AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್ ಖಾನ್ ಜತೆಗಿನ ಸಿನಿಮಾವನ್ನೂ ಮುಲಾಜಿಲ್ಲದೇ ರಿಜೆಕ್ಟ್ ಮಾಡಿದ್ದ ರವೀನಾ ಟಂಡನ್; ಕಾರಣ?

ನಟಿ ರವೀನಾ ಟಂಡನ್​ ಅವರು ಬಾಲಿವುಡ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಸಿನಿಮಾಗಳನ್ನು ಒಪ್ಪಿಕೊಳ್ಳುವಲ್ಲಿ ಅವರು ಕೆಲವು ನಿಯಮ ಪಾಲಿಸುತ್ತಾರೆ. ಕಾಸ್ಟ್ಯೂಮ್​ ವಿಚಿತ್ರವಾಗಿದೆ ಎಂಬ ಕಾರಣಕ್ಕೆ ಅವರು ಶಾರುಖ್​ ಖಾನ್​ ಜೊತೆಗಿನ ಸಿನಿಮಾವನ್ನೂ ರಿಜೆಕ್ಟ್​ ಮಾಡಿದ್ದರು. ಅವರ ಆ ನಿರ್ಧಾರಕ್ಕೆ ಶಾರುಖ್​ ಖಾನ್​ ಕೂಡ ಸಮ್ಮತಿ ನೀಡಿದ್ದರು. ಆ ಬಗ್ಗೆ ಇಲ್ಲಿದೆ ವಿವರ..

ಶಾರುಖ್ ಖಾನ್ ಜತೆಗಿನ ಸಿನಿಮಾವನ್ನೂ ಮುಲಾಜಿಲ್ಲದೇ ರಿಜೆಕ್ಟ್ ಮಾಡಿದ್ದ ರವೀನಾ ಟಂಡನ್; ಕಾರಣ?
ಶಾರುಖ್​ ಖಾನ್​, ರವೀನಾ ಟಂಡನ್​
ಮದನ್​ ಕುಮಾರ್​
|

Updated on: Aug 10, 2024 | 3:54 PM

Share

ಶಾರುಖ್​ ಖಾನ್​ ಜೊತೆ ನಟಿಸುವ ಅವಕಾಶ ಸಿಕ್ಕರೆ ಬಹುತೇಕ ನಟಿಯರು ಕಣ್ಣು ಮುಚ್ಚಿಕೊಂಡು ಒಪ್ಪಿಕೊಳ್ಳುತ್ತಾರೆ. ಅಷ್ಟರಮಟ್ಟಿಗೆ ಇದೆ ಶಾರುಖ್​ ಹವಾ. ಆದರೆ ನಟಿ ರವೀನಾ ಟಂಡನ್​ ಅವರು ಈ ಮೊದಲು ಶಾರುಖ್​ ಖಾನ್​ ಜೊತೆಗಿನ ಒಂದು ಸಿನಿಮಾವನ್ನು ತಿರಸ್ಕರಿಸಿದ್ದರು. ಆ ಕುರಿತು ಅವರು ಈಗ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಶಾರುಖ್​ ಖಾನ್ ಮತ್ತು ರವೀನಾ ಟಂಡನ್​ ಅವರು ಜೊತೆಯಾಗಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಒಂದು ಸಿನಿಮಾದಿಂದ ರವೀನಾ ಟಂಡನ್​ ಅವರು ಮುಲಾಜಿಲ್ಲದೇ ಹೊರಬಂದಿದ್ದರು.

ಅದು ಯಾವ ಸಿನಿಮಾ ಎಂಬುದನ್ನು ರವೀನಾ ಟಂಡನ್​ ಅವರು ಬಹಿರಂಗಪಡಿಸಿಲ್ಲ. ಆದರೆ ಆದ ಘಟನೆ ಏನು ಎಂಬುದನ್ನು ವಿವರಿಸಿದ್ದಾರೆ. ಆ ಸಿನಿಮಾದ ಕಥೆಯನ್ನು ರವೀನಾ ಟಂಡನ್​ ಅವರು ಕೇಳಿ ಇಷ್ಟಪಟ್ಟಿದ್ದರು. ಸಿನಿಮಾದಲ್ಲಿ ನಟಿಸಲು ಗ್ರೀನ್​ ಸಿಗ್ನಲ್​ ಕೂಡ ನೀಡಿದ್ದರು. ಆದರೆ ಸಮಸ್ಯೆ ಆಗಿದ್ದು ಬಟ್ಟೆಯದ್ದು! ಹೌದು, ತಮಗೆ ಸರಿ ಎನಿಸದ ರೀತಿಯ ಕಾಸ್ಟ್ಯೂಮ್​ ಧರಿಸಲು ಹೇಳಿದ್ದರಿಂದ ರವೀನಾ ಟಂಡನ್​ ಅವರು ಆ ಸಿನಿಮಾದಿಂದ ಹೊರನಡೆದರು.

ಆ ಬಟ್ಟೆಯ ಮೂಲಕ ನಟಿಯನ್ನು ಒಂದು ವಸ್ತುವಿನ ರೀತಿಯಲ್ಲಿ ಬಿಂಬಿಸುವ ಉದ್ದೇಶ ಆ ಚಿತ್ರತಂಡದ್ದಾಗಿತ್ತು. ಅದಕ್ಕೆ ರವೀನಾ ಅವರಿಗೆ ಸಹಮತ ಇರಲಿಲ್ಲ. ಅಂಥ ಕಾಸ್ಟ್ಯೂಮ್​ ಅವರಿಗೆ ವಿಚಿತ್ರ ಅಂತ ಎನಿಸಿತು ಕೂಡ. ಹಾಗಾಗಿ ಮುಲಾಜಿಲ್ಲದೇ ತಮ್ಮ ನಿರ್ಧಾರ ತಿಳಿಸಿದರು. ಬಳಿಕ ಶಾರುಖ್​ ಖಾನ್​ ಅವರಿಗೆ ಕರೆಮಾಡಿ ವಿಷಯ ತಿಳಿಸಿದರು. ಶಾರುಖ್​ ಕೂಡ ಸಮಸ್ಯೆ ಅರ್ಥ ಮಾಡಿಕೊಂಡರು. ಹಾಗಾಗಿ ಶಾರುಖ್​ ಖಾನ್​ ಅವರನ್ನು ಜಂಟಲ್​ಮ್ಯಾನ್​ ಎಂದು ರವೀನಾ ಟಂಡನ್​ ಕರೆದಿದ್ದಾರೆ.

ಇದನ್ನೂ ಓದಿ: ರವೀನಾ ಟಂಡನ್​ ವಿಡಿಯೋ ವೈರಲ್​ ಮಾಡಿದ ವ್ಯಕ್ತಿ ಮೇಲೆ ಮಾನನಷ್ಟ ಮೊಕದ್ದಮೆ

ಇನ್ನು, ಬೇರೆ ಕಾರಣಗಳಿಂದಲೂ ರವೀನಾ ಟಂಡನ್​ ಅವರು ಶಾರುಖ್​ ಜೊತೆಗಿನ ಸಿನಿಮಾವನ್ನು ರಿಜೆಕ್ಟ್​ ಮಾಡಿದ್ದರು. ಶಾರುಖ್​ ಖಾನ್ ನಟನೆಯ ‘ಡರ್​’ ಸಿನಿಮಾ 1993ರಲ್ಲಿ ಮೂಡಿಬಂದಿತ್ತು. ಆ ಸಿನಿಮಾಗೆ ಯಶ್​ ಚೋಪ್ರಾ ಅವರು ನಿರ್ದೇಶನ ಮಾಡಿದ್ದರು. ಆ ಚಿತ್ರದಲ್ಲಿ ನಟಿಸುವಂತೆ ರವೀನಾ ಟಂಡನ್​ ಅವರಿಗೆ ಆಫರ್​ ನೀಡಲಾಗಿತ್ತು. ಆದರೆ ಅದರಲ್ಲಿನ ಕೆಲವು ದೃಶ್ಯಗಳು ತಮಗೆ ಸರಿ ಎನಿಸುತ್ತಿಲ್ಲ ಎಂಬ ಕಾರಣಕ್ಕೆ ರವೀನಾ ಟಂಡನ್​ ಅವರು ಆಫರ್​ ತಿರಸ್ಕರಿಸಿದ್ದರು. ಬಳಿಕ ಆ ಪಾತ್ರವನ್ನು ಜೂಹಿ ಚಾವ್ಲಾ ಮಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ