ಲೈಂಗಿಕ ಶಿಕ್ಷಣದ ಬಗ್ಗೆ ಹೇಳಲು ಬಂದ ‘ಒಎಂಜಿ 2’; ವಿವಾದ ಸೃಷ್ಟಿಸಲಿದೆ ಅಕ್ಷಯ್ ಕುಮಾರ್ ಸಿನಿಮಾ?

OMG 2 Trailer: ಪಂಕಜ್ ತ್ರಿಪಾಠಿ ಅವರು ‘ಒಎಂಜಿ 2’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರದಲ್ಲಿ ಶಿವನ ಪಾತ್ರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ.

ಲೈಂಗಿಕ ಶಿಕ್ಷಣದ ಬಗ್ಗೆ ಹೇಳಲು ಬಂದ ‘ಒಎಂಜಿ 2’; ವಿವಾದ ಸೃಷ್ಟಿಸಲಿದೆ ಅಕ್ಷಯ್ ಕುಮಾರ್ ಸಿನಿಮಾ?
ಅಕ್ಷಯ್
Follow us
|

Updated on:Aug 03, 2023 | 12:55 PM

ಅಕ್ಷಯ್ ಕುಮಾರ್ (Akshay Kumar) ಅವರು ಬ್ಯಾಕ್​ ಟು ಬ್ಯಾಕ್ ಫ್ಲಾಪ್ ಸಿನಿಮಾಗಳನ್ನು ನೀಡುತ್ತಿದ್ದಾರೆ. ಅವರಿಗೆ ತುರ್ತಾಗಿ ಒಂದು ಗೆಲುವಿನ ಅವಶ್ಯಕತೆ ಇದೆ. ಅವರು ‘ಒಹ್ ಮೈ ಗಾಡ್ 2’ ಚಿತ್ರದ (OMG 2) ಮೇಲೆ ಭರ್ಜರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆಗಸ್ಟ್ 11ರಂದು ಚಿತ್ರ ರಿಲೀಸ್ ಆಗಲಿದೆ. ಈ ಸಿನಿಮಾದ ಟ್ರೇಲರ್ ಇಂದು (ಆಗಸ್ಟ್ 3) ರಿಲೀಸ್ ಆಗಿದೆ. ಸಿನಿಮಾ ಯಾವ ರೀತಿಯಲ್ಲಿ ಇರಲಿದೆ ಎನ್ನುವುದಕ್ಕೆ ಟ್ರೇಲರ್ ಸಾಕ್ಷ್ಯ ನೀಡಿದೆ.

ಪಂಕಜ್ ತ್ರಿಪಾಠಿ ಅವರು ‘ಒಎಂಜಿ 2’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಈ ಚಿತ್ರದಲ್ಲಿ ಶಿವನ ಪಾತ್ರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಲೈಂಗಿಕ ಶಿಕ್ಷಣದ ಬಗ್ಗೆ ಇದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಟ್ರೇಲರ್ ಉದ್ದಕ್ಕೂ ಶಿವನ ಅವತಾರದಲ್ಲಿ ಅಕ್ಷಯ್ ಕುಮಾರ್ ಕಾಣಿಸಿಕೊಂಡಿದ್ದಾರೆ.

ಲೈಂಗಿಕ ವಿಚಾರಗಳನ್ನು ಹೇಳುವಾಗ ಹೆಚ್ಚು ಎಚ್ಚರಿಕೆ ಬೇಕು. ಹೀಗಾಗಿ, ‘ಒಎಂಜಿ 2’ ಸಿನಿಮಾ ವಿವಾದ ಸೃಷ್ಟಿ ಮಾಡಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ಈಗಾಗಲೇ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಎ ಸರ್ಟಿಫಿಕೇಟ್ ನೀಡಿದೆ. ಅಂದರೆ, ವಯಸ್ಕರು ಮಾತ್ರ ಈ ಚಿತ್ರ ವೀಕ್ಷಿಸಬಹುದು. ನಾಗ ಸಾಧುಗಳ ದೃಶ್ಯವೊಂದು ಸಿನಿಮಾದಲ್ಲಿ ಬರುತ್ತದೆ. ನಾಗ ಸಾಧುಗಳು ಬಟ್ಟೆ ಹಾಕುವುದಿಲ್ಲ. ಆ ದೃಶ್ಯವನ್ನು ತೋರಿಸದಂತೆ ಸೆನ್ಸಾರ್ ಮಂಡಳಿಯವರು ಸೂಚಿಸಿದ್ದಾರೆ. ದೃಶ್ಯವೊಂದರ ಬ್ಯಾಕ್​ಗ್ರೌಂಡ್​ನಲ್ಲಿ ಕಾಂಡೋಮ್ ಜಾಹೀರಾತು ಕಾಣಿಸುತ್ತದೆ. ಅದನ್ನು ತೆಗೆಯುವಂತೆಯೂ ಸೂಚಿಸಲಾಗಿದೆ.

ಇದನ್ನೂ ಓದಿ: ತಪ್ಪಿನಿಂದ ಬದಲಾವಣೆ ಕಂಡ ಅಕ್ಷಯ್ ಕುಮಾರ್; ಸತತ ಸೋಲಿನ ಬಳಿಕ ಬದಲಾದ ಸ್ಟಾರ್ ಹೀರೋ

‘ಒಎಂಜಿ 2’ ಸಿನಿಮಾದಲ್ಲಿ 25 ಕಡೆಗಳಲ್ಲಿ ಬದಲಾವಣೆಗಳನ್ನು ಮಾಡುವಂತೆ ಸೂಚಿಸಲಾಗಿದೆ. ಇದು ಚಿತ್ರತಂಡದ ಆತಂಕಕ್ಕೆ ಕಾರಣ ಆಗಿದೆ. ‘ಆದಿಪುರುಷ್’ ಚಿತ್ರ ಸಾಕಷ್ಟು ವಿವಾದ ಮಾಡಿತ್ತು. ಈ ವಿವಾದದಿಂದ ಸೆನ್ಸಾರ್ ಮಂಡಳಿ ಎಚ್ಚೆತ್ತುಕೊಂಡಿದೆ. ಈ ಕಾರಣದಿಂದಲೇ ಸೆನ್ಸಾರ್ ಮಂಡಳಿಯು ರಿವೈಸಿಂಗ್ ಕಮಿಟಿಗೆ ಚಿತ್ರವನ್ನು ಕಳುಹಿಸಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:57 am, Thu, 3 August 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ