AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಜು ಕಲಿಯಲು ಕೀಟಗಳನ್ನು ತಿಂದಿದ್ದ ನಟ; ಅಚ್ಚರಿ ವಿಚಾರ ತಿಳಿಸಿದ ಪಂಕಜ್​ ತ್ರಿಪಾಠಿ

ಶಾಲಾ ದಿನಗಳಲ್ಲಿ ಈಜು ಕಲಿಯಬೇಕು ಎಂಬುದು ಪಂಕಜ್​ ತ್ರಿಪಾಠಿ ಅವರ ಗುರಿ ಆಗಿತ್ತು. ಅದಕ್ಕಾಗಿ ಅವರು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದರು. ಒಮ್ಮೆ ಗೆಳೆಯರು ನೀಡಿದ ಸಲಹೆಯನ್ನು ಸ್ವೀಕರಿಸಿ ಅವರು ಕೀಟಗಳನ್ನು ನೀರಿನಲ್ಲಿ ಹಾಕಿಕೊಂಡು ಕುಡಿದಿದ್ದರು. ಆ ಘಟನೆಯನ್ನು ಅವರು ಈಗ ಮೆಲುಕು ಹಾಕಿದ್ದಾರೆ.

ಈಜು ಕಲಿಯಲು ಕೀಟಗಳನ್ನು ತಿಂದಿದ್ದ ನಟ; ಅಚ್ಚರಿ ವಿಚಾರ ತಿಳಿಸಿದ ಪಂಕಜ್​ ತ್ರಿಪಾಠಿ
ಪಂಕಜ್​ ತ್ರಿಪಾಠಿ
ಮದನ್​ ಕುಮಾರ್​
|

Updated on: Jan 09, 2024 | 4:24 PM

Share

ಬಾಲಿವುಡ್​ನಲ್ಲಿ ನಟ ಪಂಕಜ್​ ತ್ರಿಪಾಠಿ (Pankaj Tripathi) ಅವರು ಸಖತ್​ ಜನಪ್ರಿಯತೆ ಗಳಿಸಿದ್ದಾರೆ. ಅವರಿಗೆ ತುಂಬ ಡಿಮ್ಯಾಂಡ್​ ಇದೆ. ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ‘ಇಂಡಿಯಾ ಟಿವಿ’ ನಡೆಸಿದ ಸಂದರ್ಶನದಲ್ಲಿ ಪಂಕಜ್​ ತ್ರಿಪಾಠಿ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಬಾಲ್ಯವನ್ನು ಹಳ್ಳಿಯಲ್ಲಿ ಕಳೆದ ಅವರಿಗೆ ಕೆಲವು ವಿಶೇಷ ಅನುಭವಗಳು ಆಗಿದ್ದವು. ಅಚ್ಚರಿ ಏನೆಂದರೆ, ಈಜು ( Swimming) ಕಲಿಯಬೇಕು ಎಂದು ಪಂಕಜ್​ ತ್ರಿಪಾಠಿ ಅವರು ಕೀಟಗಳನ್ನು (Insects) ತಿಂದಿದ್ದರು! ಆ ಘಟನೆಯನ್ನು ಅವರು ಈಗ ಮೆಲುಕು ಹಾಕಿದ್ದಾರೆ.

ಶಾಲಾ ದಿನಗಳಲ್ಲಿ ಈಜು ಕಲಿಯಬೇಕು ಎಂಬುದು ಪಂಕಜ್​ ತ್ರಿಪಾಠಿ ಅವರ ಗುರಿ ಆಗಿತ್ತು. ಅದಕ್ಕಾಗಿ ಅವರು ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದ್ದರು. ಒಮ್ಮೆ ಗೆಳೆಯರು ನೀಡಿದ ಸಲಹೆಯನ್ನು ಸ್ವೀಕರಿಸಿ ಅವರು ಕೀಟಗಳನ್ನು ನೀರಿನಲ್ಲಿ ಹಾಕಿಕೊಂಡು ಕುಡಿದಿದ್ದರು. ‘ನಮ್ಮ ಮನೆಯ ಹಿಂಬದಿಯಲ್ಲಿ ನದಿ ಇತ್ತು. ಆ ನದಿಯ ನೀರಿನ ಮೇಲೆ ಚಿಕ್ಕ ಕಪ್ಪು ಕೀಟಗಳು ಇರುತ್ತಿದ್ದವು. ಆ ಊರಿನ ಮಕ್ಕಳು ಭಾರಿ ತುಂಟರಾಗಿದ್ದರು. ಆ ಕೀಟಗಳನ್ನು ತಿಂದರೆ ಈಜು ಕಲಿಯಬಹುದು ಅಂತ ಅವರು ಸಲಹೆ ನೀಡಿದರು’ ಎಂದಿದ್ದಾರೆ ಪಂಜಕ್​ ತ್ರಿಪಾಠಿ.

ಇದನ್ನೂ ಓದಿ: Pankaj Tripathi: ಸೌತ್​ ಸಿನಿಮಾ ಒಪ್ಪಿಕೊಳ್ಳದೇ ಇರಲು ಬಹಿರಂಗ ವೇದಿಕೆಯಲ್ಲಿ ಕಾರಣ ತಿಳಿಸಿದ ಪಂಕಜ್​ ತ್ರಿಪಾಠಿ

‘ನಾನು 10-12 ಕೀಟಗಳನ್ನು ಹಿಡಿದು, ನೀರಿನಲ್ಲಿ ಹಾಕಿಕೊಂಡು ಕುಡಿದೆ. ಪುಣ್ಯಕ್ಕೆ ನನ್ನ ಹೊಟ್ಟೆ ಹಾಳಾಗಲಿಲ್ಲ’ ಎಂದು ಆ ದಿನಗಳನ್ನು ಪಂಕಜ್​ ತ್ರಿಪಾಠಿ ನೆನಪಿಸಿಕೊಂಡಿದ್ದಾರೆ. ಇನ್ನೊಂದು ಇಂಟರೆಸ್ಟಿಂಗ್​ ವಿಚಾರ ಏನೆಂದರೆ, ಪಂಕಜ್ ಅವರ ಸರ್​ನೇಮ್​ ತ್ರಿಪಾಠಿ ಆಗಿರಲಿಲ್ಲ. ತಿವಾರಿ ಎಂಬುದು ಅವರ ಸರ್​ನೇಮ್​ ಆಗಿತ್ತು. ಅದನ್ನು ಬದಲಾಯಿಸಿಕೊಂಡಿದ್ದು ಯಾಕೆ ಎಂಬುದನ್ನು ಕೂಡ ಅವರೀಗ ವಿವರಿಸಿದ್ದಾರೆ.

‘ನನ್ನ ರೀತಿ ತಿವಾರಿ ಎಂದು ಹೆಸರು ಇಟ್ಟುಕೊಂಡಿದ್ದವರೆಲ್ಲ ಪೂಜಾರಿ ಆಗಿದ್ದರು ಅಥವಾ ರೈತರಾಗಿದ್ದರು. ನನಗೆ ಆ ವೃತ್ತಿ ಮಾಡಲು ಇಷ್ಟ ಇರಲಿಲ್ಲ. ನನ್ನ ಅಂಕಲ್​ ಸರ್​ನೇಮ್​ ತ್ರಿಪಾಠಿ ಆಗಿತ್ತು. ಅವರು ಸರ್ಕಾರಿ ನೌಕರ ಆಗಿದ್ದರು. ಅದೇ ಹೆಸರಿನ ಇನ್ನೊಬ್ಬರು ಹಿಂದಿ ಪ್ರೊಫೆಸರ್​ ಆಗಿದ್ದರು. ಹಾಗಾಗಿ ನಾನು ಕೂಡ ತ್ರಿಪಾಠಿ ಅಂತ ಸರ್​ನೇಮ್​ ಬದಲಿಸಿಕೊಂಡೆ’ ಎಂದು ಪಂಕಜ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ