AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Samrat Prithviraj: ಅಕ್ಷಯ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’ಗೆ ಹಿನ್ನಡೆ; ಈ ದೇಶಗಳಲ್ಲಿ ಚಿತ್ರ ಬ್ಯಾನ್​

Akshay Kumar | Manushi Chillar: ಜೂನ್ 3ರಂದು ವಿಶ್ವಾದ್ಯಂತ ಅಕ್ಷಯ್ ಕುಮಾರ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾ ರಿಲೀಸ್ ಆಗಲಿದ್ದು, ಬಾಕ್ಸಾಫೀಸ್​ನಲ್ಲಿ ದಾಖಲೆ ಬರೆಯಬಹುದು ಎಂಬ ನಿರೀಕ್ಷೆ ಇದೆ. ಆದರೆ ರಿಲೀಸ್​ಗೆ ಒಂದು ದಿನವಿರುವಾಗ ಚಿತ್ರತಂಡಕ್ಕೆ ಹಿನ್ನಡೆಯಾಗಿದೆ.

Samrat Prithviraj: ಅಕ್ಷಯ್ ನಟನೆಯ ‘ಸಾಮ್ರಾಟ್ ಪೃಥ್ವಿರಾಜ್’ಗೆ ಹಿನ್ನಡೆ; ಈ ದೇಶಗಳಲ್ಲಿ ಚಿತ್ರ ಬ್ಯಾನ್​
‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರದ ಪೋಸ್ಟರ್
TV9 Web
| Edited By: |

Updated on:Jun 01, 2022 | 7:20 PM

Share

ಅಕ್ಷಯ್ ಕುಮಾರ್ (Akshay Kumar) ನಟನೆಯ ಬಹುನಿರೀಕ್ಷಿತ ಚಿತ್ರ ‘ಸಾಮ್ರಾಟ್ ಪೃಥ್ವಿರಾಜ್’ (Samrat Prithviraj) ತೆರೆಗೆ ಬರಲು ಸಿದ್ಧವಾಗಿದೆ. ಜೂನ್ 3ರಂದು ವಿಶ್ವಾದ್ಯಂತ ಈ ಸಿನಿಮಾ ರಿಲೀಸ್ ಆಗಲಿದ್ದು, ಬಾಕ್ಸಾಫೀಸ್​ನಲ್ಲಿ ದಾಖಲೆ ಬರೆಯಬಹುದು ಎಂಬ ನಿರೀಕ್ಷೆ ಇದೆ. ಆದರೆ ರಿಲೀಸ್​ಗೆ ಒಂದು ದಿನವಿರುವಾಗ ಚಿತ್ರತಂಡಕ್ಕೆ ಹಿನ್ನಡೆಯಾಗಿದೆ. ವರದಿಗಳ ಪ್ರಕಾರ ಓಮನ್​ ಮತ್ತು ಕುವೈತ್​ನಲ್ಲಿ ‘ಸಾಮ್ರಾಟ್ ಪೃಥ್ವಿರಾಜ್‘ ಚಿತ್ರದ ಪ್ರದರ್ಶನಕ್ಕೆ ಅವಕಾಶ ನೀಡಲಾಗಿಲ್ಲ. ಆ ದೇಶಗಳು ಈ ಚಿತ್ರವನ್ನು ಬ್ಯಾನ್ ಮಾಡಿವೆ. ಐತಿಹಾಸಿಕ ಕಥಾನಕ ಹೊಂದಿರುವ ಚಿತ್ರವನ್ನು ಬ್ಯಾನ್ ಮಾಡಿದ್ದೇಕೆ ಎಂಬುದರ ಬಗ್ಗೆ ಇನ್ನೂ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ. ಆದರೆ ಬಲ್ಲಮೂಲಗಳನ್ನು ಉಲ್ಲೇಖಿಸಿ ‘ಬಾಲಿವುಡ್​ ಹಂಗಾಮಾ’ ಓಮನ್ ಮತ್ತು ಕುವೈತ್​ನಲ್ಲಿ ಅಕ್ಷಯ್ ನಟನೆಯ ಚಿತ್ರ ಬ್ಯಾನ್ ಆಗಿರುವುದರ ಬಗ್ಗೆ ವರದಿ ಮಾಡಿದೆ. ಈ ಬಗ್ಗೆ ಚಿತ್ರತಂಡದಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಬರಬೇಕಿದೆ.

ಪೃಥ್ವಿರಾಜ್ ಚೌಹಾಣ್ ಕಥಾನಕವನ್ನು ಆಧರಿಸಿ ತಯಾರಾಗಿರುವ ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರದಲ್ಲಿ ಅಕ್ಷಯ್ ಕುಮಾರ್ ಅವರೊಂದಿಗೆ ವಿಶ್ವ ಸುಂದರಿ ಮಾನುಷಿ  ಚಿಲ್ಲರ್ ಬಣ್ಣಹಚ್ಚುತ್ತಿದ್ದಾರೆ. ಇದು ಅವರ ಚೊಚ್ಚಲ ಚಿತ್ರವಾಗಿದೆ. ಸಂಜಯ್ ದತ್, ಸೋನು ಸೂದ್ ಮೊದಲಾದ ತಾರೆಯರು ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಪ್ರಕಾಶ್ ದ್ವಿವೇದಿ ನಿರ್ದೇಶಿಸುತ್ತಿರುವ ಈ ಚಿತ್ರ ಹಿಂದಿ, ತಮಿಳು ಹಾಗೂ ತೆಲುಗಿನಲ್ಲಿ ರಿಲೀಸ್ ಆಗುತ್ತಿದೆ.

ಇದನ್ನೂ ಓದಿ: ‘ಪೃಥ್ವಿರಾಜ್​’ ಸಿನಿಮಾ ಪ್ರಚಾರ ಕೆಲಸಗಳಲ್ಲಿ ಬ್ಯುಸಿ ಆದ ನಟಿ ಮಾನುಷಿ ಚಿಲ್ಲರ್​; ಇಲ್ಲಿವೆ ಫೋಟೋಗಳು  

ಇದನ್ನೂ ಓದಿ
Image
KK’s funeral: ಜೂನ್ 2ರಂದು ಮುಂಬೈನಲ್ಲಿ ಗಾಯಕ ಕೆಕೆ ಅಂತ್ಯಕ್ರಿಯೆ
Image
Hansika Motwani: ಹೊಸ ಫೋಟೋಶೂಟ್​ನಲ್ಲಿ ಮಿಂಚಿದ ಹನ್ಸಿಕಾ; ‘ಬಿಂದಾಸ್’ ಬೆಡಗಿಯ ಫೋಟೋಗಳು ವೈರಲ್​
Image
‘ರಾಷ್ಟ್ರಭಾಷೆ ಕುರಿತ ಚರ್ಚೆ ಪ್ರಧಾನಿ ಮಾತಿನೊಂದಿಗೆ ಮುಕ್ತಾಯವಾಗಿರುವುದು ಸಂತಸ ತಂದಿದೆ’: ಸುದೀಪ್​
Image
Suriya in Vikram: ಹೊಸ ಟ್ವಿಸ್ಟ್​​ ನೀಡಿದ ‘ವಿಕ್ರಮ್’ ಚಿತ್ರತಂಡ; ಕಮಲ್, ವಿಜಯ್ ಸೇತುಪತಿ​, ಫಹಾದ್​ ಜತೆ ಕಾಣಿಸಿಕೊಳ್ಳಲಿದ್ದಾರೆ ಈ ಸ್ಟಾರ್ ನಟ 

ದೊಡ್ಡ ಬಜೆಟ್​ನಲ್ಲಿ ತಯಾರಾಗಿರುವ ಈ ಚಿತ್ರವು 18 ವರ್ಷಗಳ ಕಾಲ ಸಂಶೋಧನೆ ನಡೆಸಿ ಸಿದ್ಧಪಡಿಸಿದ ಕತೆಯನ್ನು ಆಧರಿಸಿದೆ. ಈ ಮೊದಲು ಚಿತ್ರಕ್ಕೆ ‘ಪೃಥ್ವಿರಾಜ್’ ಎಂಬ ಶೀರ್ಷಿಕೆ ಇಡಲಾಗಿತ್ತು. ಕರಣಿ ಸೇನ ಸಂಘಟನೆಯು ಹೆಸರನ್ನು ಬದಲಾಯಿಸುವಂತೆ ಕೋರಿಕೊಂಡಿತ್ತು. ಹೀಗಾಗಿ ಮೇ 27ರಂದು ‘ಸಾಮ್ರಾಟ್ ಪೃಥ್ವಿರಾಜ್’ ಎಂದು ಚಿತ್ರದ ಶೀರ್ಷಿಕೆಯನ್ನು ಬದಲಾಯಿಸಲಾಗಿತ್ತು.

ಇದನ್ನೂ ಓದಿ: ಅಕ್ಷಯ್ ಕುಮಾರ್ ಅಭಿನಯದ ‘ಪೃಥ್ವಿರಾಜ್’ ಚಿತ್ರವನ್ನು ವೀಕ್ಷಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ

ಅದ್ದೂರಿ ಬಜೆಟ್​ನಲ್ಲಿ ‘ಪೃಥ್ವಿರಾಜ್​’ ಚಿತ್ರ ಮೂಡಿಬಂದಿದೆ. ಯುದ್ಧದ ಸನ್ನಿವೇಶಗಳಿಗಾಗಿ ಅತ್ಯಾಧುನಿಕ ಗ್ರಾಫಿಕ್ಸ್​ ತಂತ್ರಜ್ಞಾನ ಬಳಕೆ ಮಾಡಿಕೊಳ್ಳಲಾಗಿದೆ. ಯಶ್​ ರಾಜ್ ಫಿಲ್ಮ್ಸ್​​ ಬಂಡವಾಳ ಹೂಡುತ್ತಿರುವ ಈ ಚಿತ್ರವನ್ನು ಸುಮಾರು 300 ಕೋಟಿ ರೂ ವೆಚ್ಚದಲ್ಲಿ ತಯಾರಿಸಲಾಗಿದೆ ಎಂದು ವರದಿಗಳು ಹೇಳಿವೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 pm, Wed, 1 June 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್