AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೆನ್ಸಾರ್ ಮಂಡಳಿ ನಮ್ಮ ಚಿತ್ರವನ್ನು ಕೊಂದಿದೆ’; ಖ್ಯಾತ ನಿರ್ದೇಶಕನ ಗಂಭೀರ ಆರೋಪ

‘ಒಎಂಜಿ 2’ ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ಸಿಕ್ಕಿದ್ದರಿಂದ 18 ವರ್ಷ ಕೆಳಗಿನವರಿಗೆ ಸಿನಿಮಾ ನೋಡೋಕೆ ಸಾಧ್ಯವಾಗಿಲ್ಲ. ಮೂಲ ಉದ್ದೇಶ ನಾಶ ಆಗುವುದರ ಜೊತೆ ಚಿತ್ರದ ಗಳಿಕೆಯೂ ತಗ್ಗಿತು. ಈ ಬಗ್ಗೆ ಅಮಿತ್ ಮಾತನಾಡಿದ್ದಾರೆ.

‘ಸೆನ್ಸಾರ್ ಮಂಡಳಿ ನಮ್ಮ ಚಿತ್ರವನ್ನು ಕೊಂದಿದೆ’; ಖ್ಯಾತ ನಿರ್ದೇಶಕನ ಗಂಭೀರ ಆರೋಪ
ಅಕ್ಷಯ್ ಕುಮಾರ್
ರಾಜೇಶ್ ದುಗ್ಗುಮನೆ
|

Updated on:Jan 10, 2024 | 1:55 PM

Share

ಸನ್ನಿ ಡಿಯೋಲ್ ನಟನೆಯ ‘ಗದರ್ 2’ (Gadar 2 Movie) ಹಾಗೂ ಅಕ್ಷಯ್​ ಕುಮಾರ್, ಪಂಕಜ್ ತ್ರಿಪಾಠಿ ನಟನೆಯ ‘ಒಎಂಜಿ 2’ ಸಿನಿಮಾ ಕಳೆದ ವರ್ಷ ಒಟ್ಟಿಗೆ ರಿಲೀಸ್ ಆದವು. ‘ಗದರ್ 2’ ಚಿತ್ರ ಭಾರತದಲ್ಲಿ 500+ ಕೋಟಿ ರೂಪಾಯಿ ಗಳಿಕೆ ಮಾಡಿತು. ‘ಒಎಂಜಿ 2’ ಕಲೆಕ್ಷನ್ 100 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ. ಈ ಚಿತ್ರ ಕಡಿಮೆ ಗಳಿಕೆ ಮಾಡಲು ಸೆನ್ಸಾರ್ ಮಂಡಳಿ ಮಾಡಿರುವ ತಪ್ಪು ಕಾರಣ ಎಂದು ನಿರ್ದೇಶಕ ಅಮಿತ್ ರಾಯ್ ಅಭಿಪ್ರಾಯಪಟ್ಟಿದ್ದಾರೆ.

‘ಒಎಂಜಿ 2’ ಸಿನಿಮಾದಲ್ಲಿ ಲೈಂಗಿಕ ಶಿಕ್ಷಣದ ಬಗ್ಗೆ ಮಾಹಿತಿ ನೀಡಲಾಗಿದೆ. ಭಾರತದಲ್ಲಿರುವ ಮಕ್ಕಳಿಗೆ ಈ ಬಗ್ಗೆ ಅರಿವು ಕಡಿಮೆ. ಈ ವಿಚಾರದಲ್ಲಿ ಅನೇಕರು ಓಪನ್ ಆಗಿಲ್ಲ. ಈ ಬಗ್ಗೆ ಶಿಕ್ಷಣ ಸಿಗಲಿ ಎನ್ನುವ ಉದ್ದೇಶವನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗಿತ್ತು. ಆದರೆ, ಚಿತ್ರಕ್ಕೆ ‘ಎ’ ಸರ್ಟಿಫಿಕೇಟ್ ಸಿಕ್ಕಿದ್ದರಿಂದ 18 ವರ್ಷ ಕೆಳಗಿನವರಿಗೆ ಸಿನಿಮಾ ನೋಡೋಕೆ ಸಾಧ್ಯವಾಗಿಲ್ಲ. ಮೂಲ ಉದ್ದೇಶ ನಾಶ ಆಗುವುದರ ಜೊತೆ ಚಿತ್ರದ ಗಳಿಕೆಯೂ ತಗ್ಗಿತು. ಈ ಬಗ್ಗೆ ಅಮಿತ್ ಮಾತನಾಡಿದ್ದಾರೆ.

‘ಒಂದೊಮ್ಮೆ ನಮ್ಮ ಚಿತ್ರಕ್ಕೆ ಎ ಸರ್ಟಿಫಿಕೇಟ್ ಸಿಗದೇ ಇದ್ದರೆ ನಾವು ‘ಗದರ್​ 2’ ಚಿತ್ರಕ್ಕೆ ಸರಿಸಮನಾಗಿ ಫೈಟ್ ಕೊಡುತ್ತಿದ್ದೆವು. ಎ ಪ್ರಮಾಣ ಪತ್ರವನ್ನು ನೀಡದೇ ಇದ್ದಿದ್ದರೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ನಮ್ಮ ಸಿನಿಮಾ ನೋಡಲು ಬರುತ್ತಿದ್ದರು’ ಎಂದಿದ್ದಾರೆ ಅಮಿತ್ ರಾಯ್. ‘ಗದರ್ 2’ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 686 ಕೋಟಿ ರೂಪಾಯಿ ಹಾಗೂ  ‘ಒಎಂಜಿ 2’ ವಿಶ್ವ ಮಟ್ಟದಲ್ಲಿ 221.75 ಕೋಟಿ ರೂಪಾಯಿ ಬಾಚಿಕೊಂಡಿದೆ.

ಇದನ್ನೂ ಓದಿ: 99ನೇ ವಯಸ್ಸಿಗೆ ಪಂಕಜ್​ ತ್ರಿಪಾಠಿ ತಂದೆ ನಿಧನ; ‘ಒಎಂಜಿ 2’ ಗೆಲುವಿನ ನಡುವೆ ಆವರಿಸಿತು ಶೋಕ

‘ಎ ಪ್ರಮಾಣಪತ್ರ ನೀಡಿ ನನ್ನ ಸಿನಿಮಾನ ಕೊಲ್ಲಲಾಗಿದೆ. ಸೆನ್ಸಾರ್ ಮಂಡಳಿ ಆರ್ಥಿಕವಾಗಿ ಹಾಗೂ ಸಿನಿಮಾದ ವಿಷಯವಾಗಿ ನನಗೆ ನೋವುಂಟು ಮಾಡಿದೆ’ ಎಂದಿದ್ದಾರೆ ಅಮಿತ್. ಈ ಚಿತ್ರವು 27 ಚೇಂಜ್​ಗಳನ್ನು ಮಾಡಿಸಿತ್ತು. ಕೆಲವು ಕಡೆ ಕತ್ತರಿ ಹಾಕಲು ಸೂಚಿಸಿತ್ತು. ಲೈಂಗಿಕ ಶಿಕ್ಷಣ ಹಾಗೂ ಇತರ ವಿಚಾರಗಳನ್ನು ಸಿನಿಮಾದಲ್ಲಿ ಹೇಳಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:10 am, Wed, 10 January 24

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ