Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ಕಿಂಚಿತ್ತೂ ಚೆನ್ನಾಗಿಲ್ಲ ಎಂದು ನೆಗೆಟಿವ್​ ಪ್ರಚಾರ; ಇದರ ಹಿಂದೆ ಯಾರ ಹುನ್ನಾರ?

Samrat Prithviraj: ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರವನ್ನು ಕೆಲವರು ತೆಗಳಿದ್ದಾರೆ. ಉದ್ದೇಶಪೂರ್ವಕವಾಗಿಯೇ ಈ ರೀತಿ ನೆಗೆಟಿವ್​ ವಿಮರ್ಶೆ ನೀಡಲಾಗಿದೆ ಎಂದು ಅಕ್ಷಯ್​ ಕುಮಾರ್​ ಫ್ಯಾನ್ಸ್​ ಆರೋಪಿಸುತ್ತಿದ್ದಾರೆ.

‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ಕಿಂಚಿತ್ತೂ ಚೆನ್ನಾಗಿಲ್ಲ ಎಂದು ನೆಗೆಟಿವ್​ ಪ್ರಚಾರ; ಇದರ ಹಿಂದೆ ಯಾರ ಹುನ್ನಾರ?
ಅಕ್ಷಯ್ ಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on:Jun 03, 2022 | 9:43 AM

2022ನೇ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಸಾಮ್ರಾಟ್​ ಪೃಥ್ವಿರಾಜ್​’ (Samrat Prithviraj) ಚಿತ್ರ ಕೂಡ ಪ್ರಮುಖವಾದದ್ದು. ಈ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ (Akshay Kumar) ಅವರು ಪ್ರಮುಖ ಪಾತ್ರ ನಿಭಾಯಿಸಿದ್ದಾರೆ. ಚಂದ್ರಪ್ರಕಾಶ್​ ದ್ವಿವೇದಿ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಸಿನಿಮಾ ನೋಡಿರುವ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಉತ್ತರ ಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರಕ್ಕೆ ತೆರಿಗೆ ವಿನಾಯಿತಿ ಕೂಡ ನೀಡಲಾಗಿದೆ. ಆದರೆ ಈ ಸಿನಿಮಾ ಬಗ್ಗೆ ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ನೆಗೆಟಿವ್​ ಪ್ರಚಾರ ಮಾಡುತ್ತಿದ್ದಾರೆ. ಇದೆಲ್ಲವೂ ಅಕ್ಷಯ್​ ಕುಮಾರ್​ ಅವರ ವಿರೋಧಿಗಳ ಹುನ್ನಾರ ಎಂದು ಹೇಳಲಾಗುತ್ತಿದೆ. ಇಂದು (ಜೂನ್​ 3) ಈ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಿದೆ. ಚಿತ್ರದ ಬಗ್ಗೆ ಟ್ವಿಟರ್​ನಲ್ಲಿ ಕೆಲವರು ಕೆಟ್ಟದಾಗಿ ಪೋಸ್ಟ್​ (Samrat Prithviraj Twitter Review) ಮಾಡುತ್ತಿದ್ದಾರೆ. ಬೇಕಂತಲೇ ಈ ಸಿನಿಮಾವನ್ನು ಟಾರ್ಗೆಟ್​ ಮಾಡಲಾಗಿದೆ ಎಂಬ ಅನುಮಾನ ಮೂಡುತ್ತಿದೆ. ಆ ರೀತಿಯಲ್ಲಿ ಅನೇಕ ಟ್ವೀಟ್​ಗಳು ವೈರಲ್​ ಆಗಿವೆ.

ಅದ್ದೂರಿ ಬಜೆಟ್​ನಲ್ಲಿ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾ ಮೂಡಿಬಂದಿದೆ. ಮೇಕಿಂಗ್​ ಗುಣಮಟ್ಟದ ಬಗ್ಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಕೆಲವರು ಈ ಚಿತ್ರವನ್ನು ಸಂಪೂರ್ಣವಾಗಿ ಕಳಪೆ ಎಂದು ಜರಿಯುತ್ತಿದ್ದಾರೆ. ಈ ಸಿನಿಮಾ ನೋಡಿ ತೀವ್ರ ನಿರಾಸೆ ಆಯಿತು ಎಂದು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
Yogi Adityanath: ಅಕ್ಷಯ್​ ಕುಮಾರ್ ನಟನೆಯ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ
Image
‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ನೋಡಿ ಪತ್ನಿ ಎದುರು ಅಕ್ಷಯ್​ ಕುಮಾರ್​ ರೀತಿ ಡೈಲಾಗ್​ ಹೊಡೆದ ಅಮಿತ್​ ಶಾ
Image
ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್​ ಕುಮಾರ್​; ಇದು ಗುಟ್ಕಾ ಎಫೆಕ್ಟ್​ ಎಂದ ನೆಟ್ಟಿಗರು
Image
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು

‘ಕಳಪೆ ಚಿತ್ರಕಥೆ, ಕೆಟ್ಟ ನಿರ್ದೇಶನ, ಇದು ಅಕ್ಷಯ್​ ಕುಮಾರ್​ ಅವರ ದುರ್ಬಲ ಸಿನಿಮಾ. ಕೇವಲ ಅರ್ಧ ಸ್ಟಾರ್​ ಕೊಡಬಹುದು’ ಎಂದು ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ. ಈ ಸಿನಿಮಾವನ್ನು ಬಹಿಷ್ಕಾರ ಮಾಡಬೇಕು ಎಂದು ಕೂಡ ಹ್ಯಾಶ್​ಟ್ಯಾಗ್​ ಅಭಿಯಾನ ಮಾಡಲಾಗಿದೆ. ಉದ್ದೇಶಪೂರ್ವಕವಾಗಿಯೇ ಈ ರೀತಿ ನೆಗೆಟಿವ್​ ವಿಮರ್ಶೆ ನೀಡಲಾಗಿದೆ ಎಂದು ಅಕ್ಷಯ್​ ಕುಮಾರ್​ ಫ್ಯಾನ್ಸ್​ ಆರೋಪಿಸುತ್ತಿದ್ದಾರೆ.

ಮಾನುಷಿ ಚಿಲ್ಲರ್​ ಅವರು ಅಕ್ಷಯ್​ ಕುಮಾರ್​ಗೆ ಜೋಡಿಯಾಗಿ ನಟಿಸಿದ್ದಾರೆ. ಇಬ್ಬರ ನಡುವೆ ವಯಸ್ಸಿನ ಅಂತರ ಇದೆ. ಅಕ್ಷಯ್​ ಕುಮಾರ್​ ಅವರಿಗೆ 54 ವರ್ಷ ವಯಸ್ಸು. ಮಾನುಷಿ ಚಿಲ್ಲರ್​ ಅವರಿಗೆ ಈಗಷ್ಟೇ 25ರ ಪ್ರಾಯ. ಹಾಗಾಗಿ ಇಬ್ಬರ ಜೋಡಿಯೇ ಸೂಕ್ತವಲ್ಲ ಎಂದು ಕೂಡ ಒಂದು ವರ್ಗದ ನೆಟ್ಟಿಗರು ಕಾಲೆಳೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:43 am, Fri, 3 June 22

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್