AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KK Death News: ಗಾಯಕ ಕೆಕೆ ನಿಧನ; 1 ಕೋಟಿ ರೂ. ಕೊಟ್ಟರೂ ಅಂಥ ಸ್ಥಳದಲ್ಲಿ ಹಾಡುವುದಿಲ್ಲ ಎಂದಿದ್ದ ಸಿಂಗರ್​

Krishnakumar Kunnath: ಗಾಯಕ ಕೆಕೆ ನಿಧನಕ್ಕೆ ಕೋಟ್ಯಂತರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ನೆನಪುಗಳನ್ನು ಮೆಲುಕು ಹಾಕಲಾಗುತ್ತಿದೆ.

KK Death News: ಗಾಯಕ ಕೆಕೆ ನಿಧನ; 1 ಕೋಟಿ ರೂ. ಕೊಟ್ಟರೂ ಅಂಥ ಸ್ಥಳದಲ್ಲಿ ಹಾಡುವುದಿಲ್ಲ ಎಂದಿದ್ದ ಸಿಂಗರ್​
ಗಾಯಕ ಕೆಕೆ
TV9 Web
| Edited By: |

Updated on:Jun 01, 2022 | 8:21 AM

Share

ಭಾರತೀಯ ಸಂಗೀತ ಲೋಕಕ್ಕೆ ಪದೇಪದೇ ಕೆಟ್ಟ ಸುದ್ದಿ ಕೇಳಿಬರುತ್ತಿದೆ. ಹಲವು ಗಾಯಕರ ನಿಧನದಿಂದ ಶೋಕದ ವಾತಾವರಣ ನಿರ್ಮಾಣ ಆಗಿದೆ. ಕೆಲವೇ ದಿನಗಳ ಹಿಂದೆ ಕೇರಳದಲ್ಲಿ ಗಾಯಕ ಎಡವ ಬಿಶೀರ್​ ಅವರು ವೇದಿಕೆಯಲ್ಲಿ ಹಾಡುತ್ತಿರುವಾಗಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆಯಿತು. ಈಗ ಖ್ಯಾತ ಗಾಯಕ ಕೆಕೆ (ಕೃಷ್ಣಕುಮಾರ್​ ಕುನ್ನತ್​ ) ಅವರು ಕೂಡ ಹೃದಯಾಘಾತದಿಂದ ನಿಧನರಾಗಿರುವುದು (KK Death) ನೋವಿನ ಸಂಗತಿ. ಹಲವು ಭಾಷೆಗಳಲ್ಲಿ ಹಾಡಿ ಫೇಮಸ್​ ಆಗಿದ್ದ ಅವರು ಮಂಗಳವಾರ (ಮೇ 31) ಕೋಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ಆಗ ಅವರಿಗೆ ಆರೋಗ್ಯದಲ್ಲಿ ಏರುಪೇರು ಆಯಿತು. ಕೂಡಲೇ ಅವರು ಹೋಟೆಲ್​ಗೆ ಬಂದು ವಿಶ್ರಾಂತಿ ಪಡೆಯಲು ನಿರ್ಧರಿಸಿದರು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂಬುದು ತಿಳಿದುಬಂದಿದೆ. ಅವರ ನಿಧನಕ್ಕೆ ಕೋಟ್ಯಂತರ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ವೃತ್ತಿಬದುಕಿನ ಬಗ್ಗೆ ಕೆಕೆ (Krishnakumar Kunnath) ಅವರು ತಮ್ಮದೇ ನಿಲುವು ಹೊಂದಿದ್ದರು. 1 ಕೋಟಿ ರೂಪಾಯಿ ಸಂಭಾವನೆ (KK Remuneration) ಕೊಟ್ಟರೂ ಕೂಡ ಮದುವೆ ಸಮಾರಂಭಗಳಲ್ಲಿ ಹಾಡುವುದಿಲ್ಲ ಎಂದು ಅವರು ಈ ಹಿಂದೆ ಹೇಳಿದ್ದರು.

ದೊಡ್ಡ ದೊಡ್ಡ ಉದ್ಯಮಿಗಳ ಮದುವೆಯಲ್ಲಿ ಬಾಲಿವುಡ್​ ಸೆಲೆಬ್ರಟಿಗಳು, ಖ್ಯಾತ ಗಾಯಕರು ಮನರಂಜನಾ ಕಾರ್ಯಕ್ರಮ ನೀಡುತ್ತಾರೆ. ಅದಕ್ಕಾಗಿ ಅವರಿಗೆ ಕೈ ತುಂಬ ಸಂಭಾವನೆ ಕೂಡ ಸಿಗುತ್ತದೆ. ಆದರೆ ಕೆಲವು ಸೆಲೆಬ್ರಿಟಿಗಳು ಈ ರೀತಿಯ ಕಾರ್ಯಕ್ರಮಗಳನ್ನು ಒಪ್ಪಿಕೊಳ್ಳುವುದಿಲ್ಲ. ಗಾಯಕ ಕೆಕೆ ಕೂಡ ಅದೇ ಸಾಲಿಗೆ ಸೇರುವವರಾಗಿದ್ದರು. ಈ ವಿಚಾರದಲ್ಲಿ ತಮ್ಮ ನಿಲುವು ಏನು ಎಂಬುದನ್ನು ಅವರು ಈ ಹಿಂದೆಯೇ ಸ್ಪಷ್ಟವಾಗಿ ತಿಳಿಸಿದ್ದರು.

2008ರಲ್ಲಿ ಹಿಂದುಸ್ತಾನ್​ ಟೈಮ್ಸ್​ಗೆ ನೀಡಿದ ಸಂದರ್ಶನದಲ್ಲಿ ಕೆಕೆ ಅವರು ಈ ವಿಚಾರ ತಿಳಿಸಿದ್ದರು. ‘ನೀವು ಯಾವುದಾದರೂ ಆಫರ್​ ಅನ್ನು ತಿರಸ್ಕರಿಸಿದ್ದು ಇದೆಯೇ?’ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಕೆಕೆ ಅವರು, ‘ಹೌದು, ಒಂದು ಕೋಟಿ ರೂಪಾಯಿ ಸಂಭಾವನೆ ನೀಡಿದರೂ ಕೂಡ ಮದುವೆ ಸಮಾರಂಭಗಳಲ್ಲಿ ಹಾಡಲು ನಾನು ಒಪ್ಪಿಕೊಳ್ಳುವುದಿಲ್ಲ’ ಎಂದು ಹೇಳಿದ್ದರು.

ಇದನ್ನೂ ಓದಿ
Image
Singer KK Death: ಕೋಲ್ಕತ್ತಾದಲ್ಲಿ ಸಂಗೀತ ಕಾರ್ಯಕ್ರಮ ನೀಡಿದ ನಂತರ 53 ವರ್ಷದ ಗಾಯಕ ಕೆಕೆ ಕುಸಿದು ಬಿದ್ದು ಸಾವು
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​
Image
Anekal Balaraj Death: ‘ಕರಿಯ’ ಸಿನಿಮಾ ನಿರ್ಮಾಪಕ ಆನೇಕಲ್​ ಬಾಲರಾಜ್​ ಇನ್ನಿಲ್ಲ; ಬೆಂಗಳೂರಿನಲ್ಲಿ ಅಪಘಾತದಿಂದ ನಿಧನ
Image
ಅಪ್ಪು ಹುಟ್ಟುಹಬ್ಬ ಮಾಡುವಾಗ ಕುಸಿದು ಬಿದ್ದಿದ್ದ ಅಭಿಮಾನಿ ಹೃದಯಾಘಾತದಿಂದ ಸಾವು; ಅಯ್ಯೋ ವಿಧಿಯೇ..

ಅನೇಕ ಗಾಯಕರು ಸಿನಿಮಾದಲ್ಲಿ ಹೀರೋ ಆದ ಉದಾಹರಣೆ ಇದೆ. ಆದರೆ ಕೆಕೆ ಅವರು ಅಂಥ ಒಂದು ಅವಕಾಶವನ್ನು ಕೂಡ ಸ್ವೀಕರಿಸಿರಲಿಲ್ಲ. ‘ಸಿನಿಮಾದಲ್ಲಿ ನಟಿಸುವಂತೆ ಒಮ್ಮೆ ನನಗೆ ಆಫರ್​ ಬಂದಿತ್ತು. ಕಡಿಮೆ ಹಣಕ್ಕಾಗಿ ನಾನು ನಟಿಸಲಾರೆ. ಹಾಗಾಗಿ ಅಂಥ ಆಫರ್​ ಅನ್ನು ನಾನು ತಿರಸ್ಕರಿಸಿದ್ದೆ’ ಎಂದು ಕೆಕೆ ಹೇಳಿದ್ದರು. ಕನ್ನಡ, ಹಿಂದಿ, ತಮಿಳು, ತೆಲುಗು ಸೇರಿದಂತೆ ಅನೇಕ ಭಾಷೆಗಳಲ್ಲಿ ಹಾಡುಗಳನ್ನು ಹೇಳಿದ್ದ ಕೆಕೆ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:21 am, Wed, 1 June 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ