AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್​ನಲ್ಲೇ ತಲೆತಿರುಗಿ ಬಿದ್ದ ಬಾಲಿವುಡ್​ ನಟಿ; ಸಮಸ್ಯೆಗೆ ಕಾರಣ ಬಿಚ್ಚಿಟ್ಟ ವೈದ್ಯರು

ನುಸ್ರತ್​ ಹೋಟೆಲ್ ಒಂದರಲ್ಲಿ ತಂಗಿದ್ದರು. ಸಿನಿಮಾ ಸೆಟ್​ಗೆ ಸಮೀಪವಾಗುತ್ತದೆ ಎನ್ನುವ ಕಾರಣಕ್ಕೆ ನುಸ್ರತ್​ ಈ ಆಯ್ಕೆ ಮಾಡಿಕೊಂಡಿದ್ದರು. ಕಳೆದ ಮೂರು ವಾರಗಳಿಂದ ನುಸ್ರತ್​ ನಿರಂತರವಾಗಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ಸೆಟ್​ನಲ್ಲೇ ತಲೆತಿರುಗಿ ಬಿದ್ದ ಬಾಲಿವುಡ್​ ನಟಿ; ಸಮಸ್ಯೆಗೆ ಕಾರಣ ಬಿಚ್ಚಿಟ್ಟ ವೈದ್ಯರು
ನುಸ್ರತ್
TV9 Web
| Edited By: |

Updated on: Aug 07, 2021 | 3:27 PM

Share

ಬಾಲಿವುಡ್​ ನಟಿ ನುಸ್ರತ್​ ಬರುಚಾ ಕೈಯಲ್ಲಿ ಸದ್ಯ ಮೂರು ಚಿತ್ರಗಳಿವೆ. ‘ಚೋರಿ’ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದೆ. ಸದ್ಯ ಅವರು ಲವ್​​ ರಂಜನ್​ ಮುಂದಿನ ಚಿತ್ರಕ್ಕೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾಗೆ ಇನ್ನೂ ಟೈಟಲ್​ ಫಿಕ್ಸ್​ ಆಗಿಲ್ಲ. ಈ ಚಿತ್ರದ ಶೂಟಿಂಗ್​ ವೇಳೆ ನುಸ್ರತ್​ ತಲೆ ತಿರುಗಿ ಬಿದ್ದಿದ್ದಾರೆ.  ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನುಸ್ರತ್​ ಹೋಟೆಲ್ ಒಂದರಲ್ಲಿ ತಂಗಿದ್ದರು. ಸಿನಿಮಾ ಸೆಟ್​ಗೆ ಸಮೀಪವಾಗುತ್ತದೆ ಎನ್ನುವ ಕಾರಣಕ್ಕೆ ನುಸ್ರತ್​ ಈ ಆಯ್ಕೆ ಮಾಡಿಕೊಂಡಿದ್ದರು. ಕಳೆದ ಮೂರು ವಾರಗಳಿಂದ ನುಸ್ರತ್​ ನಿರಂತರವಾಗಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಆದರೆ, ಕಳೆದ ಕೆಲ ದಿನಗಳಿಂದ ಅವರಿಗೆ ನಿಶ್ಶಕ್ತಿ ಕಾಡಿತ್ತು. ಹೀಗಾಗಿ, ಎರಡು ದಿನ ಶೂಟ್​ನಲ್ಲಿ ಭಾಗಿಯಾಗಿರಲಿಲ್ಲ ಎನ್ನಲಾಗಿದೆ.

ಎರಡು ಮೂರು ದಿನಗಳಲ್ಲಿ ಎಲ್ಲವೂ ಸರಿಯಾಗಬಹುದು ಎನ್ನುವುದು ನುಸ್ರತ್​ ಆಲೋಚನೆ ಆಗಿತ್ತು. ಹೀಗಾಗಿ ಎರಡು ದಿನ ಬಿಟ್ಟು ಅವರು ಸೆಟ್​ಗೆ ತೆರಳಿದ್ದಾರೆ. ಈ ವೇಳೆ ಅವರಿಗೆ ತಲೆ ತಿರುಗಿದೆ. ಹೀಗಾಗಿ, ಅವರನ್ನು ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಕ್ತದೊತ್ತಡ 60/65ಕ್ಕೆ ಕುಸಿದಿತ್ತು ಎನ್ನಲಾಗಿದೆ.

ವೈದ್ಯರು ನುಸ್ರತ್​ ದೇಹವನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಅಲ್ಲದೆ, 15 ದಿನ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ಅವರು ನಿರಂತರವಾಗಿ ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ಒತ್ತಡದಿಂದ ಈ ರೀತಿ ಆಗಿದೆ ಎಂದು ತಿಳಿದು ಬಂದಿದೆ.  ಸದ್ಯ, ಸಿನಿಮಾ ಶೂಟಿಂಗ್​ ನಿಲ್ಲಿಸಲಾಗಿದೆ. ಬಹುತೇಕ ದೃಶ್ಯಕ್ಕೆ ನುಸ್ರತ್​ ಅಗತ್ಯವಿದೆ. ಈ ಕಾರಣಕ್ಕೆ ಚಿತ್ರೀಕರಣ ನಿಲ್ಲಿಸದೆ ಬೇರೆ ದಾರಿ ಚಿತ್ರತಂಡಕ್ಕೆ ಇಲ್ಲದಾಗಿದೆ.

ಬಾಲಿವುಡ್​ನಲ್ಲಿ ನುಸ್ರತ್​ ಬರುಚಾ ತಮ್ಮ ನಟನೆ ಮೂಲಕ ಛಾಪು ಮೂಡಿಸಿದ್ದಾರೆ. ‘ಸೋನು ಕೆ ಟಿಟ್ಟೂ ಕಿ ಸ್ವೀಟಿ’ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡ ಅವರು ನಂತರ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡರು. ಅಕ್ಷಯ್​ ಕುಮಾರ್​ ನಟನೆಯ ರಾಮ್​ಸೇತು ಸಿನಿಮಾದಲ್ಲಿ ನುಸ್ರತ್​ ಬರೂಚಾ ನಟಿಸುತ್ತಿದ್ದಾರೆ. ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಚೋರಿ ಸಿನಿಮಾದಲ್ಲೂ ನುಸ್ರತ್​ ನಟಿಸುತ್ತಿದ್ದಾರೆ.

ಇದನ್ನೂ ಓದಿ: Bigg Boss Kannada 8 Finale: ಬಿಗ್​ ಬಾಸ್​ ಸೀಸನ್​ 8 ವಿನ್ನರ್​​ ಇವರೇನಾ? ಇಲ್ಲಿದೆ ಲೆಕ್ಕಾಚಾರ

ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು