AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೆನ್ಸಾರ್ ಮಂಡಳಿ ನಮ್ಮ ಚಿತ್ರವನ್ನು ಕೊಂದಿದೆ’; ಖ್ಯಾತ ನಿರ್ದೇಶಕನ ಗಂಭೀರ ಆರೋಪ

‘ಒಎಂಜಿ 2’ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ಸಿಕ್ಕಿದ್ದರಿಂದ 18 ವರ್ಷ ಕೆಳಗಿನವರಿಗೆ ಸಿನಿಮಾ ನೋಡೋಕೆ ಸಾಧ್ಯವಾಗಿಲ್ಲ. ಮೂಲ ಉದ್ದೇಶ ನಾಶ ಆಗುವುದರ ಜೊತೆ ಚಿತ್ರದ ಗಳಿಕೆಯೂ ತಗ್ಗಿತು. ಈ ಬಗ್ಗೆ ಅಮಿತ್ ಮಾತನಾಡಿದ್ದಾರೆ.

‘ಸೆನ್ಸಾರ್ ಮಂಡಳಿ ನಮ್ಮ ಚಿತ್ರವನ್ನು ಕೊಂದಿದೆ’; ಖ್ಯಾತ ನಿರ್ದೇಶಕನ ಗಂಭೀರ ಆರೋಪ
ಅಕ್ಷಯ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on:Jan 10, 2024 | 1:55 PM

Share

ಸನ್ನಿ ಡಿಯೋಲ್ ನಟನೆಯ ‘ಗದರ್ 2’ (Gadar 2 Movie) ಹಾಗೂ ಅಕ್ಷಯ್​ ಕುಮಾರ್, ಪಂಕಜ್ ತ್ರಿಪಾಠಿ ನಟನೆಯ ‘ಒಎಂಜಿ 2’ ಸಿನಿಮಾ ಕಳೆದ ವರ್ಷ ಒಟ್ಟಿಗೆ ರಿಲೀಸ್ ಆದವು. ‘ಗದರ್ 2’ ಚಿತ್ರ ಭಾರತದಲ್ಲಿ 500+ ಕೋಟಿ ರೂಪಾಯಿ ಗಳಿಕೆ ಮಾಡಿತು. ‘ಒಎಂಜಿ 2’ ಕಲೆಕ್ಷನ್ 100 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ. ಈ ಚಿತ್ರ ಕಡಿಮೆ ಗಳಿಕೆ ಮಾಡಲು ಸೆನ್ಸಾರ್ ಮಂಡಳಿ ಮಾಡಿರುವ ತಪ್ಪು ಕಾರಣ ಎಂದು ನಿರ್ದೇಶಕ ಅಮಿತ್ ರಾಯ್ ಅಭಿಪ್ರಾಯಪಟ್ಟಿದ್ದಾರೆ.

‘ಒಎಂಜಿ 2’ ಸಿನಿಮಾದಲ್ಲಿ ಲೈಂಗಿಕ ಶಿಕ್ಷಣದ ಬಗ್ಗೆ ಮಾಹಿತಿ ನೀಡಲಾಗಿದೆ. ಭಾರತದಲ್ಲಿರುವ ಮಕ್ಕಳಿಗೆ ಈ ಬಗ್ಗೆ ಅರಿವು ಕಡಿಮೆ. ಈ ವಿಚಾರದಲ್ಲಿ ಅನೇಕರು ಓಪನ್ ಆಗಿಲ್ಲ. ಈ ಬಗ್ಗೆ ಶಿಕ್ಷಣ ಸಿಗಲಿ ಎನ್ನುವ ಉದ್ದೇಶವನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿತ್ತು. ಆದರೆ, ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ಸಿಕ್ಕಿದ್ದರಿಂದ 18 ವರ್ಷ ಕೆಳಗಿನವರಿಗೆ ಸಿನಿಮಾ ನೋಡೋಕೆ ಸಾಧ್ಯವಾಗಿಲ್ಲ. ಮೂಲ ಉದ್ದೇಶ ನಾಶ ಆಗುವುದರ ಜೊತೆ ಚಿತ್ರದ ಗಳಿಕೆಯೂ ತಗ್ಗಿತು. ಈ ಬಗ್ಗೆ ಅಮಿತ್ ಮಾತನಾಡಿದ್ದಾರೆ.

‘ಒಂದೊಮ್ಮೆ ನಮ್ಮ ಚಿತ್ರಕ್ಕೆ ಎ ಸರ್ಟಿಫಿಕೇಟ್ ಸಿಗದೇ ಇದ್ದರೆ ನಾವು ‘ಗದರ್​ 2’ ಚಿತ್ರಕ್ಕೆ ಸರಿಸಮನಾಗಿ ಫೈಟ್ ಕೊಡುತ್ತಿದ್ದೆವು. ಎ ಪ್ರಮಾಣ ಪತ್ರವನ್ನು ನೀಡದೇ ಇದ್ದಿದ್ದರೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ನಮ್ಮ ಸಿನಿಮಾ ನೋಡಲು ಬರುತ್ತಿದ್ದರು’ ಎಂದಿದ್ದಾರೆ ಅಮಿತ್ ರಾಯ್. ‘ಗದರ್ 2’ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 686 ಕೋಟಿ ರೂಪಾಯಿ ಹಾಗೂ  ‘ಒಎಂಜಿ 2’ ವಿಶ್ವ ಮಟ್ಟದಲ್ಲಿ 221.75 ಕೋಟಿ ರೂಪಾಯಿ ಬಾಚಿಕೊಂಡಿದೆ.

ಇದನ್ನೂ ಓದಿ: 99ನೇ ವಯಸ್ಸಿಗೆ ಪಂಕಜ್​ ತ್ರಿಪಾಠಿ ತಂದೆ ನಿಧನ; ‘ಒಎಂಜಿ 2’ ಗೆಲುವಿನ ನಡುವೆ ಆವರಿಸಿತು ಶೋಕ

‘ಎ ಪ್ರಮಾಣಪತ್ರ ನೀಡಿ ನನ್ನ ಸಿನಿಮಾನ ಕೊಲ್ಲಲಾಗಿದೆ. ಸೆನ್ಸಾರ್ ಮಂಡಳಿ ಆರ್ಥಿಕವಾಗಿ ಹಾಗೂ ಸಿನಿಮಾದ ವಿಷಯವಾಗಿ ನನಗೆ ನೋವುಂಟು ಮಾಡಿದೆ’ ಎಂದಿದ್ದಾರೆ ಅಮಿತ್. ಈ ಚಿತ್ರವು 27 ಚೇಂಜ್​ಗಳನ್ನು ಮಾಡಿಸಿತ್ತು. ಕೆಲವು ಕಡೆ ಕತ್ತರಿ ಹಾಕಲು ಸೂಚಿಸಿತ್ತು. ಲೈಂಗಿಕ ಶಿಕ್ಷಣ ಹಾಗೂ ಇತರ ವಿಚಾರಗಳನ್ನು ಸಿನಿಮಾದಲ್ಲಿ ಹೇಳಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:10 am, Wed, 10 January 24

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್