧಾರಾವಾಹಿಯಲ್ಲಿ ಬಾಲಿವುಡ್ ನಟಿ ಪೂನಂ ಧಿಲ್ಲೋನ್ ಕೂಡ ಇದ್ದರು. ನುಸ್ರತ್ ಒಂದು ವರ್ಷದೊಳಗೆ ಕಾರ್ಯಕ್ರಮವನ್ನು ತೊರೆದರು.

ನುಸ್ರತ್ ಅವರ ಕುಟುಂಬವು ಅವರಿಗೆ ನಟಿಸಲು ಅನುಮತಿಸರಿಲಿಲ್ಲ. ಆದರೆ ನಂತರ ಅವರು ತಮ್ಮ ಕುಟುಂಬದವರಿಗೆ ಎಲ್ಲವನ್ನೂ ಮನವರಿಕೆ ಮಾಡಿದರು. ಅವರು ಮಾಡೆಲ್ ಆದರು. ಜಾಹೀರಾತುಗಳಲ್ಲಿ ಅವರು ಕೆಲಸ ಮಾಡಿದರು. ಅವರು ಬಾಲಿವುಡ್‌ನಲ್ಲಿ ವೃತ್ತಿಜೀವನವನ್ನು ಮಾಡಲು ಪ್ರಯತ್ನಿಸುತ್ತಿರುವಾಗ , ಅವರು ಬ್ಯಾಕ್ ಡ್ಯಾನ್ಸರ್ ಮತ್ತು ರಂಗಭೂಮಿಯಲ್ಲಿ ಕೆಲಸ ಮಾಡಿದರು.

2008ರ ‘ಸ್ಲಮ್‌ಡಾಗ್ ಮಿಲಿಯನೇರ್‌’ ಚಿತ್ರದಲ್ಲಿ ನಟಿಸಲು ಆಯ್ಕೆ ಆಗಿದ್ದರು. ಆದರೆ ಕೆಲವು ಕಾರಣಗಳಿಂದ ನುಸ್ರತ್ ಈ ಚಿತ್ರದ ಭಾಗವಾಗಲು ಸಾಧ್ಯವಾಗಲಿಲ್ಲ. ಈ ಚಿತ್ರವು 10 ಆಸ್ಕರ್ ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿತು ಮತ್ತು ಅನೇಕ ಪ್ರಶಸ್ತಿಗಳನ್ನು ಸಹ ಗಳಿಸಿತು.

ಇದನ್ನೂ ಓದಿ: ಬಿಕಿನಿ ಧರಿಸಿ ಒದ್ದೆ ಮೈಯಲ್ಲಿ ಈಜುಕೊಳದಿಂದ ಎದ್ದುಬರುತ್ತಿರೋ ವಿಡಿಯೋ ಪೋಸ್ಟ್ ಮಾಡಿದ ಸಂಸದೆ ನುಸ್ರತ್ ಜಹಾನ್ ಗೆ ನೆಟ್ಟಿಗರಿಂದ ತರಾಟೆ!

ನುಸ್ರತ್ ಅನೇಕ ಸೂಪರ್‌ಹಿಟ್ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರೂ, ನುಸ್ರತ್ ಅವರ ಕನಸಿನ ಯೋಜನೆ ಯಾವುದು ಎಂದು ನಿಮಗೆ ತಿಳಿದಿದೆಯೇ? ಈ ಹಿಂದೆ ಸಂದರ್ಶನವೊಂದರಲ್ಲಿ ನುಸ್ರತ್ ತಮ್ಮ ಕನಸಿನ ಯೋಜನೆಯ ಬಗ್ಗೆ ಮಾತನಾಡಿದ್ದರು. ಮಧುಬಾಲಾ ಅವರ ಬಯೋಪಿಕ್ ಮಾಡಲು ಇಷ್ಟಪಡುತ್ತೇನೆ ಎಂದು ಹೇಳಿದ್ದರು. ಮಧುಬಾಲಾ ಅವರ ಜೀವನವು ದುರಂತ ಅಂತ್ಯ ಕಂಡಿತ್ತು. ಇದರ ಜೊತೆಗೆ ಅವರು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿ ಗಮನ ಸೆಳೆದಿದ್ದರು. ನುಸ್ರತ್ ಭರುಚಾ ಯಾವಾಗಲೂ ಮಾಂಸಾಹಾರ ಸೇವನೆ ಮಾಡುತ್ತಿದ್ದರು. ನಂತರ ಆಹಾರ ತಜ್ಞರ ಸಲಹೆಯನ್ನು ಅನುಸರಿಸಿ, ಅವರು ಸಸ್ಯಾಹಾರಿಯಾದರು. ಈಗ ಸಸ್ಯಾಹಾರವನ್ನೇ ಸೇವಿಸುತ್ತಾರೆ. ಸದ್ಯ ಅವರು ‘ಚೋರಿ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ