AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ಜತೆಗಿನ ಸಿನಿಮಾವನ್ನೂ ಮುಲಾಜಿಲ್ಲದೇ ರಿಜೆಕ್ಟ್ ಮಾಡಿದ್ದ ರವೀನಾ ಟಂಡನ್; ಕಾರಣ?

ನಟಿ ರವೀನಾ ಟಂಡನ್​ ಅವರು ಬಾಲಿವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಸಿನಿಮಾಗಳನ್ನು ಒಪ್ಪಿಕೊಳ್ಳುವಲ್ಲಿ ಅವರು ಕೆಲವು ನಿಯಮ ಪಾಲಿಸುತ್ತಾರೆ. ಕಾಸ್ಟ್ಯೂಮ್​ ವಿಚಿತ್ರವಾಗಿದೆ ಎಂಬ ಕಾರಣಕ್ಕೆ ಅವರು ಶಾರುಖ್​ ಖಾನ್​ ಜೊತೆಗಿನ ಸಿನಿಮಾವನ್ನೂ ರಿಜೆಕ್ಟ್​ ಮಾಡಿದ್ದರು. ಅವರ ಆ ನಿರ್ಧಾರಕ್ಕೆ ಶಾರುಖ್​ ಖಾನ್​ ಕೂಡ ಸಮ್ಮತಿ ನೀಡಿದ್ದರು. ಆ ಬಗ್ಗೆ ಇಲ್ಲಿದೆ ವಿವರ..

ಶಾರುಖ್ ಖಾನ್ ಜತೆಗಿನ ಸಿನಿಮಾವನ್ನೂ ಮುಲಾಜಿಲ್ಲದೇ ರಿಜೆಕ್ಟ್ ಮಾಡಿದ್ದ ರವೀನಾ ಟಂಡನ್; ಕಾರಣ?
ಶಾರುಖ್​ ಖಾನ್​, ರವೀನಾ ಟಂಡನ್​
ಮದನ್​ ಕುಮಾರ್​
|

Updated on: Aug 10, 2024 | 3:54 PM

Share

ಶಾರುಖ್​ ಖಾನ್​ ಜೊತೆ ನಟಿಸುವ ಅವಕಾಶ ಸಿಕ್ಕರೆ ಬಹುತೇಕ ನಟಿಯರು ಕಣ್ಣು ಮುಚ್ಚಿಕೊಂಡು ಒಪ್ಪಿಕೊಳ್ಳುತ್ತಾರೆ. ಅಷ್ಟರಮಟ್ಟಿಗೆ ಇದೆ ಶಾರುಖ್​ ಹವಾ. ಆದರೆ ನಟಿ ರವೀನಾ ಟಂಡನ್​ ಅವರು ಈ ಮೊದಲು ಶಾರುಖ್​ ಖಾನ್​ ಜೊತೆಗಿನ ಒಂದು ಸಿನಿಮಾವನ್ನು ತಿರಸ್ಕರಿಸಿದ್ದರು. ಆ ಕುರಿತು ಅವರು ಈಗ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಶಾರುಖ್​ ಖಾನ್ ಮತ್ತು ರವೀನಾ ಟಂಡನ್​ ಅವರು ಜೊತೆಯಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಒಂದು ಸಿನಿಮಾದಿಂದ ರವೀನಾ ಟಂಡನ್​ ಅವರು ಮುಲಾಜಿಲ್ಲದೇ ಹೊರಬಂದಿದ್ದರು.

ಅದು ಯಾವ ಸಿನಿಮಾ ಎಂಬುದನ್ನು ರವೀನಾ ಟಂಡನ್​ ಅವರು ಬಹಿರಂಗಪಡಿಸಿಲ್ಲ. ಆದರೆ ಆದ ಘಟನೆ ಏನು ಎಂಬುದನ್ನು ವಿವರಿಸಿದ್ದಾರೆ. ಆ ಸಿನಿಮಾದ ಕಥೆಯನ್ನು ರವೀನಾ ಟಂಡನ್​ ಅವರು ಕೇಳಿ ಇಷ್ಟಪಟ್ಟಿದ್ದರು. ಸಿನಿಮಾದಲ್ಲಿ ನಟಿಸಲು ಗ್ರೀನ್​ ಸಿಗ್ನಲ್​ ಕೂಡ ನೀಡಿದ್ದರು. ಆದರೆ ಸಮಸ್ಯೆ ಆಗಿದ್ದು ಬಟ್ಟೆಯದ್ದು! ಹೌದು, ತಮಗೆ ಸರಿ ಎನಿಸದ ರೀತಿಯ ಕಾಸ್ಟ್ಯೂಮ್​ ಧರಿಸಲು ಹೇಳಿದ್ದರಿಂದ ರವೀನಾ ಟಂಡನ್​ ಅವರು ಆ ಸಿನಿಮಾದಿಂದ ಹೊರನಡೆದರು.

ಆ ಬಟ್ಟೆಯ ಮೂಲಕ ನಟಿಯನ್ನು ಒಂದು ವಸ್ತುವಿನ ರೀತಿಯಲ್ಲಿ ಬಿಂಬಿಸುವ ಉದ್ದೇಶ ಆ ಚಿತ್ರತಂಡದ್ದಾಗಿತ್ತು. ಅದಕ್ಕೆ ರವೀನಾ ಅವರಿಗೆ ಸಹಮತ ಇರಲಿಲ್ಲ. ಅಂಥ ಕಾಸ್ಟ್ಯೂಮ್​ ಅವರಿಗೆ ವಿಚಿತ್ರ ಅಂತ ಎನಿಸಿತು ಕೂಡ. ಹಾಗಾಗಿ ಮುಲಾಜಿಲ್ಲದೇ ತಮ್ಮ ನಿರ್ಧಾರ ತಿಳಿಸಿದರು. ಬಳಿಕ ಶಾರುಖ್​ ಖಾನ್​ ಅವರಿಗೆ ಕರೆಮಾಡಿ ವಿಷಯ ತಿಳಿಸಿದರು. ಶಾರುಖ್​ ಕೂಡ ಸಮಸ್ಯೆ ಅರ್ಥ ಮಾಡಿಕೊಂಡರು. ಹಾಗಾಗಿ ಶಾರುಖ್​ ಖಾನ್​ ಅವರನ್ನು ಜಂಟಲ್​ಮ್ಯಾನ್​ ಎಂದು ರವೀನಾ ಟಂಡನ್​ ಕರೆದಿದ್ದಾರೆ.

ಇದನ್ನೂ ಓದಿ: ರವೀನಾ ಟಂಡನ್​ ವಿಡಿಯೋ ವೈರಲ್​ ಮಾಡಿದ ವ್ಯಕ್ತಿ ಮೇಲೆ ಮಾನನಷ್ಟ ಮೊಕದ್ದಮೆ

ಇನ್ನು, ಬೇರೆ ಕಾರಣಗಳಿಂದಲೂ ರವೀನಾ ಟಂಡನ್​ ಅವರು ಶಾರುಖ್​ ಜೊತೆಗಿನ ಸಿನಿಮಾವನ್ನು ರಿಜೆಕ್ಟ್​ ಮಾಡಿದ್ದರು. ಶಾರುಖ್​ ಖಾನ್ ನಟನೆಯ ‘ಡರ್​’ ಸಿನಿಮಾ 1993ರಲ್ಲಿ ಮೂಡಿಬಂದಿತ್ತು. ಆ ಸಿನಿಮಾಗೆ ಯಶ್​ ಚೋಪ್ರಾ ಅವರು ನಿರ್ದೇಶನ ಮಾಡಿದ್ದರು. ಆ ಚಿತ್ರದಲ್ಲಿ ನಟಿಸುವಂತೆ ರವೀನಾ ಟಂಡನ್​ ಅವರಿಗೆ ಆಫರ್​ ನೀಡಲಾಗಿತ್ತು. ಆದರೆ ಅದರಲ್ಲಿನ ಕೆಲವು ದೃಶ್ಯಗಳು ತಮಗೆ ಸರಿ ಎನಿಸುತ್ತಿಲ್ಲ ಎಂಬ ಕಾರಣಕ್ಕೆ ರವೀನಾ ಟಂಡನ್​ ಅವರು ಆಫರ್​ ತಿರಸ್ಕರಿಸಿದ್ದರು. ಬಳಿಕ ಆ ಪಾತ್ರವನ್ನು ಜೂಹಿ ಚಾವ್ಲಾ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು