AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shreyas Talpade: ಬಾಲಿವುಡ್ ನಟ ಶ್ರೇಯಸ್ ತಲ್ಪಡೆಗೆ ಹೃದಯಾಘಾತ; ಈಗ ಹೇಗಿದೆ ಪರಿಸ್ಥಿತಿ?

ಶ್ರೇಯಸ್ ಅವರು ಎಂದಿನಂತೆ ಶೂಟಿಂಗ್​ಗೆ ತೆರಳಿದ್ದರು. ಅವರ ಆರೋಗ್ಯದಲ್ಲಿ ಅಂಥ ವ್ಯತ್ಯಾಸ ಏನೂ ಆಗಿರಲಿಲ್ಲ. ಸಂಜೆ ವೇಳೆಗೆ ಏಕಾಏಕಿ ಹಾರ್ಟ್ ಅಟ್ಯಾಕ್ ಆಗಿದೆ.

Shreyas Talpade: ಬಾಲಿವುಡ್ ನಟ ಶ್ರೇಯಸ್ ತಲ್ಪಡೆಗೆ ಹೃದಯಾಘಾತ; ಈಗ ಹೇಗಿದೆ ಪರಿಸ್ಥಿತಿ?
ಶ್ರೇಯಸ್
ರಾಜೇಶ್ ದುಗ್ಗುಮನೆ
|

Updated on: Dec 15, 2023 | 7:04 AM

Share

ಶಾರುಖ್ ಖಾನ್ (Shah Rukh Khan), ಅಕ್ಷಯ್ ಕುಮಾರ್ ಮೊದಲಾದ ಸ್ಟಾರ್ಸ್ ಜೊತೆ ತೆರೆ ಹಂಚಿಕೊಂಡು ಮಿಂಚಿರುವ ನಟ ಶ್ರೇಯಸ್ ತಲ್ಪಡೆ ಅವರಿಗೆ ಗುರುವಾರ (ಡಿಸೆಂಬರ್ 15) ಸಂಜೆ ಹೃದಯಾಘಾತ ಆಗಿದೆ. ‘ವೆಲ್​ಕಮ್​ ಟು ದಿ ಜಂಗಲ್’ ಸಿನಿಮಾ ಶೂಟಿಂಗ್ ಮುಗಿಸಿ ಮನೆಗೆ ಹೊರಡುವ ವೇಳೆ ಅವರಿಗೆ ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದು, ಬಳಿಕ ಹಾರ್ಟ್​ ಅಟ್ಯಾಕ್ ಆಗಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಈಗ ಸುಸ್ಥಿತಿಯಲ್ಲಿದ್ದಾರೆ ಎಂದು ಆಪ್ತ ವಲಯದವರು ಹೇಳಿದ್ದಾರೆ.

ಶ್ರೇಯಸ್ ಅವರು ಎಂದಿನಂತೆ ಶೂಟಿಂಗ್​ಗೆ ತೆರಳಿದ್ದರು. ಅವರ ಆರೋಗ್ಯದಲ್ಲಿ ಅಂಥ ವ್ಯತ್ಯಾಸ ಏನೂ ಆಗಿರಲಿಲ್ಲ. ಸಂಜೆ ವೇಳೆಗೆ ಏಕಾಏಕಿ ಹಾರ್ಟ್ ಅಟ್ಯಾಕ್ ಆಗಿದೆ. ಆ ಬಳಿಕ ಮುಂಬೈನ ಅಂಧೇರಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಲಗಳ ಪ್ರಕಾರ ಅವರು ಈಗ ಚೇತರಿಕೆ ಕಾಣುತ್ತಿದ್ದಾರಂತೆ. ಅವರ ಆರೋಗ್ಯದ ಕುರಿತು ಅಧಿಕೃತ ಅಪ್​ಡೇಟ್ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.

ಶ್ರೇಯಸ್ ತಲ್ಪಡೆ ಚಿತ್ರರಂಗಕ್ಕೆ 2002ರಲ್ಲೇ ಕಾಲಿಟ್ಟರು. ‘ಆಂಖೇ’ ಅವರು ನಟಿಸಿದ ಮೊದಲ ಸಿನಿಮಾ. ಆ ಬಳಿಕ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದರು. 2007ರಲ್ಲಿ ರಿಲೀಸ್ ಆದ ‘ಓಂ ಶಾಂತಿ ಓಂ’ ಸಿನಿಮಾದಲ್ಲಿ ಶಾರುಖ್​ನ ಗೆಳೆಯನಾಗಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದರು. ‘ಗೋಲ್​ಮಾಲ್​ ರಿಟರ್ನ್ಸ್​’, ಗೋಲ್​ಮಾಲ್​ 3’, ‘ಹೌಸ್​ಫುಲ್ 2’ ಅಂಥ ಹಾಸ್ಯ ಪ್ರಧಾನ ಸಿನಿಮಾಗಳಲ್ಲಿ ನಟಿಸಿ ಅವರು ಗಮನ ಸೆಳೆದಿದ್ದಾರೆ.

ಇದನ್ನೂ ಓದಿ: ಹೆಚ್ಚುತ್ತಲೇ ಇದೆ ಬಿಗ್ ಬಾಸ್ ಟಿಆರ್​ಪಿ; ಸಂಕಷ್ಟದಲ್ಲಿ ‘ಸೀತಾ ರಾಮ’ ಧಾರಾವಾಹಿ

2022ರಲ್ಲಿ ಅವರ ನಟನೆಯ ‘ಕೌನ್​ ಪ್ರವೀಣ್ ತಂಬೆ’ ಸಿನಿಮಾ ರಿಲೀಸ್ ಆಯಿತು. ಆದರೆ, ಈ ಚಿತ್ರ ಯಶಸ್ಸು ಕಾಣಲಿಲ್ಲ. ಅವರು ಮರಾಠಿ ಧಾರಾವಾಹಿಗಳಲ್ಲೂ ನಟಿಸಿ ಫೇಮಸ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು