AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಶಿಕ್ಷಣದ ಬಗ್ಗೆ ಹೇಳಲು ಬಂದ ‘ಒಎಂಜಿ 2’; ವಿವಾದ ಸೃಷ್ಟಿಸಲಿದೆ ಅಕ್ಷಯ್ ಕುಮಾರ್ ಸಿನಿಮಾ?

OMG 2 Trailer: ಪಂಕಜ್ ತ್ರಿಪಾಠಿ ಅವರು ‘ಒಎಂಜಿ 2’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರದಲ್ಲಿ ಶಿವನ ಪಾತ್ರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ.

ಲೈಂಗಿಕ ಶಿಕ್ಷಣದ ಬಗ್ಗೆ ಹೇಳಲು ಬಂದ ‘ಒಎಂಜಿ 2’; ವಿವಾದ ಸೃಷ್ಟಿಸಲಿದೆ ಅಕ್ಷಯ್ ಕುಮಾರ್ ಸಿನಿಮಾ?
ಅಕ್ಷಯ್
ರಾಜೇಶ್ ದುಗ್ಗುಮನೆ
|

Updated on:Aug 03, 2023 | 12:55 PM

Share

ಅಕ್ಷಯ್ ಕುಮಾರ್ (Akshay Kumar) ಅವರು ಬ್ಯಾಕ್​ ಟು ಬ್ಯಾಕ್ ಫ್ಲಾಪ್ ಸಿನಿಮಾಗಳನ್ನು ನೀಡುತ್ತಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ. ಅವರು ‘ಒಹ್ ಮೈ ಗಾಡ್ 2’ ಚಿತ್ರದ (OMG 2) ಮೇಲೆ ಭರ್ಜರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆಗಸ್ಟ್ 11ರಂದು ಚಿತ್ರ ರಿಲೀಸ್ ಆಗಲಿದೆ. ಈ ಸಿನಿಮಾದ ಟ್ರೇಲರ್ ಇಂದು (ಆಗಸ್ಟ್ 3) ರಿಲೀಸ್ ಆಗಿದೆ. ಸಿನಿಮಾ ಯಾವ ರೀತಿಯಲ್ಲಿ ಇರಲಿದೆ ಎನ್ನುವುದಕ್ಕೆ ಟ್ರೇಲರ್ ಸಾಕ್ಷ್ಯ ನೀಡಿದೆ.

ಪಂಕಜ್ ತ್ರಿಪಾಠಿ ಅವರು ‘ಒಎಂಜಿ 2’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರದಲ್ಲಿ ಶಿವನ ಪಾತ್ರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಲೈಂಗಿಕ ಶಿಕ್ಷಣದ ಬಗ್ಗೆ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಟ್ರೇಲರ್ ಉದ್ದಕ್ಕೂ ಶಿವನ ಅವತಾರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ.

ಲೈಂಗಿಕ ವಿಚಾರಗಳನ್ನು ಹೇಳುವಾಗ ಹೆಚ್ಚು ಎಚ್ಚರಿಕೆ ಬೇಕು. ಹೀಗಾಗಿ, ‘ಒಎಂಜಿ 2’ ಸಿನಿಮಾ ವಿವಾದ ಸೃಷ್ಟಿ ಮಾಡಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈಗಾಗಲೇ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಎ ಸರ್ಟಿಫಿಕೇಟ್ ನೀಡಿದೆ. ಅಂದರೆ, ವಯಸ್ಕರು ಮಾತ್ರ ಈ ಚಿತ್ರ ವೀಕ್ಷಿಸಬಹುದು. ನಾಗ ಸಾಧುಗಳ ದೃಶ್ಯವೊಂದು ಸಿನಿಮಾದಲ್ಲಿ ಬರುತ್ತದೆ. ನಾಗ ಸಾಧುಗಳು ಬಟ್ಟೆ ಹಾಕುವುದಿಲ್ಲ. ಆ ದೃಶ್ಯವನ್ನು ತೋರಿಸದಂತೆ ಸೆನ್ಸಾರ್ ಮಂಡಳಿಯವರು ಸೂಚಿಸಿದ್ದಾರೆ. ದೃಶ್ಯವೊಂದರ ಬ್ಯಾಕ್​ಗ್ರೌಂಡ್​ನಲ್ಲಿ ಕಾಂಡೋಮ್ ಜಾಹೀರಾತು ಕಾಣಿಸುತ್ತದೆ. ಅದನ್ನು ತೆಗೆಯುವಂತೆಯೂ ಸೂಚಿಸಲಾಗಿದೆ.

ಇದನ್ನೂ ಓದಿ: ತಪ್ಪಿನಿಂದ ಬದಲಾವಣೆ ಕಂಡ ಅಕ್ಷಯ್ ಕುಮಾರ್; ಸತತ ಸೋಲಿನ ಬಳಿಕ ಬದಲಾದ ಸ್ಟಾರ್ ಹೀರೋ

‘ಒಎಂಜಿ 2’ ಸಿನಿಮಾದಲ್ಲಿ 25 ಕಡೆಗಳಲ್ಲಿ ಬದಲಾವಣೆಗಳನ್ನು ಮಾಡುವಂತೆ ಸೂಚಿಸಲಾಗಿದೆ. ಇದು ಚಿತ್ರತಂಡದ ಆತಂಕಕ್ಕೆ ಕಾರಣ ಆಗಿದೆ. ‘ಆದಿಪುರುಷ್’ ಚಿತ್ರ ಸಾಕಷ್ಟು ವಿವಾದ ಮಾಡಿತ್ತು. ಈ ವಿವಾದದಿಂದ ಸೆನ್ಸಾರ್ ಮಂಡಳಿ ಎಚ್ಚೆತ್ತುಕೊಂಡಿದೆ. ಈ ಕಾರಣದಿಂದಲೇ ಸೆನ್ಸಾರ್ ಮಂಡಳಿಯು ರಿವೈಸಿಂಗ್ ಕಮಿಟಿಗೆ ಚಿತ್ರವನ್ನು ಕಳುಹಿಸಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:57 am, Thu, 3 August 23

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!