AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್​ನಲ್ಲೇ ತಲೆತಿರುಗಿ ಬಿದ್ದ ಬಾಲಿವುಡ್​ ನಟಿ; ಸಮಸ್ಯೆಗೆ ಕಾರಣ ಬಿಚ್ಚಿಟ್ಟ ವೈದ್ಯರು

ನುಸ್ರತ್​ ಹೋಟೆಲ್ ಒಂದರಲ್ಲಿ ತಂಗಿದ್ದರು. ಸಿನಿಮಾ ಸೆಟ್​ಗೆ ಸಮೀಪವಾಗುತ್ತದೆ ಎನ್ನುವ ಕಾರಣಕ್ಕೆ ನುಸ್ರತ್​ ಈ ಆಯ್ಕೆ ಮಾಡಿಕೊಂಡಿದ್ದರು. ಕಳೆದ ಮೂರು ವಾರಗಳಿಂದ ನುಸ್ರತ್​ ನಿರಂತರವಾಗಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ಸೆಟ್​ನಲ್ಲೇ ತಲೆತಿರುಗಿ ಬಿದ್ದ ಬಾಲಿವುಡ್​ ನಟಿ; ಸಮಸ್ಯೆಗೆ ಕಾರಣ ಬಿಚ್ಚಿಟ್ಟ ವೈದ್ಯರು
ನುಸ್ರತ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Aug 07, 2021 | 3:27 PM

Share

ಬಾಲಿವುಡ್​ ನಟಿ ನುಸ್ರತ್​ ಬರುಚಾ ಕೈಯಲ್ಲಿ ಸದ್ಯ ಮೂರು ಚಿತ್ರಗಳಿವೆ. ‘ಚೋರಿ’ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದೆ. ಸದ್ಯ ಅವರು ಲವ್​​ ರಂಜನ್​ ಮುಂದಿನ ಚಿತ್ರಕ್ಕೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾಗೆ ಇನ್ನೂ ಟೈಟಲ್​ ಫಿಕ್ಸ್​ ಆಗಿಲ್ಲ. ಈ ಚಿತ್ರದ ಶೂಟಿಂಗ್​ ವೇಳೆ ನುಸ್ರತ್​ ತಲೆ ತಿರುಗಿ ಬಿದ್ದಿದ್ದಾರೆ.  ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನುಸ್ರತ್​ ಹೋಟೆಲ್ ಒಂದರಲ್ಲಿ ತಂಗಿದ್ದರು. ಸಿನಿಮಾ ಸೆಟ್​ಗೆ ಸಮೀಪವಾಗುತ್ತದೆ ಎನ್ನುವ ಕಾರಣಕ್ಕೆ ನುಸ್ರತ್​ ಈ ಆಯ್ಕೆ ಮಾಡಿಕೊಂಡಿದ್ದರು. ಕಳೆದ ಮೂರು ವಾರಗಳಿಂದ ನುಸ್ರತ್​ ನಿರಂತರವಾಗಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಆದರೆ, ಕಳೆದ ಕೆಲ ದಿನಗಳಿಂದ ಅವರಿಗೆ ನಿಶ್ಶಕ್ತಿ ಕಾಡಿತ್ತು. ಹೀಗಾಗಿ, ಎರಡು ದಿನ ಶೂಟ್​ನಲ್ಲಿ ಭಾಗಿಯಾಗಿರಲಿಲ್ಲ ಎನ್ನಲಾಗಿದೆ.

ಎರಡು ಮೂರು ದಿನಗಳಲ್ಲಿ ಎಲ್ಲವೂ ಸರಿಯಾಗಬಹುದು ಎನ್ನುವುದು ನುಸ್ರತ್​ ಆಲೋಚನೆ ಆಗಿತ್ತು. ಹೀಗಾಗಿ ಎರಡು ದಿನ ಬಿಟ್ಟು ಅವರು ಸೆಟ್​ಗೆ ತೆರಳಿದ್ದಾರೆ. ಈ ವೇಳೆ ಅವರಿಗೆ ತಲೆ ತಿರುಗಿದೆ. ಹೀಗಾಗಿ, ಅವರನ್ನು ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಕ್ತದೊತ್ತಡ 60/65ಕ್ಕೆ ಕುಸಿದಿತ್ತು ಎನ್ನಲಾಗಿದೆ.

ವೈದ್ಯರು ನುಸ್ರತ್​ ದೇಹವನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಅಲ್ಲದೆ, 15 ದಿನ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ಅವರು ನಿರಂತರವಾಗಿ ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ಒತ್ತಡದಿಂದ ಈ ರೀತಿ ಆಗಿದೆ ಎಂದು ತಿಳಿದು ಬಂದಿದೆ.  ಸದ್ಯ, ಸಿನಿಮಾ ಶೂಟಿಂಗ್​ ನಿಲ್ಲಿಸಲಾಗಿದೆ. ಬಹುತೇಕ ದೃಶ್ಯಕ್ಕೆ ನುಸ್ರತ್​ ಅಗತ್ಯವಿದೆ. ಈ ಕಾರಣಕ್ಕೆ ಚಿತ್ರೀಕರಣ ನಿಲ್ಲಿಸದೆ ಬೇರೆ ದಾರಿ ಚಿತ್ರತಂಡಕ್ಕೆ ಇಲ್ಲದಾಗಿದೆ.

ಬಾಲಿವುಡ್​ನಲ್ಲಿ ನುಸ್ರತ್​ ಬರುಚಾ ತಮ್ಮ ನಟನೆ ಮೂಲಕ ಛಾಪು ಮೂಡಿಸಿದ್ದಾರೆ. ‘ಸೋನು ಕೆ ಟಿಟ್ಟೂ ಕಿ ಸ್ವೀಟಿ’ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡ ಅವರು ನಂತರ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡರು. ಅಕ್ಷಯ್​ ಕುಮಾರ್​ ನಟನೆಯ ರಾಮ್​ಸೇತು ಸಿನಿಮಾದಲ್ಲಿ ನುಸ್ರತ್​ ಬರೂಚಾ ನಟಿಸುತ್ತಿದ್ದಾರೆ. ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಚೋರಿ ಸಿನಿಮಾದಲ್ಲೂ ನುಸ್ರತ್​ ನಟಿಸುತ್ತಿದ್ದಾರೆ.

ಇದನ್ನೂ ಓದಿ: Bigg Boss Kannada 8 Finale: ಬಿಗ್​ ಬಾಸ್​ ಸೀಸನ್​ 8 ವಿನ್ನರ್​​ ಇವರೇನಾ? ಇಲ್ಲಿದೆ ಲೆಕ್ಕಾಚಾರ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!