ಅಕ್ಷಯ್​ ಕುಮಾರ್​ಗಿಂತ ಪಂಕಜ್​ ತ್ರಿಪಾಠಿಗೆ ಹೆಚ್ಚು ಸಂಭಾವನೆ; ‘ಒಎಂಜಿ 2’ ಚಿತ್ರದ ಒಟ್ಟು ಬಜೆಟ್​ ಎಷ್ಟು?

ಪ್ರತಿ ಸಿನಿಮಾಗೆ ಅಕ್ಷಯ್​ ಕುಮಾರ್​ ಅವರು 50ರಿಂದ 100 ಕೋಟಿ ರೂಪಾಯಿ ತನಕ ಸಂಭಾವನೆ ಪಡೆಯುತ್ತಾರೆ. ಆದರೆ ‘ಒಎಂಜಿ 2’ ಸಿನಿಮಾದಲ್ಲಿ ಅವರು ಹಾಗೆ ಮಾಡಿಲ್ಲ. ಅವರ ಈ ನಿರ್ಧಾರದಿಂದ ಸಿನಿಮಾದ ಬಜೆಟ್​ ಕಡಿಮೆ ಆಗಿದೆ. ಸದ್ಯ ಈ ಚಿತ್ರ 90 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿ ಮುನ್ನುಗ್ಗತ್ತಿದೆ.

ಅಕ್ಷಯ್​ ಕುಮಾರ್​ಗಿಂತ ಪಂಕಜ್​ ತ್ರಿಪಾಠಿಗೆ ಹೆಚ್ಚು ಸಂಭಾವನೆ; ‘ಒಎಂಜಿ 2’ ಚಿತ್ರದ ಒಟ್ಟು ಬಜೆಟ್​ ಎಷ್ಟು?
ಪಂಕಜ್​​ ತ್ರಿಪಾಠಿ, ಅಕ್ಷಯ್​ ಕುಮಾರ್​, ಯಾಮಿ ಗೌತಮ್​
Follow us
|

Updated on: Aug 20, 2023 | 9:15 AM

ನಟ ಅಕ್ಷಯ್​ ಕುಮಾರ್​ (Akshay Kumar) ಅವರು ಇತ್ತೀಚಿನ ವರ್ಷಗಳಲ್ಲಿ ನಿರೀಕ್ಷಿತ ಮಟ್ಟದ ಗೆಲುವು ಕಾಣುತ್ತಿಲ್ಲ. ಯಾವ ರೀತಿಯ ಸಿನಿಮಾ ಮಾಡಿದರೂ ಅವರಿಗೆ ಯಶಸ್ಸು ದಕ್ಕುತ್ತಿಲ್ಲ. ಪರಿಸ್ಥಿತಿ ಹೀಗಿರುವಾಗ ‘ಒಎಂಜಿ 2’ ಸಿನಿಮಾ ಬಿಡುಗಡೆಯಾಗಿ ಸಾಧಾರಣ ಗಳಿಕೆ ಮಾಡಿದೆ. ಈ ಸಿನಿಮಾದ ಕಲೆಕ್ಷನ್​ (OMG 2 Box Office Collection) ಈಗ 100 ಕೋಟಿ ರೂಪಾಯಿ ಗಡಿ ಮುಟ್ಟುವ ಹಂತದಲ್ಲಿದೆ. ಮೇಲ್ನೋಟಕ್ಕೆ ಇದು ದೊಡ್ಡ ಮೊತ್ತ ಎನಿಸಿದರೂ ಅಕ್ಷಯ್​ ಕುಮಾರ್​ ಅವರಂತಹ ಸ್ಟಾರ್​ ನಟರ ಸಿನಿಮಾಗೆ ಇದು ಸಾಧಾರಣ ಕಲೆಕ್ಷನ್​ ಅಷ್ಟೇ. ಯಾಕೆಂದರೆ ಇಂಥ ಸಿನಿಮಾಗಳ ಬಜೆಟ್​ ಕೂಡ ದೊಡ್ಡದಾಗಿ ಇರುತ್ತದೆ. ಹಾಗಾದರೆ, ‘ಒಎಂಜಿ 2’ ಸಿನಿಮಾದ ಬಜೆಟ್​ ಎಷ್ಟು? ಅಕ್ಷಯ್​ ಕುಮಾರ್​, ಪಂಕಜ್​ ತ್ರಿಪಾಠಿ (Pankaj Tripathi) ಮುಂತಾದ ಕಲಾವಿದರಿಗೆ ಸಿಕ್ಕ ಸಂಭಾವನೆ ಎಷ್ಟು? ಇಲ್ಲಿದೆ ಪೂರ್ತಿ ಮಾಹಿತಿ..

2012ರಲ್ಲಿ ‘ಒಎಂಜಿ’ ಸಿನಿಮಾ ಬಿಡುಗಡೆಯಾಗಿ ಯಶಸ್ಸು ಗಳಿಸಿತ್ತು. ಅದರ ಸೀಕ್ವೆಲ್​ ಆಗಿ ‘ಒಎಂಜಿ 2’ ಸಿನಿಮಾ ಮೂಡಿಬಂದಿದೆ. ಈ ಚಿತ್ರದಲ್ಲಿ ಅಕ್ಷಯ್​ ಕುಮಾರ್​, ಪಂಕಜ್​ ತ್ರಿಪಾಠಿ, ಯಾಮಿ ಗೌತಮ್​ ಮುಂತಾದ ಸ್ಟಾರ್​ ಕಲಾವಿದರ ನಟಿಸಿದ್ದಾರೆ. ಈ ಸಿನಿಮಾದ ಒಟ್ಟು ಬಜೆಟ್​ 65 ಕೋಟಿ ರೂಪಾಯಿ. ಅದ್ದೂರಿತನಕ್ಕೆ ಹೆಚ್ಚು ಮಹತ್ವ ನೀಡದೇ ಕಂಟೆಂಟ್​ ಮೇಲೆ ನಿರ್ದೇಶಕ ಅಮಿತ್​ ರೈ ಒತ್ತು ನೀಡಿದ್ದಾರೆ. ಸಾಧ್ಯವಾದಷ್ಟು ಕಡಿಮೆ ಬಜೆಟ್​ನಲ್ಲಿ ಸಿನಿಮಾ ಮುಗಿಸಲು ಅವರು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: ಜಾಮಾ ಮಸೀದಿ ಬಳಿ ಕಾಣಿಸಿಕೊಂಡ ಅಕ್ಷಯ್​ ಕುಮಾರ್​; ಸುತ್ತುವರಿದ ಅಭಿಮಾನಿಗಳು

‘ಒಎಂಜಿ 2’ ಸಿನಿಮಾದ ಬಜೆಟ್​ ಕಡಿಮೆ ಆಗಲು ಮುಖ್ಯ ಕಾರಣವೇ ಅಕ್ಷಯ್​ ಕುಮಾರ್​ ಅವರ ನಿರ್ಧಾರ. ಬೇರೆ ಸಿನಿಮಾಗಳಿಗೆ ಅವರು 50ರಿಂದ 100 ಕೋಟಿ ರೂಪಾಯಿ ತನಕವೂ ಸಂಭಾವನೆ ಪಡೆಯುತ್ತಾರೆ. ಆದರೆ ‘ಒಎಂಜಿ 2’ ಸಿನಿಮಾದಲ್ಲಿ ಅವರು ಹಾಗೆ ಮಾಡಿಲ್ಲ. ಈ ಸಿನಿಮಾದಲ್ಲಿ ತಮ್ಮದು ಮುಖ್ಯ ಪಾತ್ರ ಅಲ್ಲ ಎಂಬ ಕಾರಣಕ್ಕಾಗಿ ಅವರು ಉಚಿತವಾಗಿ ನಟಿಸಿದ್ದಾರೆ. ಚಿತ್ರತಂಡಕ್ಕೆ ಸಹಾಯ ಆಗಲಿ ಎಂಬ ಉದ್ದೇಶದಿಂದ ಅವರು ಒಂದು ರೂಪಾಯಿ ಕೂಡ ಸಂಭಾವನೆ ಪಡೆದಿಲ್ಲ. ಹಾಗಾಗಿ ಸಿನಿಮಾದ ಬಜೆಟ್​ ಬಹಳಷ್ಟು ಕಡಿಮೆ ಆಗಿದೆ.

ಇದನ್ನೂ ಓದಿ: 30 ಸಾವಿರ ರೂಪಾಯಿ ಬೆಲೆಯ ಬ್ಯಾಗ್​ ಧರಿಸಿದ್ದೇ ತಪ್ಪಾಯ್ತಾ? ಹಿಗ್ಗಾಮುಗ್ಗಾ ಟ್ರೋಲ್​ ಆದ ಅಕ್ಷಯ್​ ಕುಮಾರ್​

ನಟ ಪಂಕಜ್​ ತ್ರಿಪಾಠಿ ಅವರಿಗೆ ಬಹಳ ಬೇಡಿಕೆ ಇದೆ. ಪೋಷಕ ಪಾತ್ರಗಳ ಮೂಲಕ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಸಾಮಾನ್ಯವಾಗಿ ಅವರು ಪ್ರತಿ ಸಿನಿಮಾಗೆ 2ರಿಂದ 3 ಕೋಟಿ ರೂಪಾಯಿ ಪಡೆಯುತ್ತಾರೆ. ಆದರೆ ‘ಒಎಂಜಿ 2’ ಸಿನಿಮಾದಲ್ಲಿ ಅವರಿಗೆ ಸಿಕ್ಕಿರುವುದು ಬರೋಬ್ಬರಿ 5 ಕೋಟಿ ರೂಪಾಯಿ. ಇನ್ನು, ನಟಿ ಯಾಮಿ ಗೌತಮ್​ ಅವರು 8 ಕೋಟಿ ರೂಪಾಯಿ ಪಡೆದಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ಹಿರಿಯ ನಟ ಅರುಣ್​ ಗೋವಿಲ್​ ಅವರಿಗೆ ಈ 50 ಲಕ್ಷ ರೂಪಾಯಿ ಸಂಭಾವನೆ ನೀಡಲಾಗಿದೆ.

ಇದನ್ನೂ ಓದಿ: ಸೋಲಿನ ನೋವು ಮರೆತು ಪೊಲೀಸರ ಜೊತೆ ವಾಲಿಬಾಲ್​ ಆಡಿದ ನಟ ಅಕ್ಷಯ್​ ಕುಮಾರ್​; ವಿಡಿಯೋ ವೈರಲ್​

ಆಗಸ್ಟ್​ 11ರಂದು ‘ಒಎಂಜಿ 2’ ಸಿನಿಮಾ ಬಿಡುಗಡೆ ಆಯಿತು. ಅದೇ ದಿನ ಸನ್ನಿ ಡಿಯೋಲ್​ ನಟನೆಯ ‘ಗದರ್​ 2’ ಚಿತ್ರ ಕೂಡ ತೆರೆಕಂಡಿತು. ಆಗಸ್ಟ್​ 10ರಂದು ರಜನಿಕಾಂತ್​ ಅಭಿನಯದ ‘ಜೈಲರ್​’ ರಿಲೀಸ್​ ಆಯಿತು. ಹಾಗಾಗಿ ಬಾಕ್ಸ್ ಆಫೀಸ್​ನಲ್ಲಿ ಪೈಪೋಟಿ ಜೋರಾಗಿದೆ. 8 ದಿನಗಳ ಯಶಸ್ವಿ ಪ್ರದರ್ಶನದ ಬಳಿಕ ‘ಒಎಂಜಿ 2’ ಸಿನಿಮಾ 90 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ಶೀಘ್ರದಲ್ಲೇ ಈ ಚಿತ್ರ 100 ಕೋಟಿ ರೂಪಾಯಿ ಕ್ಲಬ್​ ಸೇರುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು