AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ಶಿಕ್ಷಣದ ಬಗ್ಗೆ ಹೇಳಲು ಬಂದ ‘ಒಎಂಜಿ 2’; ವಿವಾದ ಸೃಷ್ಟಿಸಲಿದೆ ಅಕ್ಷಯ್ ಕುಮಾರ್ ಸಿನಿಮಾ?

OMG 2 Trailer: ಪಂಕಜ್ ತ್ರಿಪಾಠಿ ಅವರು ‘ಒಎಂಜಿ 2’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರದಲ್ಲಿ ಶಿವನ ಪಾತ್ರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ.

ಲೈಂಗಿಕ ಶಿಕ್ಷಣದ ಬಗ್ಗೆ ಹೇಳಲು ಬಂದ ‘ಒಎಂಜಿ 2’; ವಿವಾದ ಸೃಷ್ಟಿಸಲಿದೆ ಅಕ್ಷಯ್ ಕುಮಾರ್ ಸಿನಿಮಾ?
ಅಕ್ಷಯ್
ರಾಜೇಶ್ ದುಗ್ಗುಮನೆ
|

Updated on:Aug 03, 2023 | 12:55 PM

Share

ಅಕ್ಷಯ್ ಕುಮಾರ್ (Akshay Kumar) ಅವರು ಬ್ಯಾಕ್​ ಟು ಬ್ಯಾಕ್ ಫ್ಲಾಪ್ ಸಿನಿಮಾಗಳನ್ನು ನೀಡುತ್ತಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ. ಅವರು ‘ಒಹ್ ಮೈ ಗಾಡ್ 2’ ಚಿತ್ರದ (OMG 2) ಮೇಲೆ ಭರ್ಜರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆಗಸ್ಟ್ 11ರಂದು ಚಿತ್ರ ರಿಲೀಸ್ ಆಗಲಿದೆ. ಈ ಸಿನಿಮಾದ ಟ್ರೇಲರ್ ಇಂದು (ಆಗಸ್ಟ್ 3) ರಿಲೀಸ್ ಆಗಿದೆ. ಸಿನಿಮಾ ಯಾವ ರೀತಿಯಲ್ಲಿ ಇರಲಿದೆ ಎನ್ನುವುದಕ್ಕೆ ಟ್ರೇಲರ್ ಸಾಕ್ಷ್ಯ ನೀಡಿದೆ.

ಪಂಕಜ್ ತ್ರಿಪಾಠಿ ಅವರು ‘ಒಎಂಜಿ 2’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರದಲ್ಲಿ ಶಿವನ ಪಾತ್ರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಲೈಂಗಿಕ ಶಿಕ್ಷಣದ ಬಗ್ಗೆ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಟ್ರೇಲರ್ ಉದ್ದಕ್ಕೂ ಶಿವನ ಅವತಾರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ.

ಲೈಂಗಿಕ ವಿಚಾರಗಳನ್ನು ಹೇಳುವಾಗ ಹೆಚ್ಚು ಎಚ್ಚರಿಕೆ ಬೇಕು. ಹೀಗಾಗಿ, ‘ಒಎಂಜಿ 2’ ಸಿನಿಮಾ ವಿವಾದ ಸೃಷ್ಟಿ ಮಾಡಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈಗಾಗಲೇ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಎ ಸರ್ಟಿಫಿಕೇಟ್ ನೀಡಿದೆ. ಅಂದರೆ, ವಯಸ್ಕರು ಮಾತ್ರ ಈ ಚಿತ್ರ ವೀಕ್ಷಿಸಬಹುದು. ನಾಗ ಸಾಧುಗಳ ದೃಶ್ಯವೊಂದು ಸಿನಿಮಾದಲ್ಲಿ ಬರುತ್ತದೆ. ನಾಗ ಸಾಧುಗಳು ಬಟ್ಟೆ ಹಾಕುವುದಿಲ್ಲ. ಆ ದೃಶ್ಯವನ್ನು ತೋರಿಸದಂತೆ ಸೆನ್ಸಾರ್ ಮಂಡಳಿಯವರು ಸೂಚಿಸಿದ್ದಾರೆ. ದೃಶ್ಯವೊಂದರ ಬ್ಯಾಕ್​ಗ್ರೌಂಡ್​ನಲ್ಲಿ ಕಾಂಡೋಮ್ ಜಾಹೀರಾತು ಕಾಣಿಸುತ್ತದೆ. ಅದನ್ನು ತೆಗೆಯುವಂತೆಯೂ ಸೂಚಿಸಲಾಗಿದೆ.

ಇದನ್ನೂ ಓದಿ: ತಪ್ಪಿನಿಂದ ಬದಲಾವಣೆ ಕಂಡ ಅಕ್ಷಯ್ ಕುಮಾರ್; ಸತತ ಸೋಲಿನ ಬಳಿಕ ಬದಲಾದ ಸ್ಟಾರ್ ಹೀರೋ

‘ಒಎಂಜಿ 2’ ಸಿನಿಮಾದಲ್ಲಿ 25 ಕಡೆಗಳಲ್ಲಿ ಬದಲಾವಣೆಗಳನ್ನು ಮಾಡುವಂತೆ ಸೂಚಿಸಲಾಗಿದೆ. ಇದು ಚಿತ್ರತಂಡದ ಆತಂಕಕ್ಕೆ ಕಾರಣ ಆಗಿದೆ. ‘ಆದಿಪುರುಷ್’ ಚಿತ್ರ ಸಾಕಷ್ಟು ವಿವಾದ ಮಾಡಿತ್ತು. ಈ ವಿವಾದದಿಂದ ಸೆನ್ಸಾರ್ ಮಂಡಳಿ ಎಚ್ಚೆತ್ತುಕೊಂಡಿದೆ. ಈ ಕಾರಣದಿಂದಲೇ ಸೆನ್ಸಾರ್ ಮಂಡಳಿಯು ರಿವೈಸಿಂಗ್ ಕಮಿಟಿಗೆ ಚಿತ್ರವನ್ನು ಕಳುಹಿಸಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:57 am, Thu, 3 August 23

Follow Us
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್