Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಟ್​ನಲ್ಲೇ ತಲೆತಿರುಗಿ ಬಿದ್ದ ಬಾಲಿವುಡ್​ ನಟಿ; ಸಮಸ್ಯೆಗೆ ಕಾರಣ ಬಿಚ್ಚಿಟ್ಟ ವೈದ್ಯರು

ನುಸ್ರತ್​ ಹೋಟೆಲ್ ಒಂದರಲ್ಲಿ ತಂಗಿದ್ದರು. ಸಿನಿಮಾ ಸೆಟ್​ಗೆ ಸಮೀಪವಾಗುತ್ತದೆ ಎನ್ನುವ ಕಾರಣಕ್ಕೆ ನುಸ್ರತ್​ ಈ ಆಯ್ಕೆ ಮಾಡಿಕೊಂಡಿದ್ದರು. ಕಳೆದ ಮೂರು ವಾರಗಳಿಂದ ನುಸ್ರತ್​ ನಿರಂತರವಾಗಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.

ಸೆಟ್​ನಲ್ಲೇ ತಲೆತಿರುಗಿ ಬಿದ್ದ ಬಾಲಿವುಡ್​ ನಟಿ; ಸಮಸ್ಯೆಗೆ ಕಾರಣ ಬಿಚ್ಚಿಟ್ಟ ವೈದ್ಯರು
ನುಸ್ರತ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 07, 2021 | 3:27 PM

ಬಾಲಿವುಡ್​ ನಟಿ ನುಸ್ರತ್​ ಬರುಚಾ ಕೈಯಲ್ಲಿ ಸದ್ಯ ಮೂರು ಚಿತ್ರಗಳಿವೆ. ‘ಚೋರಿ’ ಸಿನಿಮಾ ಶೂಟಿಂಗ್ ಪೂರ್ಣಗೊಂಡಿದೆ. ಸದ್ಯ ಅವರು ಲವ್​​ ರಂಜನ್​ ಮುಂದಿನ ಚಿತ್ರಕ್ಕೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾಗೆ ಇನ್ನೂ ಟೈಟಲ್​ ಫಿಕ್ಸ್​ ಆಗಿಲ್ಲ. ಈ ಚಿತ್ರದ ಶೂಟಿಂಗ್​ ವೇಳೆ ನುಸ್ರತ್​ ತಲೆ ತಿರುಗಿ ಬಿದ್ದಿದ್ದಾರೆ.  ನಂತರ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನುಸ್ರತ್​ ಹೋಟೆಲ್ ಒಂದರಲ್ಲಿ ತಂಗಿದ್ದರು. ಸಿನಿಮಾ ಸೆಟ್​ಗೆ ಸಮೀಪವಾಗುತ್ತದೆ ಎನ್ನುವ ಕಾರಣಕ್ಕೆ ನುಸ್ರತ್​ ಈ ಆಯ್ಕೆ ಮಾಡಿಕೊಂಡಿದ್ದರು. ಕಳೆದ ಮೂರು ವಾರಗಳಿಂದ ನುಸ್ರತ್​ ನಿರಂತರವಾಗಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಆದರೆ, ಕಳೆದ ಕೆಲ ದಿನಗಳಿಂದ ಅವರಿಗೆ ನಿಶ್ಶಕ್ತಿ ಕಾಡಿತ್ತು. ಹೀಗಾಗಿ, ಎರಡು ದಿನ ಶೂಟ್​ನಲ್ಲಿ ಭಾಗಿಯಾಗಿರಲಿಲ್ಲ ಎನ್ನಲಾಗಿದೆ.

ಎರಡು ಮೂರು ದಿನಗಳಲ್ಲಿ ಎಲ್ಲವೂ ಸರಿಯಾಗಬಹುದು ಎನ್ನುವುದು ನುಸ್ರತ್​ ಆಲೋಚನೆ ಆಗಿತ್ತು. ಹೀಗಾಗಿ ಎರಡು ದಿನ ಬಿಟ್ಟು ಅವರು ಸೆಟ್​ಗೆ ತೆರಳಿದ್ದಾರೆ. ಈ ವೇಳೆ ಅವರಿಗೆ ತಲೆ ತಿರುಗಿದೆ. ಹೀಗಾಗಿ, ಅವರನ್ನು ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಕ್ತದೊತ್ತಡ 60/65ಕ್ಕೆ ಕುಸಿದಿತ್ತು ಎನ್ನಲಾಗಿದೆ.

ವೈದ್ಯರು ನುಸ್ರತ್​ ದೇಹವನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಅಲ್ಲದೆ, 15 ದಿನ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಳೆದ ಹಲವು ದಿನಗಳಿಂದ ಅವರು ನಿರಂತರವಾಗಿ ಶೂಟಿಂಗ್​ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಕಾರಣಕ್ಕೆ ಒತ್ತಡದಿಂದ ಈ ರೀತಿ ಆಗಿದೆ ಎಂದು ತಿಳಿದು ಬಂದಿದೆ.  ಸದ್ಯ, ಸಿನಿಮಾ ಶೂಟಿಂಗ್​ ನಿಲ್ಲಿಸಲಾಗಿದೆ. ಬಹುತೇಕ ದೃಶ್ಯಕ್ಕೆ ನುಸ್ರತ್​ ಅಗತ್ಯವಿದೆ. ಈ ಕಾರಣಕ್ಕೆ ಚಿತ್ರೀಕರಣ ನಿಲ್ಲಿಸದೆ ಬೇರೆ ದಾರಿ ಚಿತ್ರತಂಡಕ್ಕೆ ಇಲ್ಲದಾಗಿದೆ.

ಬಾಲಿವುಡ್​ನಲ್ಲಿ ನುಸ್ರತ್​ ಬರುಚಾ ತಮ್ಮ ನಟನೆ ಮೂಲಕ ಛಾಪು ಮೂಡಿಸಿದ್ದಾರೆ. ‘ಸೋನು ಕೆ ಟಿಟ್ಟೂ ಕಿ ಸ್ವೀಟಿ’ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡ ಅವರು ನಂತರ ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡರು. ಅಕ್ಷಯ್​ ಕುಮಾರ್​ ನಟನೆಯ ರಾಮ್​ಸೇತು ಸಿನಿಮಾದಲ್ಲಿ ನುಸ್ರತ್​ ಬರೂಚಾ ನಟಿಸುತ್ತಿದ್ದಾರೆ. ಈ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಚೋರಿ ಸಿನಿಮಾದಲ್ಲೂ ನುಸ್ರತ್​ ನಟಿಸುತ್ತಿದ್ದಾರೆ.

ಇದನ್ನೂ ಓದಿ: Bigg Boss Kannada 8 Finale: ಬಿಗ್​ ಬಾಸ್​ ಸೀಸನ್​ 8 ವಿನ್ನರ್​​ ಇವರೇನಾ? ಇಲ್ಲಿದೆ ಲೆಕ್ಕಾಚಾರ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ