AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಸಿನಿಮಾ ರಿಲೀಸ್ ಹತ್ತಿರವಾದರೂ ಅಕ್ಷಯ್ ಕುಮಾರ್​ ಚಿತ್ರಕ್ಕಿಲ್ಲ ಸೆನ್ಸಾರ್; ಬಿಡುಗಡೆ ಅನುಮಾನ?

ಲೈಂಗಿಕ ಶಿಕ್ಷಣದ ಬಗ್ಗೆ ಸಿನಿಮಾದಲ್ಲಿ ಇದೆ ಎನ್ನಲಾಗಿದೆ. ದೇವರು ಹಾಗೂ ಲೈಂಗಿಕ ವಿಚಾರವನ್ನು ಒಟ್ಟಿಗೆ ತಂದಿರುವುದರಿಂದ ಸಿನಿಮಾಗೆ ತೊಂದರೆ ಆಗುತ್ತಿದೆ.

 ಸಿನಿಮಾ ರಿಲೀಸ್ ಹತ್ತಿರವಾದರೂ ಅಕ್ಷಯ್ ಕುಮಾರ್​ ಚಿತ್ರಕ್ಕಿಲ್ಲ ಸೆನ್ಸಾರ್; ಬಿಡುಗಡೆ ಅನುಮಾನ?
ಓಎಂಜಿ 2
Follow us
ರಾಜೇಶ್ ದುಗ್ಗುಮನೆ
|

Updated on:Jul 25, 2023 | 9:33 AM

ಅಕ್ಷಯ್ ಕುಮಾರ್ (Akshay Kumar) ಅವರಿಗೆ ಇತ್ತೀಚೆಗೆ ಏಕೋ ಸಮಯ ಸರಿಯಿಲ್ಲ. ಅವರ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡುತ್ತಿಲ್ಲ. ಇದರ ಜೊತೆಗೆ ಸಾಕಷ್ಟು ವಿವಾದಗಳು ಆಗುತ್ತಿವೆ. ಈಗ ಅವರ ನಟನೆಯ ‘ಒಹ್ ಮೈ ಗಾಡ್ 2’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಆಗಸ್ಟ್​ 11ರಂದು ಚಿತ್ರ ತೆರೆಗೆ ಬರುತ್ತಿದೆ. ಆದರೆ, ಸಿನಿಮಾಗೆ ಇನ್ನೂ ಸೆನ್ಸಾರ್ ಸರ್ಟಿಫಿಕೇಟ್ ಸಿಕ್ಕಿಲ್ಲ. ಇದು ಚಿತ್ರತಂಡದ ಚಿಂತೆಗೆ ಕಾರಣವಾಗಿದೆ. ಇದು ಚಿತ್ರತಂಡದ ಪ್ರಚಾರದ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ.

ಅಕ್ಷಯ್ ಕುಮಾರ್, ಪಂಕಜ್ ತ್ರಿಪಾಠಿ, ಯಾಮಿ ಗೌತಮ್ ಮೊದಲಾದವರು ‘ಒಎಂಜಿ 2’ ಸಿನಿಮಾದಲ್ಲಿ ನಟಿಸಿದ್ದಾರೆ. ‘ಒಎಂಜಿ’ ಹಿಟ್ ಆಗಿತ್ತು. ಈಗ ಅದರ ಸೀಕ್ವೆಲ್ ಎನ್ನುವ ಕಾರಣಕ್ಕೂ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಲೈಂಗಿಕ ಶಿಕ್ಷಣದ ಬಗ್ಗೆ ಸಿನಿಮಾದಲ್ಲಿ ಇದೆ ಎನ್ನಲಾಗಿದೆ. ದೇವರು ಹಾಗೂ ಲೈಂಗಿಕ ವಿಚಾರವನ್ನು ಒಟ್ಟಿಗೆ ತಂದಿರುವುದರಿಂದ ಸಿನಿಮಾಗೆ ತೊಂದರೆ ಆಗುತ್ತಿದೆ.

ಸಿನಿಮಾದಲ್ಲಿ ಸಣ್ಣ ವಿಚಾರ ಸಿಕ್ಕರೂ ಅದನ್ನೂ ದೊಡ್ಡ ಮಟ್ಟದಲ್ಲಿ ವಿವಾದ ಮಾಡಲಾಗುತ್ತದೆ. ಅದರಲ್ಲೂ ದೇವರ ವಿಚಾರದಲ್ಲಿ ಸಣ್ಣ ತಪ್ಪಾದರೂ ಸಿನಿಮಾ ಬಹಿಷ್ಕಾರಕ್ಕೆ ಆಗ್ರಹ ಬರುತ್ತದೆ. ಸೆನ್ಸಾರ್ ಮಂಡಳಿ ವಿರುದ್ಧ ಘೋಷಣೆ ಕೂಗಲಾಗುತ್ತದೆ. ಈ ಕಾರಣದಿಂದಲೇ ‘ಒಎಂಜಿ 2’ ಸಿನಿಮಾ ನೋಡಿರುವ ಸೆನ್ಸಾರ್ ಮಂಡಳಿ ಅವರು ಅದನ್ನು ರಿವೈಸಿಂಗ್ ಸಮಿತಿಗೆ ಕಳುಹಿಸಿದ್ದಾರೆ. ಸಿನಿಮಾ ರಿಲೀಸ್​ಗೆ ಇನ್ನು ಸುಮಾರು ಎರಡು ವಾರ ಇದೆ. ಆದಾಗ್ಯೂ ಸೆನ್ಸಾರ್ ಪ್ರಕ್ರಿಯೆ ಮುಗಿಯದೇ ಇರುವುದರಿಂದ ಸಿನಿಮಾ ಸಂಕಷ್ಟ ಅನುಭವಿಸುವ ಸಾಧ್ಯತೆ ಇದೆ.

ಇದನ್ನೂ ಓದಿ: ‘ಸೆನ್ಸಾರ್ ಬೋರ್ಡ್ ಒಪ್ಪಿಗೆ ಕೊಟ್ಟಮೇಲೆ ಮುಗಿಯಿತು’; ‘ಆದಿಪುರುಷ್’ ಮೇಲಿದ್ದ ಬ್ಯಾನ್ ತೆರವು ಮಾಡಿದ ಕೋರ್ಟ್

ಸೆನ್ಸಾರ್ ಸರ್ಟಿಫಿಕೇಟ್ ಸಿಕ್ಕರೆ ಪ್ರಚಾರದ ವೇಳೆ ಆ ಬಗ್ಗೆ ಹೇಳಬಹುದು. ಆದರೆ, ಈ ಪ್ರಮಾsಣಪತ್ರ ಸಿಗದೆ ಪ್ರಚಾರಕ್ಕೆ ಇಳಿಯುವುದು ತಂಡಕ್ಕೆ ಕೊಂಚ ಹಿನ್ನಡೆ ಉಂಟು ಮಾಡುತ್ತದೆ. ಜುಲೈ 27ರಂದು ಸಿನಿಮಾ ತಂಡ ಟ್ರೇಲರ್ ರಿಲೀಸ್ ಮಾಡುವ ಪ್ಲ್ಯಾನ್​ನಲ್ಲಿದೆ. ಅದು ಕೂಡ ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:10 am, Tue, 25 July 23

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್