AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ಕಿಂಚಿತ್ತೂ ಚೆನ್ನಾಗಿಲ್ಲ ಎಂದು ನೆಗೆಟಿವ್​ ಪ್ರಚಾರ; ಇದರ ಹಿಂದೆ ಯಾರ ಹುನ್ನಾರ?

Samrat Prithviraj: ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರವನ್ನು ಕೆಲವರು ತೆಗಳಿದ್ದಾರೆ. ಉದ್ದೇಶಪೂರ್ವಕವಾಗಿಯೇ ಈ ರೀತಿ ನೆಗೆಟಿವ್​ ವಿಮರ್ಶೆ ನೀಡಲಾಗಿದೆ ಎಂದು ಅಕ್ಷಯ್​ ಕುಮಾರ್​ ಫ್ಯಾನ್ಸ್​ ಆರೋಪಿಸುತ್ತಿದ್ದಾರೆ.

‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ಕಿಂಚಿತ್ತೂ ಚೆನ್ನಾಗಿಲ್ಲ ಎಂದು ನೆಗೆಟಿವ್​ ಪ್ರಚಾರ; ಇದರ ಹಿಂದೆ ಯಾರ ಹುನ್ನಾರ?
ಅಕ್ಷಯ್ ಕುಮಾರ್
TV9 Web
| Edited By: |

Updated on:Jun 03, 2022 | 9:43 AM

Share

2022ನೇ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ‘ಸಾಮ್ರಾಟ್​ ಪೃಥ್ವಿರಾಜ್​’ (Samrat Prithviraj) ಚಿತ್ರ ಕೂಡ ಪ್ರಮುಖವಾದದ್ದು. ಈ ಸಿನಿಮಾದಲ್ಲಿ ಅಕ್ಷಯ್​ ಕುಮಾರ್​ (Akshay Kumar) ಅವರು ಪ್ರಮುಖ ಪಾತ್ರ ನಿಭಾಯಿಸಿದ್ದಾರೆ. ಚಂದ್ರಪ್ರಕಾಶ್​ ದ್ವಿವೇದಿ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಸಿನಿಮಾ ನೋಡಿರುವ ಕೇಂದ್ರ ಗೃಹ ಸಚಿವ ಅಮಿತ್​ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಉತ್ತರ ಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರಕ್ಕೆ ತೆರಿಗೆ ವಿನಾಯಿತಿ ಕೂಡ ನೀಡಲಾಗಿದೆ. ಆದರೆ ಈ ಸಿನಿಮಾ ಬಗ್ಗೆ ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ನೆಗೆಟಿವ್​ ಪ್ರಚಾರ ಮಾಡುತ್ತಿದ್ದಾರೆ. ಇದೆಲ್ಲವೂ ಅಕ್ಷಯ್​ ಕುಮಾರ್​ ಅವರ ವಿರೋಧಿಗಳ ಹುನ್ನಾರ ಎಂದು ಹೇಳಲಾಗುತ್ತಿದೆ. ಇಂದು (ಜೂನ್​ 3) ಈ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಿದೆ. ಚಿತ್ರದ ಬಗ್ಗೆ ಟ್ವಿಟರ್​ನಲ್ಲಿ ಕೆಲವರು ಕೆಟ್ಟದಾಗಿ ಪೋಸ್ಟ್​ (Samrat Prithviraj Twitter Review) ಮಾಡುತ್ತಿದ್ದಾರೆ. ಬೇಕಂತಲೇ ಈ ಸಿನಿಮಾವನ್ನು ಟಾರ್ಗೆಟ್​ ಮಾಡಲಾಗಿದೆ ಎಂಬ ಅನುಮಾನ ಮೂಡುತ್ತಿದೆ. ಆ ರೀತಿಯಲ್ಲಿ ಅನೇಕ ಟ್ವೀಟ್​ಗಳು ವೈರಲ್​ ಆಗಿವೆ.

ಅದ್ದೂರಿ ಬಜೆಟ್​ನಲ್ಲಿ ‘ಸಾಮ್ರಾಟ್​ ಪೃಥ್ವಿರಾಜ್​’ ಸಿನಿಮಾ ಮೂಡಿಬಂದಿದೆ. ಮೇಕಿಂಗ್​ ಗುಣಮಟ್ಟದ ಬಗ್ಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಕೆಲವರು ಈ ಚಿತ್ರವನ್ನು ಸಂಪೂರ್ಣವಾಗಿ ಕಳಪೆ ಎಂದು ಜರಿಯುತ್ತಿದ್ದಾರೆ. ಈ ಸಿನಿಮಾ ನೋಡಿ ತೀವ್ರ ನಿರಾಸೆ ಆಯಿತು ಎಂದು ಕೆಲವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
Yogi Adityanath: ಅಕ್ಷಯ್​ ಕುಮಾರ್ ನಟನೆಯ ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ
Image
‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ನೋಡಿ ಪತ್ನಿ ಎದುರು ಅಕ್ಷಯ್​ ಕುಮಾರ್​ ರೀತಿ ಡೈಲಾಗ್​ ಹೊಡೆದ ಅಮಿತ್​ ಶಾ
Image
ಬಾಚಣಿಗೆಯಿಂದ ಹಲ್ಲು ಕೆರೆದುಕೊಂಡ ಅಕ್ಷಯ್​ ಕುಮಾರ್​; ಇದು ಗುಟ್ಕಾ ಎಫೆಕ್ಟ್​ ಎಂದ ನೆಟ್ಟಿಗರು
Image
ಅಜಯ್​ ದೇವಗನ್​ಗೆ ಅಕ್ಷಯ್​ ಕುಮಾರ್ ಬೆಂಬಲ; ‘ಗುಟ್ಕಾ ಗ್ಯಾಂಗ್​’ ಎಂದು ತಿರುಗೇಟು ನೀಡಿದ ನೆಟ್ಟಿಗರು

‘ಕಳಪೆ ಚಿತ್ರಕಥೆ, ಕೆಟ್ಟ ನಿರ್ದೇಶನ, ಇದು ಅಕ್ಷಯ್​ ಕುಮಾರ್​ ಅವರ ದುರ್ಬಲ ಸಿನಿಮಾ. ಕೇವಲ ಅರ್ಧ ಸ್ಟಾರ್​ ಕೊಡಬಹುದು’ ಎಂದು ನೆಟ್ಟಿಗರೊಬ್ಬರು ಟ್ವೀಟ್​ ಮಾಡಿದ್ದಾರೆ. ಈ ಸಿನಿಮಾವನ್ನು ಬಹಿಷ್ಕಾರ ಮಾಡಬೇಕು ಎಂದು ಕೂಡ ಹ್ಯಾಶ್​ಟ್ಯಾಗ್​ ಅಭಿಯಾನ ಮಾಡಲಾಗಿದೆ. ಉದ್ದೇಶಪೂರ್ವಕವಾಗಿಯೇ ಈ ರೀತಿ ನೆಗೆಟಿವ್​ ವಿಮರ್ಶೆ ನೀಡಲಾಗಿದೆ ಎಂದು ಅಕ್ಷಯ್​ ಕುಮಾರ್​ ಫ್ಯಾನ್ಸ್​ ಆರೋಪಿಸುತ್ತಿದ್ದಾರೆ.

ಮಾನುಷಿ ಚಿಲ್ಲರ್​ ಅವರು ಅಕ್ಷಯ್​ ಕುಮಾರ್​ಗೆ ಜೋಡಿಯಾಗಿ ನಟಿಸಿದ್ದಾರೆ. ಇಬ್ಬರ ನಡುವೆ ವಯಸ್ಸಿನ ಅಂತರ ಇದೆ. ಅಕ್ಷಯ್​ ಕುಮಾರ್​ ಅವರಿಗೆ 54 ವರ್ಷ ವಯಸ್ಸು. ಮಾನುಷಿ ಚಿಲ್ಲರ್​ ಅವರಿಗೆ ಈಗಷ್ಟೇ 25ರ ಪ್ರಾಯ. ಹಾಗಾಗಿ ಇಬ್ಬರ ಜೋಡಿಯೇ ಸೂಕ್ತವಲ್ಲ ಎಂದು ಕೂಡ ಒಂದು ವರ್ಗದ ನೆಟ್ಟಿಗರು ಕಾಲೆಳೆದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:43 am, Fri, 3 June 22

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?