AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್​ನಲ್ಲೇ ತಲೆತಿರುಗಿ ಬಿದ್ದ ಬಾಲಿವುಡ್​ ನಟಿ; ಸಮಸ್ಯೆಗೆ ಕಾರಣ ಬಿಚ್ಚಿಟ್ಟ ವೈದ್ಯರು

ನುಸ್ರತ್​ ಹೋಟೆಲ್ ಒಂದರಲ್ಲಿ ತಂಗಿದ್ದರು. ಸಿನಿಮಾ ಸೆಟ್​ಗೆ ಸಮೀಪವಾಗುತ್ತದೆ ಎನ್ನುವ ಕಾರಣಕ್ಕೆ ನುಸ್ರತ್​ ಈ ಆಯ್ಕೆ ಮಾಡಿಕೊಂಡಿದ್ದರು. ಕಳೆದ ಮೂರು ವಾರಗಳಿಂದ ನುಸ್ರತ್​ ನಿರಂತರವಾಗಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ಸೆಟ್​ನಲ್ಲೇ ತಲೆತಿರುಗಿ ಬಿದ್ದ ಬಾಲಿವುಡ್​ ನಟಿ; ಸಮಸ್ಯೆಗೆ ಕಾರಣ ಬಿಚ್ಚಿಟ್ಟ ವೈದ್ಯರು
ನುಸ್ರತ್
TV9 Web
| Edited By: |

Updated on: Aug 07, 2021 | 3:27 PM

Share

ಬಾಲಿವುಡ್​ ನಟಿ ನುಸ್ರತ್​ ಬರುಚಾ ಕೈಯಲ್ಲಿ ಸದ್ಯ ಮೂರು ಚಿತ್ರಗಳಿವೆ. ‘ಚೋರಿ’ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದೆ. ಸದ್ಯ ಅವರು ಲವ್​​ ರಂಜನ್​ ಮುಂದಿನ ಚಿತ್ರಕ್ಕೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾಗೆ ಇನ್ನೂ ಟೈಟಲ್​ ಫಿಕ್ಸ್​ ಆಗಿಲ್ಲ. ಈ ಚಿತ್ರದ ಶೂಟಿಂಗ್​ ವೇಳೆ ನುಸ್ರತ್​ ತಲೆ ತಿರುಗಿ ಬಿದ್ದಿದ್ದಾರೆ.  ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನುಸ್ರತ್​ ಹೋಟೆಲ್ ಒಂದರಲ್ಲಿ ತಂಗಿದ್ದರು. ಸಿನಿಮಾ ಸೆಟ್​ಗೆ ಸಮೀಪವಾಗುತ್ತದೆ ಎನ್ನುವ ಕಾರಣಕ್ಕೆ ನುಸ್ರತ್​ ಈ ಆಯ್ಕೆ ಮಾಡಿಕೊಂಡಿದ್ದರು. ಕಳೆದ ಮೂರು ವಾರಗಳಿಂದ ನುಸ್ರತ್​ ನಿರಂತರವಾಗಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಆದರೆ, ಕಳೆದ ಕೆಲ ದಿನಗಳಿಂದ ಅವರಿಗೆ ನಿಶ್ಶಕ್ತಿ ಕಾಡಿತ್ತು. ಹೀಗಾಗಿ, ಎರಡು ದಿನ ಶೂಟ್​ನಲ್ಲಿ ಭಾಗಿಯಾಗಿರಲಿಲ್ಲ ಎನ್ನಲಾಗಿದೆ.

ಎರಡು ಮೂರು ದಿನಗಳಲ್ಲಿ ಎಲ್ಲವೂ ಸರಿಯಾಗಬಹುದು ಎನ್ನುವುದು ನುಸ್ರತ್​ ಆಲೋಚನೆ ಆಗಿತ್ತು. ಹೀಗಾಗಿ ಎರಡು ದಿನ ಬಿಟ್ಟು ಅವರು ಸೆಟ್​ಗೆ ತೆರಳಿದ್ದಾರೆ. ಈ ವೇಳೆ ಅವರಿಗೆ ತಲೆ ತಿರುಗಿದೆ. ಹೀಗಾಗಿ, ಅವರನ್ನು ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಕ್ತದೊತ್ತಡ 60/65ಕ್ಕೆ ಕುಸಿದಿತ್ತು ಎನ್ನಲಾಗಿದೆ.

ವೈದ್ಯರು ನುಸ್ರತ್​ ದೇಹವನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಅಲ್ಲದೆ, 15 ದಿನ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ಅವರು ನಿರಂತರವಾಗಿ ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ಒತ್ತಡದಿಂದ ಈ ರೀತಿ ಆಗಿದೆ ಎಂದು ತಿಳಿದು ಬಂದಿದೆ.  ಸದ್ಯ, ಸಿನಿಮಾ ಶೂಟಿಂಗ್​ ನಿಲ್ಲಿಸಲಾಗಿದೆ. ಬಹುತೇಕ ದೃಶ್ಯಕ್ಕೆ ನುಸ್ರತ್​ ಅಗತ್ಯವಿದೆ. ಈ ಕಾರಣಕ್ಕೆ ಚಿತ್ರೀಕರಣ ನಿಲ್ಲಿಸದೆ ಬೇರೆ ದಾರಿ ಚಿತ್ರತಂಡಕ್ಕೆ ಇಲ್ಲದಾಗಿದೆ.

ಬಾಲಿವುಡ್​ನಲ್ಲಿ ನುಸ್ರತ್​ ಬರುಚಾ ತಮ್ಮ ನಟನೆ ಮೂಲಕ ಛಾಪು ಮೂಡಿಸಿದ್ದಾರೆ. ‘ಸೋನು ಕೆ ಟಿಟ್ಟೂ ಕಿ ಸ್ವೀಟಿ’ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡ ಅವರು ನಂತರ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡರು. ಅಕ್ಷಯ್​ ಕುಮಾರ್​ ನಟನೆಯ ರಾಮ್​ಸೇತು ಸಿನಿಮಾದಲ್ಲಿ ನುಸ್ರತ್​ ಬರೂಚಾ ನಟಿಸುತ್ತಿದ್ದಾರೆ. ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಚೋರಿ ಸಿನಿಮಾದಲ್ಲೂ ನುಸ್ರತ್​ ನಟಿಸುತ್ತಿದ್ದಾರೆ.

ಇದನ್ನೂ ಓದಿ: Bigg Boss Kannada 8 Finale: ಬಿಗ್​ ಬಾಸ್​ ಸೀಸನ್​ 8 ವಿನ್ನರ್​​ ಇವರೇನಾ? ಇಲ್ಲಿದೆ ಲೆಕ್ಕಾಚಾರ

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ